<p><strong>ಬೆಂಗಳೂರು</strong>: ಬಾಲಮಂದಿರದಿಂದ ತಪ್ಪಿಸಿಕೊಂಡು ಚಿನ್ನಾಭರಣ, ವಾಹನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕರನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹ 4 ಲಕ್ಷ ಮೌಲ್ಯದ 30 ಗ್ರಾಂ ಚಿನ್ನದ ಸರ, ಎರಡು ದ್ವಿಚಕ್ರ ವಾಹನ ಹಾಗೂ ಆಟೊ ರಿಕ್ಷಾ ವಶಪಡಿಸಿಕೊಂಡಿದ್ದಾರೆ.</p>.<p>‘ನಾಲ್ವರನ್ನೂ ಬಾಲ ನ್ಯಾಯ ಮಂಡಳಿ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿತ್ತು. ನ್ಯಾಯಾಧೀಶರ ನಿರ್ದೇಶನದಂತೆ ಎಲ್ಲರನ್ನೂ ಮಡಿವಾಳದ ಬಾಲಮಂದಿರಕ್ಕೆ ಒಪ್ಪಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಹಿಂದೆಯೂ ಸರಗಳ್ಳತನ ಮತ್ತು ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿ, ದೇವನಹಳ್ಳಿ ಬಾಲಮಂದಿರಕ್ಕೆ ಕಳುಹಿಸಿದ್ದರು. ಜುಲೈ 9ರಂದು ಅಲ್ಲಿನ ಹಿಂಬಾಗಿಲ ಬೀಗ ಒಡೆದು ತಪ್ಪಿಸಿಕೊಂಡಿದ್ದರು. ಜುಲೈ 14 ರಂದು ಕೆಂಪಯ್ಯ ಗಾರ್ಡನ್ ಬಳಿ ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ, ಕೊರಳಿನಲ್ಲಿದ್ದ 30 ಗ್ರಾಂ. ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು ಎಂದು ವಿವರ ನೀಡಿದರು.</p>.<p>ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ ಬಳಿಕ ಗಂಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಚಿನ್ನದ ಸರ ಕಿತ್ತುಕೊಂಡು ಹೋಗಿರುವುದಾಗಿ ತಪ್ಪೂಪ್ಪಿಕೊಂಡರು. ಅವರಿಂದ ಚಿನ್ನದ ಸರ, ಆಟೊ ರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೀಣ್ಯ ಠಾಣೆ ಪೊಲೀಸರು ತಿಳಿಸಿದರು.</p>.<p>ಕುಂಬಳಗೋಡು, ಕೆಂಗೇರಿ, ನಾಯಂಡಹಳ್ಳಿ, ಬ್ಯಾಡರಹಳ್ಳಿಯಲ್ಲಿ ನೆಲೆಸಿರುವ ಈ ಎಲ್ಲರೂ 17 ವರ್ಷದೊಳಗಿನವರು. 6 ರಿಂದ 8 ನೇ ತರಗತಿವರೆಗೆ ಮಾತ್ರ ಓದಿದ್ದಾರೆ. ಇವರ ತಂದೆ, ತಾಯಿ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಮೋಜಿನ ಜೀವನಕ್ಕಾಗಿ ಇವರು ಕಳ್ಳತನಕ್ಕಿಳಿದಿದ್ದಾರೆ. ಕದ್ದ ವಸ್ತುಗಳನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಗಾಂಜಾ, ಮದ್ಯ ಸೇವನೆ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಲಮಂದಿರದಿಂದ ತಪ್ಪಿಸಿಕೊಂಡು ಚಿನ್ನಾಭರಣ, ವಾಹನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕರನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹ 4 ಲಕ್ಷ ಮೌಲ್ಯದ 30 ಗ್ರಾಂ ಚಿನ್ನದ ಸರ, ಎರಡು ದ್ವಿಚಕ್ರ ವಾಹನ ಹಾಗೂ ಆಟೊ ರಿಕ್ಷಾ ವಶಪಡಿಸಿಕೊಂಡಿದ್ದಾರೆ.</p>.<p>‘ನಾಲ್ವರನ್ನೂ ಬಾಲ ನ್ಯಾಯ ಮಂಡಳಿ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿತ್ತು. ನ್ಯಾಯಾಧೀಶರ ನಿರ್ದೇಶನದಂತೆ ಎಲ್ಲರನ್ನೂ ಮಡಿವಾಳದ ಬಾಲಮಂದಿರಕ್ಕೆ ಒಪ್ಪಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಹಿಂದೆಯೂ ಸರಗಳ್ಳತನ ಮತ್ತು ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿ, ದೇವನಹಳ್ಳಿ ಬಾಲಮಂದಿರಕ್ಕೆ ಕಳುಹಿಸಿದ್ದರು. ಜುಲೈ 9ರಂದು ಅಲ್ಲಿನ ಹಿಂಬಾಗಿಲ ಬೀಗ ಒಡೆದು ತಪ್ಪಿಸಿಕೊಂಡಿದ್ದರು. ಜುಲೈ 14 ರಂದು ಕೆಂಪಯ್ಯ ಗಾರ್ಡನ್ ಬಳಿ ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ, ಕೊರಳಿನಲ್ಲಿದ್ದ 30 ಗ್ರಾಂ. ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು ಎಂದು ವಿವರ ನೀಡಿದರು.</p>.<p>ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ ಬಳಿಕ ಗಂಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಚಿನ್ನದ ಸರ ಕಿತ್ತುಕೊಂಡು ಹೋಗಿರುವುದಾಗಿ ತಪ್ಪೂಪ್ಪಿಕೊಂಡರು. ಅವರಿಂದ ಚಿನ್ನದ ಸರ, ಆಟೊ ರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೀಣ್ಯ ಠಾಣೆ ಪೊಲೀಸರು ತಿಳಿಸಿದರು.</p>.<p>ಕುಂಬಳಗೋಡು, ಕೆಂಗೇರಿ, ನಾಯಂಡಹಳ್ಳಿ, ಬ್ಯಾಡರಹಳ್ಳಿಯಲ್ಲಿ ನೆಲೆಸಿರುವ ಈ ಎಲ್ಲರೂ 17 ವರ್ಷದೊಳಗಿನವರು. 6 ರಿಂದ 8 ನೇ ತರಗತಿವರೆಗೆ ಮಾತ್ರ ಓದಿದ್ದಾರೆ. ಇವರ ತಂದೆ, ತಾಯಿ ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಮೋಜಿನ ಜೀವನಕ್ಕಾಗಿ ಇವರು ಕಳ್ಳತನಕ್ಕಿಳಿದಿದ್ದಾರೆ. ಕದ್ದ ವಸ್ತುಗಳನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಗಾಂಜಾ, ಮದ್ಯ ಸೇವನೆ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>