<p><strong>ಬೆಂಗಳೂರು:</strong> ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಆರೋಪಿ ಕಾಂತರಾಜ್ ಅಲಿಯಾಸ್ ಮೋರಿಕಾಂತ್ (47) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಸುಂಕದಕಟ್ಟೆ ಚಂದನ ಬಡಾವಣೆಯ ಕಾಂತರಾಜ್, ಅಪರಾಧ ಹಿನ್ನೆಲೆಯುಳ್ಳವ. ಕೃತ್ಯ ಎಸಗಿದ್ದ ಈತನನ್ನು ಬೆರಳಚ್ಚು ನೀಡಿದ್ದ ಸುಳಿವು ಆಧರಿಸಿ ಸೆರೆ ಹಿಡಿಯಲಾಗಿದೆ. ಇನ್ನೊಬ್ಬ ಆರೋಪಿ ಚಿಕ್ಕಮಗಳೂರಿನ ದುಬೈ ನಗರದ ಯತೀಶ್ ಎಂಬಾತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರ ಮಹೇಶ್ಕುಮಾರ್ ಅವರು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಬೇರೆ ಊರಿಗೆ ಹೋಗಿದ್ದರು. ಬೀಗ ಹಾಕಿದ್ದ ಮನೆ ಗುರುತಿಸಿದ್ದ ಆರೋಪಿಗಳು, ಕಳ್ಳತನಕ್ಕೆ ಸಂಚು ರೂಪಿಸಿದ್ದರು. ಬೀಗ ಮುರಿದು ಒಳನುಗ್ಗಿದ್ದ ಅವರಿಬ್ಬರು, 50 ಗ್ರಾಂ ಚಿನ್ನಾಭರಣ, 1 ಕೆ.ಜಿ. ಬೆಳ್ಳಿ ಸಾಮಗ್ರಿ ಹಾಗೂ ₹ 35,000 ನಗದು ಕದ್ದೊಯ್ದಿದ್ದರು’ ಎಂದು ತಿಳಿಸಿದರು.</p>.<p>‘ಆರೋಪಿ ಕಾಂತರಾಜ್ ಈ ಹಿಂದೆಯೂ ಮನೆಗಳಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದು ಪುನಃ ಕೃತ್ಯ ಎಸಗಲಾರಂಭಿಸಿದ್ದ. ದೂರುದಾರ ಮಹೇಶ್ಕುಮಾರ್ ಅವರ ಮನೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಆಗ ಆರೋಪಿಯ ಬೆರಳಚ್ಚು ಸಿಕ್ಕಿತ್ತು. ಕಾಂತರಾಜ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ’ ಎಂದು ಹೇಳಿದರು.</p>.<p>‘ಆರೋಪಿಯಿಂದ ₹3.50 ಲಕ್ಷ ಮೌಲ್ಯದ 46 ಗ್ರಾಂ ಚಿನ್ನಾಭರಣ, 1 ಕೆ.ಜಿ. ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ. ಈತನ ಬಂಧನದಿಂದ 2 ಪ್ರಕರಣಗಳೂ ಪತ್ತೆಯಾಗಿವೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಆರೋಪಿ ಕಾಂತರಾಜ್ ಅಲಿಯಾಸ್ ಮೋರಿಕಾಂತ್ (47) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಸುಂಕದಕಟ್ಟೆ ಚಂದನ ಬಡಾವಣೆಯ ಕಾಂತರಾಜ್, ಅಪರಾಧ ಹಿನ್ನೆಲೆಯುಳ್ಳವ. ಕೃತ್ಯ ಎಸಗಿದ್ದ ಈತನನ್ನು ಬೆರಳಚ್ಚು ನೀಡಿದ್ದ ಸುಳಿವು ಆಧರಿಸಿ ಸೆರೆ ಹಿಡಿಯಲಾಗಿದೆ. ಇನ್ನೊಬ್ಬ ಆರೋಪಿ ಚಿಕ್ಕಮಗಳೂರಿನ ದುಬೈ ನಗರದ ಯತೀಶ್ ಎಂಬಾತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರ ಮಹೇಶ್ಕುಮಾರ್ ಅವರು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಬೇರೆ ಊರಿಗೆ ಹೋಗಿದ್ದರು. ಬೀಗ ಹಾಕಿದ್ದ ಮನೆ ಗುರುತಿಸಿದ್ದ ಆರೋಪಿಗಳು, ಕಳ್ಳತನಕ್ಕೆ ಸಂಚು ರೂಪಿಸಿದ್ದರು. ಬೀಗ ಮುರಿದು ಒಳನುಗ್ಗಿದ್ದ ಅವರಿಬ್ಬರು, 50 ಗ್ರಾಂ ಚಿನ್ನಾಭರಣ, 1 ಕೆ.ಜಿ. ಬೆಳ್ಳಿ ಸಾಮಗ್ರಿ ಹಾಗೂ ₹ 35,000 ನಗದು ಕದ್ದೊಯ್ದಿದ್ದರು’ ಎಂದು ತಿಳಿಸಿದರು.</p>.<p>‘ಆರೋಪಿ ಕಾಂತರಾಜ್ ಈ ಹಿಂದೆಯೂ ಮನೆಗಳಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದು ಪುನಃ ಕೃತ್ಯ ಎಸಗಲಾರಂಭಿಸಿದ್ದ. ದೂರುದಾರ ಮಹೇಶ್ಕುಮಾರ್ ಅವರ ಮನೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಆಗ ಆರೋಪಿಯ ಬೆರಳಚ್ಚು ಸಿಕ್ಕಿತ್ತು. ಕಾಂತರಾಜ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ’ ಎಂದು ಹೇಳಿದರು.</p>.<p>‘ಆರೋಪಿಯಿಂದ ₹3.50 ಲಕ್ಷ ಮೌಲ್ಯದ 46 ಗ್ರಾಂ ಚಿನ್ನಾಭರಣ, 1 ಕೆ.ಜಿ. ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ. ಈತನ ಬಂಧನದಿಂದ 2 ಪ್ರಕರಣಗಳೂ ಪತ್ತೆಯಾಗಿವೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>