<p>ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ 50ರಷ್ಟು ರಿಯಾಯಿತಿಯಡಿ ದಂಡ ಪಾವತಿಸಲು ನಾಳೆ (ಫೆ. 11) ಕೊನೆ ದಿನವಾಗಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದರಿಂದ, ರಿಯಾಯಿತಿ ಸೌಲಭ್ಯದ ದಿನಾಂಕವನ್ನು ವಿಸ್ತರಣೆ ಮಾಡುವಂತೆ ಸಂಚಾರ ಪೊಲೀಸರು ಸರ್ಕಾರದ ಹಿರಿಯ ಅಧಿಕಾರಿಗಳನ್ನು ಕೋರಿದ್ದಾರೆ.</p>.<p>ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ಒಪ್ಪಿದ್ದ ರಾಜ್ಯ ಸರ್ಕಾರ, ಸಂಚಾರ ನಿಯಮ ಉಲ್ಲಂಘನೆಯ ಇ–ಚಲನ್ ಪ್ರಕರಣಗಳ ದಂಡ ಪಾವತಿ ಮೇಲೆ ರಿಯಾಯಿತಿ ನೀಡಿ ಫೆ. 2ರಂದು ಆದೇಶ ಹೊರಡಿಸಿತ್ತು. ಫೆ. 3ರಿಂದ ದಂಡ ಸಂಗ್ರಹ ಪ್ರಕ್ರಿಯೆ ಆರಂಭವಾಗಿದೆ.</p>.<p>ಏಳನೇ ದಿನವಾದ ಗುರುವಾರದವರೆಗೆ ₹ 65.93 ಕೋಟಿ ದಂಡ ಸಂಗ್ರಹವಾಗಿದ್ದು, 23.73 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ.</p>.<p>ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿ), ನಗರದ ಹಲವು ಸಂಚಾರ ಪೊಲೀಸ್ ಠಾಣೆಗಳು ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಜನರು ದಂಡ ತುಂಬುತ್ತಿದ್ದಾರೆ.</p>.<p>‘ದಂಡದ ಮೇಲಿನ ರಿಯಾಯಿತಿಗೆ ಉತ್ತಮ ಸ್ಪಂದನ ವ್ಯಕ್ತವಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ರಿಯಾಯಿತಿ ಸೌಲಭ್ಯ ದಿನಾಂಕವನ್ನು ವಿಸ್ತರಣೆ ಮಾಡಿದರೆ ಅನುಕೂಲವೆಂದು ತಿಳಿಸಲಾಗಿದೆ’ ಎಂದು ವಿಶೇಷ ಕಮಿಷನರ್ (ಸಂಚಾರ) ಎಂ.ಎ. ಸಲೀಂ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead">ನಕಲಿ ನೋಂದಣಿ ಫಲಕದ ವಿರುದ್ಧ ಪ್ರಕರಣ: ವಾಹನಗಳಿಗೆ ನಕಲಿ ನೋಂದಣಿ ಸಂಖ್ಯೆ ಫಲಕ ಅಳವಡಿಸುವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಂಚಾರ ಪೊಲೀಸರು ಮುಂದಾಗಿದ್ದಾರೆ.</p>.<p>‘ನಕಲಿ ನೋಂದಣಿ ಫಲಕದಿಂದ ಅಮಾಯಕರಿಗೆ ದಂಡ ಬೀಳುತ್ತಿದೆ. ಯಾರಾದರೂ ನಕಲಿ ಫಲಕ ಹಾಕಿಕೊಂಡಿದ್ದು ಗೊತ್ತಾದರೆ, ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಇನ್ಸ್ಪೆಕ್ಟರ್ಗಳಿಗೆ ವಿಶೇಷ ಕಮಿಷನರ್ ಸೂಚನೆ ನೀಡಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ 50ರಷ್ಟು ರಿಯಾಯಿತಿಯಡಿ ದಂಡ ಪಾವತಿಸಲು ನಾಳೆ (ಫೆ. 11) ಕೊನೆ ದಿನವಾಗಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದರಿಂದ, ರಿಯಾಯಿತಿ ಸೌಲಭ್ಯದ ದಿನಾಂಕವನ್ನು ವಿಸ್ತರಣೆ ಮಾಡುವಂತೆ ಸಂಚಾರ ಪೊಲೀಸರು ಸರ್ಕಾರದ ಹಿರಿಯ ಅಧಿಕಾರಿಗಳನ್ನು ಕೋರಿದ್ದಾರೆ.</p>.<p>ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ಒಪ್ಪಿದ್ದ ರಾಜ್ಯ ಸರ್ಕಾರ, ಸಂಚಾರ ನಿಯಮ ಉಲ್ಲಂಘನೆಯ ಇ–ಚಲನ್ ಪ್ರಕರಣಗಳ ದಂಡ ಪಾವತಿ ಮೇಲೆ ರಿಯಾಯಿತಿ ನೀಡಿ ಫೆ. 2ರಂದು ಆದೇಶ ಹೊರಡಿಸಿತ್ತು. ಫೆ. 3ರಿಂದ ದಂಡ ಸಂಗ್ರಹ ಪ್ರಕ್ರಿಯೆ ಆರಂಭವಾಗಿದೆ.</p>.<p>ಏಳನೇ ದಿನವಾದ ಗುರುವಾರದವರೆಗೆ ₹ 65.93 ಕೋಟಿ ದಂಡ ಸಂಗ್ರಹವಾಗಿದ್ದು, 23.73 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ.</p>.<p>ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರ (ಟಿಎಂಸಿ), ನಗರದ ಹಲವು ಸಂಚಾರ ಪೊಲೀಸ್ ಠಾಣೆಗಳು ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಜನರು ದಂಡ ತುಂಬುತ್ತಿದ್ದಾರೆ.</p>.<p>‘ದಂಡದ ಮೇಲಿನ ರಿಯಾಯಿತಿಗೆ ಉತ್ತಮ ಸ್ಪಂದನ ವ್ಯಕ್ತವಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ರಿಯಾಯಿತಿ ಸೌಲಭ್ಯ ದಿನಾಂಕವನ್ನು ವಿಸ್ತರಣೆ ಮಾಡಿದರೆ ಅನುಕೂಲವೆಂದು ತಿಳಿಸಲಾಗಿದೆ’ ಎಂದು ವಿಶೇಷ ಕಮಿಷನರ್ (ಸಂಚಾರ) ಎಂ.ಎ. ಸಲೀಂ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead">ನಕಲಿ ನೋಂದಣಿ ಫಲಕದ ವಿರುದ್ಧ ಪ್ರಕರಣ: ವಾಹನಗಳಿಗೆ ನಕಲಿ ನೋಂದಣಿ ಸಂಖ್ಯೆ ಫಲಕ ಅಳವಡಿಸುವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಂಚಾರ ಪೊಲೀಸರು ಮುಂದಾಗಿದ್ದಾರೆ.</p>.<p>‘ನಕಲಿ ನೋಂದಣಿ ಫಲಕದಿಂದ ಅಮಾಯಕರಿಗೆ ದಂಡ ಬೀಳುತ್ತಿದೆ. ಯಾರಾದರೂ ನಕಲಿ ಫಲಕ ಹಾಕಿಕೊಂಡಿದ್ದು ಗೊತ್ತಾದರೆ, ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಇನ್ಸ್ಪೆಕ್ಟರ್ಗಳಿಗೆ ವಿಶೇಷ ಕಮಿಷನರ್ ಸೂಚನೆ ನೀಡಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>