<p><strong>ಕೆ.ಆರ್.ಪುರ:</strong> ಬೆಂಗಳೂರು ಪೂರ್ವ ತಾಲ್ಲೂಕಿನ ರಾಮಗೊಂಡನಹಳ್ಳಿ ಗ್ರಾಮದಲ್ಲಿ ವೆಂಕಟೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಹಾಗೂ ದ್ರೌಪದಮ್ಮ ಧರ್ಮರಾಯಸ್ವಾಮಿ ಕರಗಶಕ್ತೋತ್ಸವ ವಿಜೃಂಭಣೆಯಿಂದ ನೆರವೇರಿತು.</p>.<p>ರಥೋತ್ಸವದ ಅಂಗವಾಗಿ ವೆಂಕಟೇಶ್ವರ ಸ್ವಾಮಿ ದೇವಾಲಯ ಮತ್ತು ದ್ರೌಪದಮ್ಮ ಧರ್ಮರಾಯ ಸ್ವಾಮಿ, ಮಾರಮ್ಮ, ಮುನೇಶ್ವರ ದೇವಾಲಯ ಯಲ್ಲಮ್ಮ, ಆಂಜನೇಯ ಸ್ವಾಮಿ ಸೇರಿದಂತೆ ಗ್ರಾಮದ ದೇವಾಲಯಗಳಲ್ಲಿ ವಿಶೇಷ ಹೂವಿನ ಅಲಂಕಾರ, ಪೂಜಾ ಕೈಂಕರ್ಯಗಳು ನಡೆದವು.</p>.<p>ಗ್ರಾಮದ ಮುಖಂಡರು ಹಾಗೂ ಸಾವಿರಾರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇವರಿಗೆ ಪೂಜೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥ ಎಳೆಯುವ ಮೂಲಕ ದೇವರ ಸೇವೆಯಲ್ಲಿ ಪಾತ್ರರಾದರು.</p>.<p>ವರ್ತೂರು ಮಾರತ್ತಹಳ್ಳಿ ಮುಖ್ಯರಸ್ತೆ ಹಾಗೂ ರಾಮಗೊಂಡನಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ, ಪೂಜಾಕುಣಿತ, ನಾದಸ್ವರ, ವೀರಗಾಸೆ, ಗಾರುಡಿಗೊಂಬೆ, ಡೊಳ್ಳು ಕುಣಿತದೊಂದಿಗೆ ಬ್ರಹ್ಮರಥೋತ್ಸವ ಸಾಗಿತು.</p>.<p>ರಥೋತ್ಸವಕ್ಕೆ ರಾಮಗೊಂಡನಹಳ್ಳಿ, ಸಿದ್ದಾಪುರ, ನಲ್ಲೂರಹಳ್ಳಿ, ವೈಟ್ಫೀಲ್ಡ್, ವರ್ತೂರು, ವರ್ತೂರು ಕೋಡಿ, ಮಧುರನಗರ, ಗುಂಜೂರು, ಸೊರುಹುಣಸೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಬಡಾವಣೆಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ಪಾನಕ ಮಜ್ಜಿಗೆ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಬೆಂಗಳೂರು ಪೂರ್ವ ತಾಲ್ಲೂಕಿನ ರಾಮಗೊಂಡನಹಳ್ಳಿ ಗ್ರಾಮದಲ್ಲಿ ವೆಂಕಟೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಹಾಗೂ ದ್ರೌಪದಮ್ಮ ಧರ್ಮರಾಯಸ್ವಾಮಿ ಕರಗಶಕ್ತೋತ್ಸವ ವಿಜೃಂಭಣೆಯಿಂದ ನೆರವೇರಿತು.</p>.<p>ರಥೋತ್ಸವದ ಅಂಗವಾಗಿ ವೆಂಕಟೇಶ್ವರ ಸ್ವಾಮಿ ದೇವಾಲಯ ಮತ್ತು ದ್ರೌಪದಮ್ಮ ಧರ್ಮರಾಯ ಸ್ವಾಮಿ, ಮಾರಮ್ಮ, ಮುನೇಶ್ವರ ದೇವಾಲಯ ಯಲ್ಲಮ್ಮ, ಆಂಜನೇಯ ಸ್ವಾಮಿ ಸೇರಿದಂತೆ ಗ್ರಾಮದ ದೇವಾಲಯಗಳಲ್ಲಿ ವಿಶೇಷ ಹೂವಿನ ಅಲಂಕಾರ, ಪೂಜಾ ಕೈಂಕರ್ಯಗಳು ನಡೆದವು.</p>.<p>ಗ್ರಾಮದ ಮುಖಂಡರು ಹಾಗೂ ಸಾವಿರಾರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇವರಿಗೆ ಪೂಜೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥ ಎಳೆಯುವ ಮೂಲಕ ದೇವರ ಸೇವೆಯಲ್ಲಿ ಪಾತ್ರರಾದರು.</p>.<p>ವರ್ತೂರು ಮಾರತ್ತಹಳ್ಳಿ ಮುಖ್ಯರಸ್ತೆ ಹಾಗೂ ರಾಮಗೊಂಡನಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ, ಪೂಜಾಕುಣಿತ, ನಾದಸ್ವರ, ವೀರಗಾಸೆ, ಗಾರುಡಿಗೊಂಬೆ, ಡೊಳ್ಳು ಕುಣಿತದೊಂದಿಗೆ ಬ್ರಹ್ಮರಥೋತ್ಸವ ಸಾಗಿತು.</p>.<p>ರಥೋತ್ಸವಕ್ಕೆ ರಾಮಗೊಂಡನಹಳ್ಳಿ, ಸಿದ್ದಾಪುರ, ನಲ್ಲೂರಹಳ್ಳಿ, ವೈಟ್ಫೀಲ್ಡ್, ವರ್ತೂರು, ವರ್ತೂರು ಕೋಡಿ, ಮಧುರನಗರ, ಗುಂಜೂರು, ಸೊರುಹುಣಸೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಬಡಾವಣೆಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ಪಾನಕ ಮಜ್ಜಿಗೆ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>