<p><strong>ಬೆಂಗಳೂರು</strong>: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕಗಳು, ಫ್ಲೆಕ್ಸ್ ಹಾಗೂ ಹೋರ್ಡಿಂಗ್ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿಕೊಂಡಿದೆ.</p>.<p>ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ನಗರ ಪೊಲೀಸ್ ಕಮಿಷನರ್ ಅವರಿಗೆ ನೋಟಿಸ್ ಜಾರಿಗೊಳಿಸಲು ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು ಆದೇಶಿಸಿದೆ.</p>.<p>‘ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ವಿಫಲವಾಗಿರುವ ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆಯಡಿ ಯಾಕೆ ಕ್ರಮ ಜರುಗಿಸಬಾರದು ಎಂಬ ಬಗ್ಗೆ ವಿವರಣೆ ನೀಡಿ’ ಎಂದು ಪಾಲಿಕೆಯ ಮುಖ್ಯ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ತಾಕೀತು ಮಾಡಿದೆ.</p>.<p>‘ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂದು ಕೋರಿ ಮಾಯಿಗೇಗೌಡ ಹಾಗೂ ಇತರರು 2017 ಮತ್ತು 2019ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಗಳು, ‘ಈಗಾಗಲೇ 2017, 2018 ಮತ್ತು 2022ರಲ್ಲಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಜೊತೆಗೆ ಇದೇ 11ರಂದು ಇಂಗ್ಲಿಷ್ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ಸುದ್ದಿಯನ್ನು ಆಧರಿಸಿ ನ್ಯಾಯಾಲಯ ಈ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳುತ್ತಿದೆ’ ಎಂದು ತಿಳಿಸಿದರು.</p>.<p>‘ಹೈಕೋರ್ಟ್ ನ ಹಲವು ಆದೇಶಗಳ ಹೊರತಾಗಿಯೂ ಬೆಂಗಳೂರು ಮಹಾನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳು, ಫ್ಲೆಕ್ಸ್ ಹಾಗೂ ಹೋರ್ಡಿಂಗ್ಗಳ ಹಾವಳಿ ಮುಂದುವರಿದಿದೆ’ ಎಂಬ ಪತ್ರಿಕೆಯ ವರದಿಯನ್ನು ನ್ಯಾಯಪೀಠ ಉಲ್ಲೇಖಿಸಿದೆ.</p>.<p>‘ಹೈಕೋರ್ಟ್ 2017ರಿಂದ ಕಾಲಕಾಲಕ್ಕೆ ಅನೇಕ ಆದೇಶ ಮತ್ತು ನಿರ್ದೇಶನಗಳನ್ನು ನೀಡುತ್ತಾ ಬಂದಿದೆ. 2024ರ ಜನವರಿ 8ರಂದು ವಿವರವಾದ ಆದೇಶವನ್ನೇ ಹೊರಡಿಸಿದೆ. ಆದರೂ ಪ್ರಯೋಜನವಾಗಿಲ್ಲ’ ಎಂಬ ಅಂಶವನ್ನು ನ್ಯಾಯಪೀಠ ವಿವರಿಸಿದೆ.</p>.<p>‘ಬಿಬಿಎಂಪಿ 6.8 ಲಕ್ಷ ಅನಧಿಕೃತ ಬ್ಯಾನರ್, ಹೋರ್ಡಿಂಗ್ಗಳನ್ನು ತೆರವುಗೊಳಿಸಿದೆ ಎಂದು ಪತ್ರಿಕೆಯ ವರದಿಯಲ್ಲಿ ತಿಳಿಸಲಾಗಿದೆ. ಇದು ನಗರದಲ್ಲಿ ಸಾರ್ವಜನಿಕ ರಸ್ತೆ, ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ ಹಾಕುವ ಪ್ರವೃತ್ತಿ ಎಗ್ಗಿಲ್ಲದೆ ಮುಂದುವರಿದಿದೆ ಎನ್ನುವುದನ್ನು ಸಾಕ್ಷೀಕರಿಸುತ್ತದೆ. ಜೊತೆಗೆ ನ್ಯಾಯಾಲಯದ ಅದೇಶಗಳ ಬಗ್ಗೆ ಪಾಲಿಕೆ, ನಗರ ಪೊಲೀಸರು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬುದನ್ನೂ ಪುಷ್ಟೀಕರಿಸುತ್ತದೆ. ಹಾಗಾಗಿ, ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಳ್ಳಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿದೆ.</p>.<p>ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ನಗರ ಪೊಲೀಸರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿದೆ.</p>.<p><strong>ಪವರ್ ಟಿವಿ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ</strong></p><p>ನವದೆಹಲಿ: ಪರವಾನಗಿ ನವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕದ ಪವರ್ ಟಿ.ವಿ ಚಾನಲ್ ಕಾರ್ಯ ಕ್ರಮಗಳ ಪ್ರಸಾರ ಸ್ಥಗಿತಗೊಳಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.</p><p>ಹೈಕೋರ್ಟ್ ಆದೇಶ ಪ್ರಶ್ನಿಸಿ, ‘ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ’, ‘ಮೆಸರ್ಸ್ ಮಿಟ್ಕಾನ್ ಇನ್ಫ್ರಾ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ’ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು, ‘ಇದು ಸಂಪೂರ್ಣ ರಾಜಕೀಯ ದ್ವೇಷವಲ್ಲದೆ ಬೇರೇನೂ ಅಲ್ಲ’ ಎಂದು ಅಭಿಪ್ರಾಯಪಟ್ಟಿತು.</p><p>‘ನಾವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಿಸಲು ಒಲವು ಹೊಂದಿದ್ದೇವೆ. ಇದು ರಾಜಕೀಯ ದ್ವೇಷದ ಸರಳ ಪ್ರಕರಣದಂತೆ ತೋರುತ್ತಿದೆ. ಅರ್ಜಿದಾರರನ್ನು ರಕ್ಷಿಸದಿದ್ದರೆ ಈ ನ್ಯಾಯಾಲಯವು ತನ್ನ ಕರ್ತವ್ಯದಲ್ಲಿ ವಿಫಲಗೊಳ್ಳು ತ್ತದೆ’ ಎಂದು ಪೀಠ ಹೇಳಿತು. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತು. ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. </p><p><strong>ಪ್ರಕರಣವೇನು?: </strong>‘ನಮ್ಮ ವಿರುದ್ಧ ಪವರ್ ಟಿ.ವಿ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ’ ಎಂದು ಆರೋಪಿಸಿ ಜೆಡಿಎಸ್ನ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು.</p><p>‘ಪವರ್ ಟಿ.ವಿ.ಚಾನಲ್, ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯ್ದೆ–1995ರ ಆದೇಶ ಉಲ್ಲಂಘಿಸಿರುವ ಕಾರಣ ಸುದ್ದಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು’ ಎಂದು ಜೂನ್ 25ರಂದು ಆದೇಶಿಸಿತ್ತು.</p>.<p><strong>ಬ್ಯಾಂಕ್ ಗ್ಯಾರಂಟಿ ಸಮರ್ಥನೀಯವಲ್ಲ: ಹೈಕೋರ್ಟ್</strong></p><p>‘ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲು ಬ್ಯಾಂಕ್ ಗ್ಯಾರಂಟಿ ಒದಗಿಸಬೇಕು ಎಂಬ ಷರತ್ತು ವಿಧಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p><p>ಈ ಸಂಬಂಧ ನಗರದ ವೈಭವ್ ರಾಜ್ ಉತ್ಸವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ<br>ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p><p>‘ಜಾಮೀನು ಮಂಜೂರು ವೇಳೆ ವಿಚಾರಣಾ ನ್ಯಾಯಾಲಯಗಳು ಬ್ಯಾಂಕ್ ಗ್ಯಾರಂಟಿ ನೀಡುವ ಷರತ್ತು ವಿಧಿಸುತ್ತಿ ರುವ ಪ್ರಕರಣಗಳು ಕಂಡು ಬರುತ್ತಿವೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಬ್ಯಾಂಕ್ ಗ್ಯಾರಂಟಿ ಹೊರತುಪಡಿಸಿ ಇತರೆ ಕಾನೂನು ಬದ್ಧ ಷರತ್ತುಗಳನ್ನು ವಿಧಿಸುವ ಅವಕಾಶ ಮುಕ್ತವಾಗಿರಲಿದೆ’ ಎಂದು ನ್ಯಾಯಪೀಠ ತಿಳಿಸಿದೆ. ಅಪರಾಧ<br>ಪ್ರಕರಣವೊಂದರಲ್ಲಿ ಜಾಮೀನು ಮಂಜೂರು ಮಾಡಿದ್ದ ವಿಚಾರಣಾ ನ್ಯಾಯಾಲಯ ಅರ್ಜಿದಾರರಿಗೆ ₹50 ಲಕ್ಷ ಮೊತ್ತದ ಬ್ಯಾಂಕ್ ಗ್ಯಾರಂಟಿ ಷರತ್ತು ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕಗಳು, ಫ್ಲೆಕ್ಸ್ ಹಾಗೂ ಹೋರ್ಡಿಂಗ್ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿಕೊಂಡಿದೆ.</p>.<p>ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ನಗರ ಪೊಲೀಸ್ ಕಮಿಷನರ್ ಅವರಿಗೆ ನೋಟಿಸ್ ಜಾರಿಗೊಳಿಸಲು ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು ಆದೇಶಿಸಿದೆ.</p>.<p>‘ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ವಿಫಲವಾಗಿರುವ ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆಯಡಿ ಯಾಕೆ ಕ್ರಮ ಜರುಗಿಸಬಾರದು ಎಂಬ ಬಗ್ಗೆ ವಿವರಣೆ ನೀಡಿ’ ಎಂದು ಪಾಲಿಕೆಯ ಮುಖ್ಯ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ತಾಕೀತು ಮಾಡಿದೆ.</p>.<p>‘ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂದು ಕೋರಿ ಮಾಯಿಗೇಗೌಡ ಹಾಗೂ ಇತರರು 2017 ಮತ್ತು 2019ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಗಳು, ‘ಈಗಾಗಲೇ 2017, 2018 ಮತ್ತು 2022ರಲ್ಲಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಜೊತೆಗೆ ಇದೇ 11ರಂದು ಇಂಗ್ಲಿಷ್ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ಸುದ್ದಿಯನ್ನು ಆಧರಿಸಿ ನ್ಯಾಯಾಲಯ ಈ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳುತ್ತಿದೆ’ ಎಂದು ತಿಳಿಸಿದರು.</p>.<p>‘ಹೈಕೋರ್ಟ್ ನ ಹಲವು ಆದೇಶಗಳ ಹೊರತಾಗಿಯೂ ಬೆಂಗಳೂರು ಮಹಾನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳು, ಫ್ಲೆಕ್ಸ್ ಹಾಗೂ ಹೋರ್ಡಿಂಗ್ಗಳ ಹಾವಳಿ ಮುಂದುವರಿದಿದೆ’ ಎಂಬ ಪತ್ರಿಕೆಯ ವರದಿಯನ್ನು ನ್ಯಾಯಪೀಠ ಉಲ್ಲೇಖಿಸಿದೆ.</p>.<p>‘ಹೈಕೋರ್ಟ್ 2017ರಿಂದ ಕಾಲಕಾಲಕ್ಕೆ ಅನೇಕ ಆದೇಶ ಮತ್ತು ನಿರ್ದೇಶನಗಳನ್ನು ನೀಡುತ್ತಾ ಬಂದಿದೆ. 2024ರ ಜನವರಿ 8ರಂದು ವಿವರವಾದ ಆದೇಶವನ್ನೇ ಹೊರಡಿಸಿದೆ. ಆದರೂ ಪ್ರಯೋಜನವಾಗಿಲ್ಲ’ ಎಂಬ ಅಂಶವನ್ನು ನ್ಯಾಯಪೀಠ ವಿವರಿಸಿದೆ.</p>.<p>‘ಬಿಬಿಎಂಪಿ 6.8 ಲಕ್ಷ ಅನಧಿಕೃತ ಬ್ಯಾನರ್, ಹೋರ್ಡಿಂಗ್ಗಳನ್ನು ತೆರವುಗೊಳಿಸಿದೆ ಎಂದು ಪತ್ರಿಕೆಯ ವರದಿಯಲ್ಲಿ ತಿಳಿಸಲಾಗಿದೆ. ಇದು ನಗರದಲ್ಲಿ ಸಾರ್ವಜನಿಕ ರಸ್ತೆ, ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ ಹಾಕುವ ಪ್ರವೃತ್ತಿ ಎಗ್ಗಿಲ್ಲದೆ ಮುಂದುವರಿದಿದೆ ಎನ್ನುವುದನ್ನು ಸಾಕ್ಷೀಕರಿಸುತ್ತದೆ. ಜೊತೆಗೆ ನ್ಯಾಯಾಲಯದ ಅದೇಶಗಳ ಬಗ್ಗೆ ಪಾಲಿಕೆ, ನಗರ ಪೊಲೀಸರು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬುದನ್ನೂ ಪುಷ್ಟೀಕರಿಸುತ್ತದೆ. ಹಾಗಾಗಿ, ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಳ್ಳಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿದೆ.</p>.<p>ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ನಗರ ಪೊಲೀಸರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿದೆ.</p>.<p><strong>ಪವರ್ ಟಿವಿ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ</strong></p><p>ನವದೆಹಲಿ: ಪರವಾನಗಿ ನವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕದ ಪವರ್ ಟಿ.ವಿ ಚಾನಲ್ ಕಾರ್ಯ ಕ್ರಮಗಳ ಪ್ರಸಾರ ಸ್ಥಗಿತಗೊಳಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.</p><p>ಹೈಕೋರ್ಟ್ ಆದೇಶ ಪ್ರಶ್ನಿಸಿ, ‘ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ’, ‘ಮೆಸರ್ಸ್ ಮಿಟ್ಕಾನ್ ಇನ್ಫ್ರಾ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ’ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು, ‘ಇದು ಸಂಪೂರ್ಣ ರಾಜಕೀಯ ದ್ವೇಷವಲ್ಲದೆ ಬೇರೇನೂ ಅಲ್ಲ’ ಎಂದು ಅಭಿಪ್ರಾಯಪಟ್ಟಿತು.</p><p>‘ನಾವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಿಸಲು ಒಲವು ಹೊಂದಿದ್ದೇವೆ. ಇದು ರಾಜಕೀಯ ದ್ವೇಷದ ಸರಳ ಪ್ರಕರಣದಂತೆ ತೋರುತ್ತಿದೆ. ಅರ್ಜಿದಾರರನ್ನು ರಕ್ಷಿಸದಿದ್ದರೆ ಈ ನ್ಯಾಯಾಲಯವು ತನ್ನ ಕರ್ತವ್ಯದಲ್ಲಿ ವಿಫಲಗೊಳ್ಳು ತ್ತದೆ’ ಎಂದು ಪೀಠ ಹೇಳಿತು. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತು. ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. </p><p><strong>ಪ್ರಕರಣವೇನು?: </strong>‘ನಮ್ಮ ವಿರುದ್ಧ ಪವರ್ ಟಿ.ವಿ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ’ ಎಂದು ಆರೋಪಿಸಿ ಜೆಡಿಎಸ್ನ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು.</p><p>‘ಪವರ್ ಟಿ.ವಿ.ಚಾನಲ್, ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯ್ದೆ–1995ರ ಆದೇಶ ಉಲ್ಲಂಘಿಸಿರುವ ಕಾರಣ ಸುದ್ದಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು’ ಎಂದು ಜೂನ್ 25ರಂದು ಆದೇಶಿಸಿತ್ತು.</p>.<p><strong>ಬ್ಯಾಂಕ್ ಗ್ಯಾರಂಟಿ ಸಮರ್ಥನೀಯವಲ್ಲ: ಹೈಕೋರ್ಟ್</strong></p><p>‘ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲು ಬ್ಯಾಂಕ್ ಗ್ಯಾರಂಟಿ ಒದಗಿಸಬೇಕು ಎಂಬ ಷರತ್ತು ವಿಧಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p><p>ಈ ಸಂಬಂಧ ನಗರದ ವೈಭವ್ ರಾಜ್ ಉತ್ಸವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ<br>ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p><p>‘ಜಾಮೀನು ಮಂಜೂರು ವೇಳೆ ವಿಚಾರಣಾ ನ್ಯಾಯಾಲಯಗಳು ಬ್ಯಾಂಕ್ ಗ್ಯಾರಂಟಿ ನೀಡುವ ಷರತ್ತು ವಿಧಿಸುತ್ತಿ ರುವ ಪ್ರಕರಣಗಳು ಕಂಡು ಬರುತ್ತಿವೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಬ್ಯಾಂಕ್ ಗ್ಯಾರಂಟಿ ಹೊರತುಪಡಿಸಿ ಇತರೆ ಕಾನೂನು ಬದ್ಧ ಷರತ್ತುಗಳನ್ನು ವಿಧಿಸುವ ಅವಕಾಶ ಮುಕ್ತವಾಗಿರಲಿದೆ’ ಎಂದು ನ್ಯಾಯಪೀಠ ತಿಳಿಸಿದೆ. ಅಪರಾಧ<br>ಪ್ರಕರಣವೊಂದರಲ್ಲಿ ಜಾಮೀನು ಮಂಜೂರು ಮಾಡಿದ್ದ ವಿಚಾರಣಾ ನ್ಯಾಯಾಲಯ ಅರ್ಜಿದಾರರಿಗೆ ₹50 ಲಕ್ಷ ಮೊತ್ತದ ಬ್ಯಾಂಕ್ ಗ್ಯಾರಂಟಿ ಷರತ್ತು ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>