<p><strong>ಬೆಂಗಳೂರು</strong>: ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ (ಐಐಎಚ್ಆರ್) ಮೇ 31ರಿಂದ ಜೂನ್ 2ರವರೆಗೆ ‘11ನೇ ತ್ರಿಫಲ ವೈವಿಧ್ಯ’ (ಮಾವು, ಹಲಸು ಮತ್ತು ಬಾಳೆ) ಮೇಳ ನಡೆಯಲಿದೆ.</p>.<p>‘ಮೇಳದಲ್ಲಿ 300 ಮಾವು, 100 ಹಲಸು ಹಾಗೂ 100 ಬಾಳೆ ತಳಿಗಳ ಹಣ್ಣುಗಳನ್ನು ಪ್ರದರ್ಶಿಸಲಾಗುತ್ತಿದೆ. ಇದರ ಜೊತೆಗೆ ಮೂರು ಫಲಗಳ ವೈವಿಧ್ಯಮಯ ಮೌಲ್ಯವರ್ಧಿತ ಉತ್ಪನ್ನಗಳು ಪ್ರದರ್ಶನದಲ್ಲಿರುತ್ತವೆ. ಹಣ್ಣಿನ ಬೆಳೆಗಳ ಕೃಷಿಯನ್ನು ಉತ್ತೇಜಿಸುವುದು ಹಾಗೂ ರೈತರ ಜೀವನಮಟ್ಟವನ್ನು ಸುಧಾರಿಸುವುದು ಈ ಮೇಳದ ಉದ್ದೇಶವಾಗಿದೆ’ ಎಂದು ಐಐಎಚ್ಆರ್ನ ನಿರ್ದೇಶಕ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.</p>.<p>‘ಸ್ವ–ಸಹಾಯ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು, ರೈತರು ಮತ್ತು ವ್ಯಾಪಾರಸ್ಥರು ತಮ್ಮ ಉತ್ಪನ್ನಗಳನ್ನು ಮೇಳದಲ್ಲಿ ಪ್ರದರ್ಶಿಸಲಿದ್ದಾರೆ. ಈ ಬೆಳೆಗಳ ಪ್ರಚಾರಕ್ಕಾಗಿ ರೈತರು, ಸಂಸ್ಕರಣೆದಾರರು, ರಫ್ತುದಾರರು, ವ್ಯಾಪಾರಿಗಳು ಮತ್ತು ನೀತಿ ನಿರೂಪಕರಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ‘ ಎಂದು ತಿಳಿಸಿದರು.</p>.<p>‘ಮೇಳದಲ್ಲಿ ಶಾಲಾ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ, ಆಸಕ್ತ ವೀಕ್ಷಕರಿಗೆ ಪಾಕವಿಧಾನ ಸ್ಪರ್ಧೆ ಆಯೋಜಿಸಲಾಗಿದೆ. ಸಾಧಕ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ‘ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ (ಐಐಎಚ್ಆರ್) ಮೇ 31ರಿಂದ ಜೂನ್ 2ರವರೆಗೆ ‘11ನೇ ತ್ರಿಫಲ ವೈವಿಧ್ಯ’ (ಮಾವು, ಹಲಸು ಮತ್ತು ಬಾಳೆ) ಮೇಳ ನಡೆಯಲಿದೆ.</p>.<p>‘ಮೇಳದಲ್ಲಿ 300 ಮಾವು, 100 ಹಲಸು ಹಾಗೂ 100 ಬಾಳೆ ತಳಿಗಳ ಹಣ್ಣುಗಳನ್ನು ಪ್ರದರ್ಶಿಸಲಾಗುತ್ತಿದೆ. ಇದರ ಜೊತೆಗೆ ಮೂರು ಫಲಗಳ ವೈವಿಧ್ಯಮಯ ಮೌಲ್ಯವರ್ಧಿತ ಉತ್ಪನ್ನಗಳು ಪ್ರದರ್ಶನದಲ್ಲಿರುತ್ತವೆ. ಹಣ್ಣಿನ ಬೆಳೆಗಳ ಕೃಷಿಯನ್ನು ಉತ್ತೇಜಿಸುವುದು ಹಾಗೂ ರೈತರ ಜೀವನಮಟ್ಟವನ್ನು ಸುಧಾರಿಸುವುದು ಈ ಮೇಳದ ಉದ್ದೇಶವಾಗಿದೆ’ ಎಂದು ಐಐಎಚ್ಆರ್ನ ನಿರ್ದೇಶಕ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.</p>.<p>‘ಸ್ವ–ಸಹಾಯ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು, ರೈತರು ಮತ್ತು ವ್ಯಾಪಾರಸ್ಥರು ತಮ್ಮ ಉತ್ಪನ್ನಗಳನ್ನು ಮೇಳದಲ್ಲಿ ಪ್ರದರ್ಶಿಸಲಿದ್ದಾರೆ. ಈ ಬೆಳೆಗಳ ಪ್ರಚಾರಕ್ಕಾಗಿ ರೈತರು, ಸಂಸ್ಕರಣೆದಾರರು, ರಫ್ತುದಾರರು, ವ್ಯಾಪಾರಿಗಳು ಮತ್ತು ನೀತಿ ನಿರೂಪಕರಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ‘ ಎಂದು ತಿಳಿಸಿದರು.</p>.<p>‘ಮೇಳದಲ್ಲಿ ಶಾಲಾ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ, ಆಸಕ್ತ ವೀಕ್ಷಕರಿಗೆ ಪಾಕವಿಧಾನ ಸ್ಪರ್ಧೆ ಆಯೋಜಿಸಲಾಗಿದೆ. ಸಾಧಕ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ‘ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>