<p><strong>ಬೆಂಗಳೂರು</strong>: ಮರದ ಕೊಂಬೆ ಬಿದ್ದು ದ್ವಿಚಕ್ರ ವಾಹನ ಸವಾರ ಚಂದನ್ ಎಂಬುವವರು ತೀವ್ರ ಗಾಯಗೊಂಡಿದ್ದು, ಈ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಮಾರ್ಚ್ 7ರಂದು ಬೆಳಿಗ್ಗೆ ನಡೆದಿರುವ ಘಟನೆ ಸಂಬಂಧ ಗಾಯಾಳು ಚಂದನ್ ಅವರು ಹೇಳಿಕೆ ನೀಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಹಾಗೂ ಕಾಲೇಜೊಂದರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕಂಪನಿಯೊಂದರ ಉದ್ಯೋಗಿ ಚಂದನ್, ರೆಸಿಡೆನ್ಸಿ ರಸ್ತೆ ಮೂಲಕ ದ್ವಿಚಕ್ರ ವಾಹನದಲ್ಲಿ ಕಚೇರಿಯತ್ತ ಹೊರಟಿದ್ದರು. ಇದೇ ರಸ್ತೆಯಲ್ಲಿರುವ ಕಾಲೇಜೊಂದರ ಕಾಂಪೌಂಡ್ ಜಾಗದಲ್ಲಿ ಬೃಹತ್ ಮರವಿದ್ದು, ಅದರ ಕೊಂಬೆಗಳು ರಸ್ತೆಗೆ ಚಾಚಿಕೊಂಡಿವೆ. ಅದೇ ಮರದ ಕೊಂಬೆಯೊಂದು ತುಂಡಾಗಿ ಚಂದನ್ ಮೇಲೆ ಬಿದ್ದಿತ್ತು’ ಎಂದು ತಿಳಿಸಿದರು.</p>.<p>‘ಘಟನೆಯಿಂದಾಗಿ ಚಂದನ್ ಅವರ ಬೆನ್ನುಮೂಳೆಗೆ ತೀವ್ರ ಪೆಟ್ಟು ಬಿದ್ದಿತ್ತು. ಸ್ಥಳದಲ್ಲಿ ಬಿದ್ದು ನರಳುತ್ತಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ನಡೆದ ದಿನದಿಂದಲೂ ಚಂದನ್ ಆಸ್ಪತ್ರೆಯಲ್ಲಿದ್ದಾರೆ. ಬೆನ್ನುಮೂಳೆ ಮುರಿದಿರುವುದಾಗಿ ವೈದ್ಯರು ಹೇಳುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಕಾಲೇಜಿನವರು ಕೊಂಬೆಗಳನ್ನು ತೆರವು ಮಾಡಿರಲಿಲ್ಲ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳೂ ಕ್ರಮ ಕೈಗೊಂಡಿರಲಿಲ್ಲ. ಇಬ್ಬರ ನಿರ್ಲಕ್ಷ್ಯದಿಂದ ಘಟನೆ ನಡೆದಿರುವುದಾಗಿ ಚಂದನ್ ಆರೋಪಿಸುತ್ತಿದ್ದಾರೆ. ಆರೋಪಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮರದ ಕೊಂಬೆ ಬಿದ್ದು ದ್ವಿಚಕ್ರ ವಾಹನ ಸವಾರ ಚಂದನ್ ಎಂಬುವವರು ತೀವ್ರ ಗಾಯಗೊಂಡಿದ್ದು, ಈ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಮಾರ್ಚ್ 7ರಂದು ಬೆಳಿಗ್ಗೆ ನಡೆದಿರುವ ಘಟನೆ ಸಂಬಂಧ ಗಾಯಾಳು ಚಂದನ್ ಅವರು ಹೇಳಿಕೆ ನೀಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಹಾಗೂ ಕಾಲೇಜೊಂದರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕಂಪನಿಯೊಂದರ ಉದ್ಯೋಗಿ ಚಂದನ್, ರೆಸಿಡೆನ್ಸಿ ರಸ್ತೆ ಮೂಲಕ ದ್ವಿಚಕ್ರ ವಾಹನದಲ್ಲಿ ಕಚೇರಿಯತ್ತ ಹೊರಟಿದ್ದರು. ಇದೇ ರಸ್ತೆಯಲ್ಲಿರುವ ಕಾಲೇಜೊಂದರ ಕಾಂಪೌಂಡ್ ಜಾಗದಲ್ಲಿ ಬೃಹತ್ ಮರವಿದ್ದು, ಅದರ ಕೊಂಬೆಗಳು ರಸ್ತೆಗೆ ಚಾಚಿಕೊಂಡಿವೆ. ಅದೇ ಮರದ ಕೊಂಬೆಯೊಂದು ತುಂಡಾಗಿ ಚಂದನ್ ಮೇಲೆ ಬಿದ್ದಿತ್ತು’ ಎಂದು ತಿಳಿಸಿದರು.</p>.<p>‘ಘಟನೆಯಿಂದಾಗಿ ಚಂದನ್ ಅವರ ಬೆನ್ನುಮೂಳೆಗೆ ತೀವ್ರ ಪೆಟ್ಟು ಬಿದ್ದಿತ್ತು. ಸ್ಥಳದಲ್ಲಿ ಬಿದ್ದು ನರಳುತ್ತಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ನಡೆದ ದಿನದಿಂದಲೂ ಚಂದನ್ ಆಸ್ಪತ್ರೆಯಲ್ಲಿದ್ದಾರೆ. ಬೆನ್ನುಮೂಳೆ ಮುರಿದಿರುವುದಾಗಿ ವೈದ್ಯರು ಹೇಳುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಕಾಲೇಜಿನವರು ಕೊಂಬೆಗಳನ್ನು ತೆರವು ಮಾಡಿರಲಿಲ್ಲ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳೂ ಕ್ರಮ ಕೈಗೊಂಡಿರಲಿಲ್ಲ. ಇಬ್ಬರ ನಿರ್ಲಕ್ಷ್ಯದಿಂದ ಘಟನೆ ನಡೆದಿರುವುದಾಗಿ ಚಂದನ್ ಆರೋಪಿಸುತ್ತಿದ್ದಾರೆ. ಆರೋಪಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>