<p><strong>ಬೆಂಗಳೂರು</strong>: ಕಲಬುರಗಿ–ಬೆಂಗಳೂರು ಎಸ್ಎಂವಿಟಿ–ಕಲಬುರಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಯಾದಗಿರಿ ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ನೀಡುವ ನಿರ್ಧಾರವನ್ನು ದಕ್ಷಿಣ ಮಧ್ಯ ರೈಲ್ವೆಯು ಶುಕ್ರವಾರ ಹಿಂಪಡೆದಿದೆ.</p>.<p>‘ಯಾದಗಿರಿಯಲ್ಲಿ ಜುಲೈ 27ರಿಂದ ಒಂದು ನಿಮಿಷ ನಿಲುಗಡೆ ನೀಡಲಾಗುವುದು’ ಎಂದು ದಕ್ಷಿಣ ಮಧ್ಯ ರೈಲ್ವೆ ಗುರುವಾರ ಪ್ರಕಟಣೆ ನೀಡಿತ್ತು. ಒಂದೇ ದಿನದಲ್ಲಿ ಈ ನಿರ್ಧಾರದಿಂದ ಹಿಂದಕ್ಕೆ ಸರಿದಿದ್ದು, ‘ಮುಂದಿನ ಸಲಹೆ ಬರುವವರೆಗೆ ನಿಲುಗಡೆ ನಿರ್ಧಾರವನ್ನು ರದ್ದು ಮಾಡಲಾಗಿದೆ’ ಎಂದು ತಿಳಿಸಿದೆ.</p>.<p>ಗುರುವಾರ ಹೊರತುಪಡಿಸಿ ವಾರಕ್ಕೆ ಆರು ದಿನ ಸಂಚರಿಸುವ ಈ ವಂದೇ ಭಾರತ್ ರೈಲು ಕಳೆದ ಮಾರ್ಚ್ನಲ್ಲಿ ಆರಂಭವಾಗಿತ್ತು. ರಾಯಚೂರು ಜಂಕ್ಷನ್, ಮಂತ್ರಾಲಯ ರಸ್ತೆ, ಗುಂತಕಲ್ ಜಂಕ್ಷನ್, ಅನಂತಪುರ ಮತ್ತು ಯಲಹಂಕದಲ್ಲಿ ನಿಲುಗಡೆ ಹೊಂದಿತ್ತು. ಯಾದಗಿರಿಯಲ್ಲಿ ನಿಲುಗಡೆ ನೀಡಬೇಕು ಎಂದು ಪ್ರಯಾಣಿಕರು ಬೇಡಿಕೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಲಬುರಗಿ–ಬೆಂಗಳೂರು ಎಸ್ಎಂವಿಟಿ–ಕಲಬುರಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಯಾದಗಿರಿ ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ನೀಡುವ ನಿರ್ಧಾರವನ್ನು ದಕ್ಷಿಣ ಮಧ್ಯ ರೈಲ್ವೆಯು ಶುಕ್ರವಾರ ಹಿಂಪಡೆದಿದೆ.</p>.<p>‘ಯಾದಗಿರಿಯಲ್ಲಿ ಜುಲೈ 27ರಿಂದ ಒಂದು ನಿಮಿಷ ನಿಲುಗಡೆ ನೀಡಲಾಗುವುದು’ ಎಂದು ದಕ್ಷಿಣ ಮಧ್ಯ ರೈಲ್ವೆ ಗುರುವಾರ ಪ್ರಕಟಣೆ ನೀಡಿತ್ತು. ಒಂದೇ ದಿನದಲ್ಲಿ ಈ ನಿರ್ಧಾರದಿಂದ ಹಿಂದಕ್ಕೆ ಸರಿದಿದ್ದು, ‘ಮುಂದಿನ ಸಲಹೆ ಬರುವವರೆಗೆ ನಿಲುಗಡೆ ನಿರ್ಧಾರವನ್ನು ರದ್ದು ಮಾಡಲಾಗಿದೆ’ ಎಂದು ತಿಳಿಸಿದೆ.</p>.<p>ಗುರುವಾರ ಹೊರತುಪಡಿಸಿ ವಾರಕ್ಕೆ ಆರು ದಿನ ಸಂಚರಿಸುವ ಈ ವಂದೇ ಭಾರತ್ ರೈಲು ಕಳೆದ ಮಾರ್ಚ್ನಲ್ಲಿ ಆರಂಭವಾಗಿತ್ತು. ರಾಯಚೂರು ಜಂಕ್ಷನ್, ಮಂತ್ರಾಲಯ ರಸ್ತೆ, ಗುಂತಕಲ್ ಜಂಕ್ಷನ್, ಅನಂತಪುರ ಮತ್ತು ಯಲಹಂಕದಲ್ಲಿ ನಿಲುಗಡೆ ಹೊಂದಿತ್ತು. ಯಾದಗಿರಿಯಲ್ಲಿ ನಿಲುಗಡೆ ನೀಡಬೇಕು ಎಂದು ಪ್ರಯಾಣಿಕರು ಬೇಡಿಕೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>