<p><strong>ನೆಲಮಂಗಲ</strong>: ‘ಅನ್ನ, ವಸತಿ ಹಾಗೂ ವಿದ್ಯೆಯನ್ನು ಮಠಗಳು ನೀಡುತ್ತಿವೆ. ಸರ್ಕಾರಗಳು ಮಾಡಬೇಕಿರುವ ಕೆಲಸವನ್ನು ಮಠಗಳು ಮಾಡುತ್ತಿವೆ’ ಎಂದು ಶಾಸಕ ಎನ್.ಶ್ರೀನಿವಾಸ್ ಶ್ಲಾಘಿಸಿದರು. </p>.<p>ಶಿವಗಂಗೆ ಮೇಲಣಗವಿ ಮಠದಲ್ಲಿ ಹಮ್ಮಿಕೊಂಡಿದ್ದ ‘ರೇಣುಕಾಚಾರ್ಯ ಜಯಂತಿʼ, ನೂತನ ವಿದ್ಯಾರ್ಥಿನಿಲಯ ಉದ್ಘಾಟನೆ ಹಾಗೂ ‘ಶಿವಗಂಗಾ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೀಶ್ವರ ಶ್ರೀಗಳು ಮಾತನಾಡಿ, ‘ಧಾರ್ಮಿಕ ಕಾರ್ಯಕ್ರಮಗಳಿಗೆ ಮಕ್ಕಳನ್ನು ಕರೆದುಕೊಂಡು ಹೋದಾಗ ಸಂಸ್ಕಾರ ದೊರೆಯುತ್ತದೆ. ಪರಂಪರೆ ಮುಂದುವರಿಯುತ್ತದೆ’ ಎಂದರು.</p>.<p>ಮೇಲಣಗವಿ ಮಲಯ ಶಾಂತಮುನಿ ಶ್ರೀಗಳು ಮಾತನಾಡಿ, ಮಠಗಳಿಗೆ ನೀಡಿದಂತಹ ಅನುದಾನಗಳನ್ನು ಕಾರಣಾಂತರಗಳಿಂದ ಹಿಂಪಡೆದಿದ್ದ ಸರ್ಕಾರವು ಮರಳಿಸಬೇಕು ಎಂದು ಒತ್ತಾಯಿಸಿದರು.</p>.<p>ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿ ಸದಸ್ಯ ಎನ್.ಎಸ್.ನಟರಾಜು ಅವರಿಗೆ ‘ಶಿವಗಂಗಾ ಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಎಂ.ವಿ.ನೆಗಳೂರ ಅವರ ‘ವಿಚಾರ ಆಚಾರ ವಿಹಾರ’ ಕೃತಿ ಬಿಡುಗಡೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ‘ಅನ್ನ, ವಸತಿ ಹಾಗೂ ವಿದ್ಯೆಯನ್ನು ಮಠಗಳು ನೀಡುತ್ತಿವೆ. ಸರ್ಕಾರಗಳು ಮಾಡಬೇಕಿರುವ ಕೆಲಸವನ್ನು ಮಠಗಳು ಮಾಡುತ್ತಿವೆ’ ಎಂದು ಶಾಸಕ ಎನ್.ಶ್ರೀನಿವಾಸ್ ಶ್ಲಾಘಿಸಿದರು. </p>.<p>ಶಿವಗಂಗೆ ಮೇಲಣಗವಿ ಮಠದಲ್ಲಿ ಹಮ್ಮಿಕೊಂಡಿದ್ದ ‘ರೇಣುಕಾಚಾರ್ಯ ಜಯಂತಿʼ, ನೂತನ ವಿದ್ಯಾರ್ಥಿನಿಲಯ ಉದ್ಘಾಟನೆ ಹಾಗೂ ‘ಶಿವಗಂಗಾ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೀಶ್ವರ ಶ್ರೀಗಳು ಮಾತನಾಡಿ, ‘ಧಾರ್ಮಿಕ ಕಾರ್ಯಕ್ರಮಗಳಿಗೆ ಮಕ್ಕಳನ್ನು ಕರೆದುಕೊಂಡು ಹೋದಾಗ ಸಂಸ್ಕಾರ ದೊರೆಯುತ್ತದೆ. ಪರಂಪರೆ ಮುಂದುವರಿಯುತ್ತದೆ’ ಎಂದರು.</p>.<p>ಮೇಲಣಗವಿ ಮಲಯ ಶಾಂತಮುನಿ ಶ್ರೀಗಳು ಮಾತನಾಡಿ, ಮಠಗಳಿಗೆ ನೀಡಿದಂತಹ ಅನುದಾನಗಳನ್ನು ಕಾರಣಾಂತರಗಳಿಂದ ಹಿಂಪಡೆದಿದ್ದ ಸರ್ಕಾರವು ಮರಳಿಸಬೇಕು ಎಂದು ಒತ್ತಾಯಿಸಿದರು.</p>.<p>ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿ ಸದಸ್ಯ ಎನ್.ಎಸ್.ನಟರಾಜು ಅವರಿಗೆ ‘ಶಿವಗಂಗಾ ಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಎಂ.ವಿ.ನೆಗಳೂರ ಅವರ ‘ವಿಚಾರ ಆಚಾರ ವಿಹಾರ’ ಕೃತಿ ಬಿಡುಗಡೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>