<p><strong>ಬೆಂಗಳೂರು</strong>: ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ಒದಗಿಸುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆಗೆ ವಿಶ್ವವೇ ಬೆರಗಾಗಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದರು.</p>.<p>‘ರಾಮನ್ ರೀಸರ್ಚ್ ಇನ್ಸ್ಟಿಟ್ಯೂಟ್‘ನ ಅಮೃತ ಮಹೋತ್ಸವದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>ಭಾರತದಲ್ಲಿ ವಿಜ್ಞಾನ, ತಂತ್ರಜ್ಞಾನದ ಬೆಳೆವಣಿಗೆ ವೇಗ ಪಡೆದಿದೆ. ಚಂದ್ರಯಾನದಂತಹ ಕಾರ್ಯಕ್ರಮಗಳು ಯಶಸ್ವಿಯಾಗಿವೆ. 2047ರ ಭಾರತ ವಿಶ್ವದ ಅತ್ಯಂತ ಬಲಿಷ್ಠ ದೇಶವಾಗಲಿದೆ ಎಂದರು. </p>.<p>‘1948ರಲ್ಲಿ ಸ್ಥಾಪನೆಯಾಗಿದ್ದ ರಾಮನ್ ಇನ್ಸ್ಟಿಟ್ಯೂಟ್ ದೇಶದ ಹೆಮ್ಮೆಯ ಸಂಸ್ಥೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಚಂದ್ರಯಾನ, ಆದಿತ್ಯ ಎಲ್–1 ಸೇರಿದಂತೆ ಭಾರತದ ಬಾಹ್ಯಾಕಾಶ ಯೋಜನೆಗಳಲ್ಲಿ ಸಂಸ್ಥೆಯ ವಿಜ್ಞಾನಿಗಳು ಭಾಗಿಯಾಗಿದ್ದಾರೆ. ವಿಜ್ಞಾನ ಕ್ಷೇತ್ರಕ್ಕೆ ಅಪರಿಮಿತ ಕೊಡುಗೆ ನೀಡಿದ್ದಾರೆ’ ಎಂದು ಬಣ್ಣಿಸಿದರು.</p>.<p>‘ದೇಶದ ಸಾಮೂಹಿಕ ಬೆಳವಣಿಗೆಗೆ ವಿಜ್ಞಾನಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಬೇಕು. ಸಿ.ವಿ.ರಾಮನ್ ಅವರ ದೂರದೃಷ್ಟಿ ಅಳವಡಿಸಿಕೊಳ್ಳಬೇಕು’ ಎಂದೂ ಸಲಹೆ ನೀಡಿದರು.</p>.<p>ಹೋಮಿ ಭಾಭಾ ನ್ಯಾಷನಲ್ ಇನ್ಸ್ಟಿಟ್ಯೂಟ್ ಕುಲಪತಿ ಅನಿಲ್ ಕಾಕೋಡ್ಕರ್, ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ಒದಗಿಸುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆಗೆ ವಿಶ್ವವೇ ಬೆರಗಾಗಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದರು.</p>.<p>‘ರಾಮನ್ ರೀಸರ್ಚ್ ಇನ್ಸ್ಟಿಟ್ಯೂಟ್‘ನ ಅಮೃತ ಮಹೋತ್ಸವದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>ಭಾರತದಲ್ಲಿ ವಿಜ್ಞಾನ, ತಂತ್ರಜ್ಞಾನದ ಬೆಳೆವಣಿಗೆ ವೇಗ ಪಡೆದಿದೆ. ಚಂದ್ರಯಾನದಂತಹ ಕಾರ್ಯಕ್ರಮಗಳು ಯಶಸ್ವಿಯಾಗಿವೆ. 2047ರ ಭಾರತ ವಿಶ್ವದ ಅತ್ಯಂತ ಬಲಿಷ್ಠ ದೇಶವಾಗಲಿದೆ ಎಂದರು. </p>.<p>‘1948ರಲ್ಲಿ ಸ್ಥಾಪನೆಯಾಗಿದ್ದ ರಾಮನ್ ಇನ್ಸ್ಟಿಟ್ಯೂಟ್ ದೇಶದ ಹೆಮ್ಮೆಯ ಸಂಸ್ಥೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಚಂದ್ರಯಾನ, ಆದಿತ್ಯ ಎಲ್–1 ಸೇರಿದಂತೆ ಭಾರತದ ಬಾಹ್ಯಾಕಾಶ ಯೋಜನೆಗಳಲ್ಲಿ ಸಂಸ್ಥೆಯ ವಿಜ್ಞಾನಿಗಳು ಭಾಗಿಯಾಗಿದ್ದಾರೆ. ವಿಜ್ಞಾನ ಕ್ಷೇತ್ರಕ್ಕೆ ಅಪರಿಮಿತ ಕೊಡುಗೆ ನೀಡಿದ್ದಾರೆ’ ಎಂದು ಬಣ್ಣಿಸಿದರು.</p>.<p>‘ದೇಶದ ಸಾಮೂಹಿಕ ಬೆಳವಣಿಗೆಗೆ ವಿಜ್ಞಾನಿಗಳು ಮತ್ತು ವೈಜ್ಞಾನಿಕ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಬೇಕು. ಸಿ.ವಿ.ರಾಮನ್ ಅವರ ದೂರದೃಷ್ಟಿ ಅಳವಡಿಸಿಕೊಳ್ಳಬೇಕು’ ಎಂದೂ ಸಲಹೆ ನೀಡಿದರು.</p>.<p>ಹೋಮಿ ಭಾಭಾ ನ್ಯಾಷನಲ್ ಇನ್ಸ್ಟಿಟ್ಯೂಟ್ ಕುಲಪತಿ ಅನಿಲ್ ಕಾಕೋಡ್ಕರ್, ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>