ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಟರ್ಮಿನಲ್ನ ಮಾಜಿ ಅಧ್ಯಕ್ಷ, ವಿಧಾನ ಪರಿಷತ್ ಬಿಜೆಪಿಯ ಮಾಜಿ ಸದಸ್ಯ ಡಿ.ಎಸ್.ವೀರಯ್ಯ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್.ಶಂಕರಪ್ಪ ಹಾಗೂ ಅವರ ಸಹೋದರ, ರಾಮನಗರ ಜಿಲ್ಲೆ ಮಾಯಾಗನಹಳ್ಳಿಯ ನಿವಾಸಿ ಎಂ.ಎಸ್.ಹೊನ್ನಪ್ಪ ಅವರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೂವರು ಗುತ್ತಿಗೆದಾರರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ತನಿಖೆ ಮುಂದುವರಿಸಲಾಗಿದೆ.