<p><strong>ಬೆಂಗಳೂರು</strong>: ‘ನಾಡಿನ ಭಾಷೆ–ಸಂಸ್ಕೃತಿಯನ್ನು ಪ್ರಪಂಚದಾದ್ಯಂತ ಪಸರಿಸುತ್ತಿರುವ ಸುಗಮ ಸಂಗೀತ ಕ್ಷೇತ್ರಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪಿಸಬೇಕು’ ಎಂದು ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಆಗ್ರಹಿಸಿದರು.</p>.<p>ಆದರ್ಶ ಸುಗಮ ಸಂಗೀತ ಅಕಾಡೆಮಿ ನಗರದಲ್ಲಿ ಹಮ್ಮಿಕೊಂಡಿದ್ದ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸರ್ಕಾರಿ ಕಾರ್ಯಕ್ರಮಗಳು ಸೇರಿ ಎಲ್ಲ ಕಾರ್ಯಕ್ರಮಗಳಲ್ಲಿ ಸುಗಮ ಸಂಗೀತ ಅವಿಭಾಜ್ಯ ಅಂಗವಾಗಿದೆ. ಪ್ರಪಂಚದಾದ್ಯಂತ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯನ್ನು ಈ ಸಂಗೀತ ಪ್ರಕಾರ ಪಸರಿಸುತ್ತಿದೆ. ಆದ್ದರಿಂದ ಸುಗಮ ಸಂಗೀತಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪಿಸಬೇಕಾಗಿದೆ. ಇದರಿಂದ ಭಾಷೆಯೂ ಬೆಳವಣಿಗೆ ಹೊಂದಲಿದೆ’ ಎಂದು ಹೇಳಿದರು. </p>.<p>ಉದಯಭಾನು ಕಲಾ ಸಂಘದ ಕಾರ್ಯದರ್ಶಿ ನರಸಿಂಹ ಮಾತನಾಡಿ, ‘ಮಕ್ಕಳಿಗೆ ಸಂಗೀತದಲ್ಲಿ ತರಬೇತಿ ನೀಡಿ, ವೇದಿಕೆಯನ್ನೂ ಒದಗಿಸುವ ಆದರ್ಶ ಸುಗಮ ಸಂಗೀತ ಅಕಾಡೆಮಿಯ ಕಾರ್ಯ ಶ್ಲಾಘನೀಯ. ಕವಿಗಳು, ಗಾಯಕರನ್ನು ಮಕ್ಕಳಿಗೆ ಪರಿಚಯಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ’ ಎಂದರು.</p>.<p>ಗಾಯಕರಾದ ಶಿವಶಂಕರ್ ಅವರು ‘ಸಗ್ಗದ ಸಿರಿ ಬಂತು’ ಗೀತೆಯನ್ನು ಹಾಗೂ ಪಿ.ಎನ್. ಜಯರಾಂ ಅವರು ‘ಕಲಾರಸಿಕ ಸಾಗರಕೆ’ ಗೀತೆಯನ್ನು ಹಾಡಿದರು. ಸುಗಮ ಸಂಗೀತ ಹಾಗೂ ವಾದ್ಯ ವೈಭವವನ್ನು ಕಲಾವಿದರು ಹಾಗೂ ಮಕ್ಕಳು ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಾಡಿನ ಭಾಷೆ–ಸಂಸ್ಕೃತಿಯನ್ನು ಪ್ರಪಂಚದಾದ್ಯಂತ ಪಸರಿಸುತ್ತಿರುವ ಸುಗಮ ಸಂಗೀತ ಕ್ಷೇತ್ರಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪಿಸಬೇಕು’ ಎಂದು ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಆಗ್ರಹಿಸಿದರು.</p>.<p>ಆದರ್ಶ ಸುಗಮ ಸಂಗೀತ ಅಕಾಡೆಮಿ ನಗರದಲ್ಲಿ ಹಮ್ಮಿಕೊಂಡಿದ್ದ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸರ್ಕಾರಿ ಕಾರ್ಯಕ್ರಮಗಳು ಸೇರಿ ಎಲ್ಲ ಕಾರ್ಯಕ್ರಮಗಳಲ್ಲಿ ಸುಗಮ ಸಂಗೀತ ಅವಿಭಾಜ್ಯ ಅಂಗವಾಗಿದೆ. ಪ್ರಪಂಚದಾದ್ಯಂತ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯನ್ನು ಈ ಸಂಗೀತ ಪ್ರಕಾರ ಪಸರಿಸುತ್ತಿದೆ. ಆದ್ದರಿಂದ ಸುಗಮ ಸಂಗೀತಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪಿಸಬೇಕಾಗಿದೆ. ಇದರಿಂದ ಭಾಷೆಯೂ ಬೆಳವಣಿಗೆ ಹೊಂದಲಿದೆ’ ಎಂದು ಹೇಳಿದರು. </p>.<p>ಉದಯಭಾನು ಕಲಾ ಸಂಘದ ಕಾರ್ಯದರ್ಶಿ ನರಸಿಂಹ ಮಾತನಾಡಿ, ‘ಮಕ್ಕಳಿಗೆ ಸಂಗೀತದಲ್ಲಿ ತರಬೇತಿ ನೀಡಿ, ವೇದಿಕೆಯನ್ನೂ ಒದಗಿಸುವ ಆದರ್ಶ ಸುಗಮ ಸಂಗೀತ ಅಕಾಡೆಮಿಯ ಕಾರ್ಯ ಶ್ಲಾಘನೀಯ. ಕವಿಗಳು, ಗಾಯಕರನ್ನು ಮಕ್ಕಳಿಗೆ ಪರಿಚಯಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ’ ಎಂದರು.</p>.<p>ಗಾಯಕರಾದ ಶಿವಶಂಕರ್ ಅವರು ‘ಸಗ್ಗದ ಸಿರಿ ಬಂತು’ ಗೀತೆಯನ್ನು ಹಾಗೂ ಪಿ.ಎನ್. ಜಯರಾಂ ಅವರು ‘ಕಲಾರಸಿಕ ಸಾಗರಕೆ’ ಗೀತೆಯನ್ನು ಹಾಡಿದರು. ಸುಗಮ ಸಂಗೀತ ಹಾಗೂ ವಾದ್ಯ ವೈಭವವನ್ನು ಕಲಾವಿದರು ಹಾಗೂ ಮಕ್ಕಳು ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>