<p><strong>ಬೆಂಗಳೂರು</strong>: ‘ಕಾನೂನು ಕ್ಷೇತ್ರದಲ್ಲಿ ವ್ಯಾಪಕ ಬದಲಾವಣೆಗಳಾಗುತ್ತಿದ್ದು, ಇದಕ್ಕೆ ತಕ್ಕಂತೆ ಕಾನೂನು ವಿದ್ಯಾರ್ಥಿಗಳು ವೃತ್ತಿ ಜೀವನದ ಸವಾಲುಗಳನ್ನು ಎದುರಿಸಲು ಸಜ್ಜಾಗಬೇಕು’ ಎಂದು ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ. ಬಸವರಾಜು ಸಲಹೆ ನೀಡಿದರು.</p>.<p>ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ನಾಗಸಂದ್ರದ ಸೌಂದರ್ಯ ಕಾನೂನು ಕಾಲೇಜು ಗುರುವಾರ ಹಮ್ಮಿಕೊಂಡಿದ್ದ ಕಾನೂನು ವೃತ್ತಿಪರರಿಗೆ ಮಾರ್ಗದರ್ಶನ ಕುರಿತ ಕಾರ್ಯಾಗಾರದಲ್ಲಿ ಭಾಗವಹಿಸಿ, ಅವರು ಮಾತನಾಡಿದರು.</p>.<p>‘ವಕೀಲರ ವೃತ್ತಿಜೀವನ ವ್ಯಾಪಕವಾಗಿ ವಿಕಸನಗೊಳ್ಳುತ್ತಿದ್ದು, ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವುದನ್ನು ಕಲಿಯಬೇಕು. ಅವಕಾಶಗಳ ಅನ್ವೇಷಣೆಗೂ ಒತ್ತು ನೀಡಬೇಕು. ಆಳವಾದ ಅಧ್ಯಯನ ಇಂದಿನ ಅಗತ್ಯವಾಗಿದ್ದು, ಅವಕಾಶಗಳ ಬಾಗಿಲು ತೆರೆಯುತ್ತಿದ್ದಂತೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು’ ಎಂದರು.</p>.<p>ವಕೀಲ ಬಿ.ಆರ್. ದೀಪಕ್ ಮಾತನಾಡಿ, ‘ವೃತ್ತಿಯಲ್ಲಿ ಮುಂದುವರೆಯಲು ಸೂಕ್ತ ಯೋಜನೆಯನ್ನು ರೂಪಿಸಿಕೊಳ್ಳಬೇಕು. ಕಾನೂನು ವಲಯದ ವಿವಿಧ ವೃತ್ತಿ ವಿಧಾನಗಳ ಕುರಿತು ಅರ್ಥಮಾಡಿಕೊಳ್ಳುವುದು ಸೂಕ್ತ’ ಎಂದು ಹೇಳಿದರು.</p>.<p>ಡಾ. ರಾಮ್ ಮನೋಹರ ಲೋಹಿಯಾ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಜಿ. ರಮೇಶ್ ಮಾತನಾಡಿ, ‘ವಕೀಲಿ ವೃತ್ತಿಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು. ವೃತ್ತಿಪರ ನಡವಳಿಕೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು’ ಎಂದರು.</p>.<p>ಮಣಿಪಾಲ್ ಸ್ಕೂಲ್ ಆಫ್ ಲಾದ ಸಹಾಯಕ ಪ್ರಾಧ್ಯಾಪಕ ಪವನ್ ಮಾತನಾಡಿ, ‘ಕಾನೂನು ಪದವೀಧರರಿಗೆ ವಿಪುಲ ಅವಕಾಶಗಳಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಸೌಂದರ್ಯ ಎಜುಕೇಶನ್ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೀರ್ತನ್ ಕುಮಾರ್, ಪ್ರಭಾರಿ ಪ್ರಾಂಶುಪಾಲ ಹನುಮಂತೇಗೌಡ, ಉಪ ಪ್ರಾಂಶುಪಾಲ ಶ್ವಾಸ್ ಪುಟ್ಟಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಾನೂನು ಕ್ಷೇತ್ರದಲ್ಲಿ ವ್ಯಾಪಕ ಬದಲಾವಣೆಗಳಾಗುತ್ತಿದ್ದು, ಇದಕ್ಕೆ ತಕ್ಕಂತೆ ಕಾನೂನು ವಿದ್ಯಾರ್ಥಿಗಳು ವೃತ್ತಿ ಜೀವನದ ಸವಾಲುಗಳನ್ನು ಎದುರಿಸಲು ಸಜ್ಜಾಗಬೇಕು’ ಎಂದು ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ. ಬಸವರಾಜು ಸಲಹೆ ನೀಡಿದರು.</p>.<p>ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ನಾಗಸಂದ್ರದ ಸೌಂದರ್ಯ ಕಾನೂನು ಕಾಲೇಜು ಗುರುವಾರ ಹಮ್ಮಿಕೊಂಡಿದ್ದ ಕಾನೂನು ವೃತ್ತಿಪರರಿಗೆ ಮಾರ್ಗದರ್ಶನ ಕುರಿತ ಕಾರ್ಯಾಗಾರದಲ್ಲಿ ಭಾಗವಹಿಸಿ, ಅವರು ಮಾತನಾಡಿದರು.</p>.<p>‘ವಕೀಲರ ವೃತ್ತಿಜೀವನ ವ್ಯಾಪಕವಾಗಿ ವಿಕಸನಗೊಳ್ಳುತ್ತಿದ್ದು, ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವುದನ್ನು ಕಲಿಯಬೇಕು. ಅವಕಾಶಗಳ ಅನ್ವೇಷಣೆಗೂ ಒತ್ತು ನೀಡಬೇಕು. ಆಳವಾದ ಅಧ್ಯಯನ ಇಂದಿನ ಅಗತ್ಯವಾಗಿದ್ದು, ಅವಕಾಶಗಳ ಬಾಗಿಲು ತೆರೆಯುತ್ತಿದ್ದಂತೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು’ ಎಂದರು.</p>.<p>ವಕೀಲ ಬಿ.ಆರ್. ದೀಪಕ್ ಮಾತನಾಡಿ, ‘ವೃತ್ತಿಯಲ್ಲಿ ಮುಂದುವರೆಯಲು ಸೂಕ್ತ ಯೋಜನೆಯನ್ನು ರೂಪಿಸಿಕೊಳ್ಳಬೇಕು. ಕಾನೂನು ವಲಯದ ವಿವಿಧ ವೃತ್ತಿ ವಿಧಾನಗಳ ಕುರಿತು ಅರ್ಥಮಾಡಿಕೊಳ್ಳುವುದು ಸೂಕ್ತ’ ಎಂದು ಹೇಳಿದರು.</p>.<p>ಡಾ. ರಾಮ್ ಮನೋಹರ ಲೋಹಿಯಾ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಜಿ. ರಮೇಶ್ ಮಾತನಾಡಿ, ‘ವಕೀಲಿ ವೃತ್ತಿಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು. ವೃತ್ತಿಪರ ನಡವಳಿಕೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು’ ಎಂದರು.</p>.<p>ಮಣಿಪಾಲ್ ಸ್ಕೂಲ್ ಆಫ್ ಲಾದ ಸಹಾಯಕ ಪ್ರಾಧ್ಯಾಪಕ ಪವನ್ ಮಾತನಾಡಿ, ‘ಕಾನೂನು ಪದವೀಧರರಿಗೆ ವಿಪುಲ ಅವಕಾಶಗಳಿವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಸೌಂದರ್ಯ ಎಜುಕೇಶನ್ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೀರ್ತನ್ ಕುಮಾರ್, ಪ್ರಭಾರಿ ಪ್ರಾಂಶುಪಾಲ ಹನುಮಂತೇಗೌಡ, ಉಪ ಪ್ರಾಂಶುಪಾಲ ಶ್ವಾಸ್ ಪುಟ್ಟಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>