<p><strong>ಕೆ.ಆರ್.ಪುರ:</strong> ‘ಪ್ರತಿಯೊಬ್ಬರೂ ಸನ್ಮಾರ್ಗದ ಪರಿಕಲ್ಪನೆಯನ್ನು ಬಿತ್ತುವಂತಹ ಕೆಲಸ ಮಾಡಬೇಕು’ ಎಂದು ಉಡುಪಿ ಪೇಜಾವರ ಮಠ ಪೀಠಾಧ್ಯಕ್ಷರಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.</p>.<p>ಮಹದೇವಪುರ ವಿಧಾನಸಭಾ ಕ್ಷೇತ್ರದ ವರ್ತೂರಿನಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ತಿನ ಸಹಯೋಗದಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ಮಾನವೀಯತೆಯ ಮೌಲ್ಯವನ್ನು ಬೆಳೆಸಿಕೊಂಡು, ಮತ್ತೊಬ್ಬರಿಗೆ ನೆರವಾಗುವ ರೀತಿಯಲ್ಲಿ ಸರಳ ಜೀವನ ಶೈಲಿ ರೂಢಿಸಿಕೊಳ್ಳಬೇಕು. ಎಲ್ಲ ಧರ್ಮಗಳನ್ನು ಪ್ರೀತಿಸುವ ಗುಣ ಹೊಂದಬೇಕು’ ಎಂದರು.</p>.<p>‘ಗೋವುಗಳೆಂದರೆ ಪರಮಾತ್ಮನಿಗೆ ಅತ್ಯಂತ ಪ್ರೀತಿ. ಆದಕಾರಣ ಗೋವುಗಳನ್ನು ರಕ್ಷಿಸುವ ಕೆಲಸ ಮಾಡುವ ಮೂಲಕ ಭಗವಂತನ ಅನುಗ್ರಹ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ, ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಕಾರ್ಯದರ್ಶಿ ಜಗನಾಥ್ ಶಾಸ್ತ್ರಿ, ಕಾರ್ಯಕ್ರಮ ಆಯೋಜಕ ಎನ್.ಪಿ.ಮುನಿರಾಜು, ಮುಖಂಡರಾದ ಮನೋಹರರೆಡ್ಡಿ, ರಾಜಾರೆಡ್ಡಿ, ಶ್ರೀಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಪ್ರತಿಯೊಬ್ಬರೂ ಸನ್ಮಾರ್ಗದ ಪರಿಕಲ್ಪನೆಯನ್ನು ಬಿತ್ತುವಂತಹ ಕೆಲಸ ಮಾಡಬೇಕು’ ಎಂದು ಉಡುಪಿ ಪೇಜಾವರ ಮಠ ಪೀಠಾಧ್ಯಕ್ಷರಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.</p>.<p>ಮಹದೇವಪುರ ವಿಧಾನಸಭಾ ಕ್ಷೇತ್ರದ ವರ್ತೂರಿನಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ತಿನ ಸಹಯೋಗದಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ಮಾನವೀಯತೆಯ ಮೌಲ್ಯವನ್ನು ಬೆಳೆಸಿಕೊಂಡು, ಮತ್ತೊಬ್ಬರಿಗೆ ನೆರವಾಗುವ ರೀತಿಯಲ್ಲಿ ಸರಳ ಜೀವನ ಶೈಲಿ ರೂಢಿಸಿಕೊಳ್ಳಬೇಕು. ಎಲ್ಲ ಧರ್ಮಗಳನ್ನು ಪ್ರೀತಿಸುವ ಗುಣ ಹೊಂದಬೇಕು’ ಎಂದರು.</p>.<p>‘ಗೋವುಗಳೆಂದರೆ ಪರಮಾತ್ಮನಿಗೆ ಅತ್ಯಂತ ಪ್ರೀತಿ. ಆದಕಾರಣ ಗೋವುಗಳನ್ನು ರಕ್ಷಿಸುವ ಕೆಲಸ ಮಾಡುವ ಮೂಲಕ ಭಗವಂತನ ಅನುಗ್ರಹ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ, ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಕಾರ್ಯದರ್ಶಿ ಜಗನಾಥ್ ಶಾಸ್ತ್ರಿ, ಕಾರ್ಯಕ್ರಮ ಆಯೋಜಕ ಎನ್.ಪಿ.ಮುನಿರಾಜು, ಮುಖಂಡರಾದ ಮನೋಹರರೆಡ್ಡಿ, ರಾಜಾರೆಡ್ಡಿ, ಶ್ರೀಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>