<p><strong>ಬೆಂಗಳೂರು:</strong> ಚಿನ್ನಾಭರಣ ಅಂಗಡಿಗಳಲ್ಲಿ ಕೆಲಸಗಾರರ ಗಮನವನ್ನು ಬೇರೆಡೆಗೆ ಸೆಳೆದು, ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ನಾಲ್ವರು ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶಹೀದಾ ಬಾನು (34), ಶಬೀನಾ ಬಾನು (20), ಶಫೀವುಲ್ಲಾ (41), ಅಮೀನಾಬಿ (62) ಬಂಧಿತರು.</p>.<p>‘ಠಾಣಾ ವ್ಯಾಪ್ತಿಯ ಚಿನ್ನಾಭರಣ ಮಳಿಗೆಯ ಮಾಲೀಕರೊಬ್ಬರು ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಲಾಯಿತು. ಬಂಧಿತರಿಂದ ₹4.75 ಲಕ್ಷ ಮೌಲ್ಯದ 78 ಗ್ರಾಂ ತೂಕದ ಚಿನ್ನದ ಸರವನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಚಿನ್ನ ಖರೀದಿಸುವ ನೆಪದಲ್ಲಿ ಇಬ್ಬರು ಮಹಿಳೆಯರು ಬುರ್ಖಾ ಧರಿಸಿ ಚಿನ್ನಾಭರಣ ಮಳಿಗೆಗೆ ಬಂದಿದ್ದರು. ಸಿಬ್ಬಂದಿಯೊಬ್ಬರು ಚಿನ್ನಾಭರಣ ತೋರಿಸುತ್ತಿದ್ದ ಸಂದರ್ಭದಲ್ಲಿ ಅವರ ಗಮನವನ್ನು ಬೇರೆಡೆಗೆ ಸೆಳೆದು 78 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದರು’ ಎಂದು ತಿಳಿಸಿದರು.</p>.<p>‘ಇಸ್ರೊ ಲೇಔಟ್ನ ದೇವರಕೆರೆ ಪಕ್ಕದ ಖಾಲಿ ನಿವೇಶನದಲ್ಲಿ ಕಾರು ನಿಲ್ಲಿಸಿಕೊಂಡು ಚರ್ಚಿಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಲಾಯಿತು. ಬಂಧಿತರನ್ನು 8 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕದ್ದ ಚಿನ್ನವನ್ನು ಭರಮಸಾಗರದ ಚಿನ್ನಾಭರಣ ಕೆಲಸಗಾರರೊಬ್ಬರಿಗೆ ಆರೋಪಿಗಳು ಮಾರಾಟ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿನ್ನಾಭರಣ ಅಂಗಡಿಗಳಲ್ಲಿ ಕೆಲಸಗಾರರ ಗಮನವನ್ನು ಬೇರೆಡೆಗೆ ಸೆಳೆದು, ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ನಾಲ್ವರು ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶಹೀದಾ ಬಾನು (34), ಶಬೀನಾ ಬಾನು (20), ಶಫೀವುಲ್ಲಾ (41), ಅಮೀನಾಬಿ (62) ಬಂಧಿತರು.</p>.<p>‘ಠಾಣಾ ವ್ಯಾಪ್ತಿಯ ಚಿನ್ನಾಭರಣ ಮಳಿಗೆಯ ಮಾಲೀಕರೊಬ್ಬರು ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಲಾಯಿತು. ಬಂಧಿತರಿಂದ ₹4.75 ಲಕ್ಷ ಮೌಲ್ಯದ 78 ಗ್ರಾಂ ತೂಕದ ಚಿನ್ನದ ಸರವನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಚಿನ್ನ ಖರೀದಿಸುವ ನೆಪದಲ್ಲಿ ಇಬ್ಬರು ಮಹಿಳೆಯರು ಬುರ್ಖಾ ಧರಿಸಿ ಚಿನ್ನಾಭರಣ ಮಳಿಗೆಗೆ ಬಂದಿದ್ದರು. ಸಿಬ್ಬಂದಿಯೊಬ್ಬರು ಚಿನ್ನಾಭರಣ ತೋರಿಸುತ್ತಿದ್ದ ಸಂದರ್ಭದಲ್ಲಿ ಅವರ ಗಮನವನ್ನು ಬೇರೆಡೆಗೆ ಸೆಳೆದು 78 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದರು’ ಎಂದು ತಿಳಿಸಿದರು.</p>.<p>‘ಇಸ್ರೊ ಲೇಔಟ್ನ ದೇವರಕೆರೆ ಪಕ್ಕದ ಖಾಲಿ ನಿವೇಶನದಲ್ಲಿ ಕಾರು ನಿಲ್ಲಿಸಿಕೊಂಡು ಚರ್ಚಿಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಲಾಯಿತು. ಬಂಧಿತರನ್ನು 8 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕದ್ದ ಚಿನ್ನವನ್ನು ಭರಮಸಾಗರದ ಚಿನ್ನಾಭರಣ ಕೆಲಸಗಾರರೊಬ್ಬರಿಗೆ ಆರೋಪಿಗಳು ಮಾರಾಟ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>