ತಮ್ಮ ಮಗ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಿರುವ ಕುರಿತು ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಷಡ್ಯಂತ್ರ ಮಾಡಲಿ ಬಿಡಿ, ಅದರ ಬಗ್ಗೆ ಈಗ ಏನನ್ನೂ ಹೇಳುವುದಿಲ್ಲ. ನನಗೆ ನ್ಯಾಯಾಂಗ ಮತ್ತು ದೇವರ ಮೇಲೆ ನಂಬಿಕೆ ಇದೆ. ಯಾವುದಕ್ಕೂ ಹೆದರಿ ಓಡಿಹೋಗುವುದಿಲ್ಲ’ ಎಂದರು.