ಕರ್ನಾಟಕ ವಿದ್ಯುತ್ ಮಂಡಳಿಯಲ್ಲಿ ಕಿರಿಯ ಎಂಜಿನಿಯರ್ ಹುದ್ದೆಗೆ 1984ರಲ್ಲಿ ಸೇರಿದ್ದ ರಾಮಲಿಂಗಯ್ಯ, ನಂತರ ಬೆಸ್ಕಾಂಗೆ ವರ್ಗಾವಣೆಯಾಗಿದ್ದರು. ಅಲ್ಲಿಂದ ಲೋಕೋಪಯೋಗಿ ಇಲಾಖೆಯ ವಿದ್ಯುತ್ ವಿಭಾಗದಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಆರೋಪದಡಿ ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, 2011ರ ಸೆಪ್ಟೆಂಬರ್ 30ರಂದು ಅವರ ಮನೆ, ಕಚೇರಿಗಳಲ್ಲಿ ಶೋಧ ನಡೆಸಿದ್ದರು.