<p><strong>ನೆಲಮಂಗಲ:</strong> ಇಲ್ಲಿಗೆ ಸಮೀಪದ ಕನ್ನಮಂಗಲ ಗೇಟ್ ಬಳಿಯ ಅಮ್ಮನಗುಡ್ಡದ ಆದಿಶಕ್ತಿ ದೇವಿಗೆ ಸಂಕ್ರಾಂತಿ ಪ್ರಯುಕ್ತ ವಿಶೇಷವಾಗಿ ನವಧಾನ್ಯಗಳು, ಎಳನೀರು, ಕಬ್ಬಿನ ಹಾಲು ಹಾಗೂ ಪಂಚಾಮೃತ ಅಭಿಷೇಕ ಮಾಡಲಾಯಿತು.</p>.<p>ನೂರಾರು ಭಕ್ತರ ಸಮ್ಮುಖದಲ್ಲಿ ಮೂರು ಗಂಟೆ ನಡೆದ ಅಭಿಷೇಕದ ಅವಧಿಯಲ್ಲಿ ದರ್ಪಣದ(ಕನ್ನಡಿ) ಸಹಾಯದಿಂದ ಸೂರ್ಯ ರಶ್ಮಿಯನ್ನು ಆದಿಶಕ್ತಿ ದೇವಿ ಮೂರ್ತಿಗೆ ಸ್ಪರ್ಶಿಸುವುದನ್ನು ಭಕ್ತರು ಕಣ್ತುಂಬಿಕೊಂಡು ಸಂಭ್ರಮಿಸಿದರು.</p>.<p>ಅಭಿಷೇಕದ ಎಳನೀರು, ನವಧಾನ್ಯದ ಪೊಟ್ಟಣಗಳನ್ನು ತೀರ್ಥ ಪ್ರಸಾದವನ್ನಾಗಿ ವಿತರಿಸಲಾಯಿತು. ಸುಮಂಗಲಿಯರಿಗೆ ಬಾಗಿನ ನೀಡಲಾಯಿತು. ಸಾವಿರಾರು ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನ ಅರ್ಚಕರಾದ ನರಸಿಂಹಮೂರ್ತಿ ದೇವಾಲಯದ ದಿನದರ್ಶಿಕೆಯೊಂದಿಗೆ ಅಭಿಷೇಕದ ನವಧಾನ್ಯಗಳ ಪೊಟ್ಟಣಗಳನ್ನು ವಿತರಿಸಿದರು.</p>.<p>ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಚುಂಚೇಗೌಡ ಭಾಗವಹಿಸಿದ್ದರು.</p>.<p>ಪಟ್ಟಣದ ಅಯ್ಯಪ್ಪಸ್ವಾಮಿ, ಬಿನ್ನಮಂಗಲದ ಮುಕ್ತಿನಾಥೇಶ್ವರ, ಮಹಾಲಿಂಗೇಶ್ವರ, ವೆಂಕಟರಮಣಸ್ವಾಮಿ, ಕಾಶಿ ವಿಶ್ವನಾಥ ದೇವಾಲಯಗಳಲ್ಲಿ ವಿಶೇಷ ಪೂಜೆ ಪ್ರಸಾದ ವಿತರಿಸಲಾಯಿತು. ಸಂಜೆ ಬೆಳ್ಳಿ ಅಲಂಕೃತ ರಥದಲ್ಲಿ ಅಯ್ಯಪ್ಪಸ್ವಾಮಿ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಇಲ್ಲಿಗೆ ಸಮೀಪದ ಕನ್ನಮಂಗಲ ಗೇಟ್ ಬಳಿಯ ಅಮ್ಮನಗುಡ್ಡದ ಆದಿಶಕ್ತಿ ದೇವಿಗೆ ಸಂಕ್ರಾಂತಿ ಪ್ರಯುಕ್ತ ವಿಶೇಷವಾಗಿ ನವಧಾನ್ಯಗಳು, ಎಳನೀರು, ಕಬ್ಬಿನ ಹಾಲು ಹಾಗೂ ಪಂಚಾಮೃತ ಅಭಿಷೇಕ ಮಾಡಲಾಯಿತು.</p>.<p>ನೂರಾರು ಭಕ್ತರ ಸಮ್ಮುಖದಲ್ಲಿ ಮೂರು ಗಂಟೆ ನಡೆದ ಅಭಿಷೇಕದ ಅವಧಿಯಲ್ಲಿ ದರ್ಪಣದ(ಕನ್ನಡಿ) ಸಹಾಯದಿಂದ ಸೂರ್ಯ ರಶ್ಮಿಯನ್ನು ಆದಿಶಕ್ತಿ ದೇವಿ ಮೂರ್ತಿಗೆ ಸ್ಪರ್ಶಿಸುವುದನ್ನು ಭಕ್ತರು ಕಣ್ತುಂಬಿಕೊಂಡು ಸಂಭ್ರಮಿಸಿದರು.</p>.<p>ಅಭಿಷೇಕದ ಎಳನೀರು, ನವಧಾನ್ಯದ ಪೊಟ್ಟಣಗಳನ್ನು ತೀರ್ಥ ಪ್ರಸಾದವನ್ನಾಗಿ ವಿತರಿಸಲಾಯಿತು. ಸುಮಂಗಲಿಯರಿಗೆ ಬಾಗಿನ ನೀಡಲಾಯಿತು. ಸಾವಿರಾರು ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನ ಅರ್ಚಕರಾದ ನರಸಿಂಹಮೂರ್ತಿ ದೇವಾಲಯದ ದಿನದರ್ಶಿಕೆಯೊಂದಿಗೆ ಅಭಿಷೇಕದ ನವಧಾನ್ಯಗಳ ಪೊಟ್ಟಣಗಳನ್ನು ವಿತರಿಸಿದರು.</p>.<p>ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಚುಂಚೇಗೌಡ ಭಾಗವಹಿಸಿದ್ದರು.</p>.<p>ಪಟ್ಟಣದ ಅಯ್ಯಪ್ಪಸ್ವಾಮಿ, ಬಿನ್ನಮಂಗಲದ ಮುಕ್ತಿನಾಥೇಶ್ವರ, ಮಹಾಲಿಂಗೇಶ್ವರ, ವೆಂಕಟರಮಣಸ್ವಾಮಿ, ಕಾಶಿ ವಿಶ್ವನಾಥ ದೇವಾಲಯಗಳಲ್ಲಿ ವಿಶೇಷ ಪೂಜೆ ಪ್ರಸಾದ ವಿತರಿಸಲಾಯಿತು. ಸಂಜೆ ಬೆಳ್ಳಿ ಅಲಂಕೃತ ರಥದಲ್ಲಿ ಅಯ್ಯಪ್ಪಸ್ವಾಮಿ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>