<p><strong>ಬೆಂಗಳೂರು:</strong> ಧಾರ್ಮಿಕ ಆಚರಣೆ ಮತ್ತು ಸಾಂಸ್ಕೃತಿಕ ಹಬ್ಬದ ಸಮ್ಮಿಲನವಾಗಿರುವ ‘ದಸರಾ’ ನಗರದಲ್ಲಿ ಶುಕ್ರವಾರ ಮತ್ತು ಶನಿವಾರ ಜನರ ಸಂಭ್ರಮಕ್ಕೆ ಕಾರಣವಾಯಿತು. ಆಯುಧ ಪೂಜೆ ಮತ್ತು ವಿಜಯದಶಮಿ ಪ್ರಯುಕ್ತ ಮನೆ ಪೂಜೆ, ವಾಹನ ಪೂಜೆ, ಅಂಗಡಿ ಪೂಜೆಗಳನ್ನು ಸಡಗರದಿಂದ ನಡೆಸಲಾಯಿತು.</p>.<p><strong>ಜೆ.ಸಿ. ನಗರ ದಸರಾ: </strong></p>.<p>ಜೆ.ಸಿ.ನಗರ ದಸರಾ ಮಹೋತ್ಸವ ಸಮಿತಿ ಆಯೋಜಿಸಿದ್ದ ದಸರಾ ಮೆರವಣಿಗೆ ಕಳೆಗಟ್ಟಿ ಭಕ್ತರನ್ನು ಪುಳಕಿತಗೊಳಿಸಿತು. ಅಲಂಕೃತ ರಥಗಳಲ್ಲಿ ಸಾಲು ಸಾಲಾಗಿ ಬಂದ 90ಕ್ಕೂ ಹೆಚ್ಚು ಮೂರ್ತಿಗಳನ್ನು ಕಂಡು ಜನರು ಸಂಭ್ರಮಿಸಿದರು.</p>.<p>ಶಿವಾಜಿನಗರ, ಆರ್.ಟಿ. ನಗರ, ಲಕ್ಷ್ಮೀದೇವಮ್ಮ ಬ್ಲಾಕ್, ಸಿಬಿಐ ರಸ್ತೆ, ಮಠದಹಳ್ಳಿ, ಮೋತಿನಗರ, ಗಂಗೇನಹಳ್ಳಿ, ಸುಲ್ತಾನ್ಪಾಳ್ಯ, ಯಶವಂತಪುರ, ಹೆಬ್ಬಾಳ, ಗಂಗಾನಗರಗಳ ದೇವರ ಮೂರ್ತಿಗಳು ಅಲಂಕೃತಗೊಂಡ ರಥಗಳಲ್ಲಿ ಜೆ.ಸಿ.ನಗರದ ದಸರಾ ಮೈದಾನದತ್ತ ಸಾಗಿ ಬಂದವು.</p>.<p>ಮಧ್ಯರಾತ್ರಿ ಮೈದಾನಕ್ಕೆ ವಿವಿಧೆಡೆಯ ರಥಗಳು ಬಂದು ತಲುಪಿದ ನಂತರ ಬನ್ನಿಮರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆ ಕಣ್ತುಂಬಿಕೊಳ್ಳಲು ಜೆ.ಸಿ.ನಗರ ಮುಖ್ಯರಸ್ತೆ ಹಾಗೂ ಅರಮನೆ ರಸ್ತೆಯ ಇಕ್ಕೆಲಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು.</p>.<p>ಹೂವಿನ ಪಲ್ಲಕ್ಕಿ, ಪೂಜಾ ಕುಣಿತ, ಕೀಲು ಕುದುರೆ, ಕರಡಿ ಮೇಳ, ಗೊರವರ ಕುಣಿತ, ಪಟ ಕುಣಿತ, ಡೊಳ್ಳು ಕುಣಿತ ಮುಂತಾದ ಜನಪದ ಕಲಾತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದ್ದವು. ಅಲ್ಲಲ್ಲಿ ಪಟಾಕಿ ಸಿಡಿಸಲಾಯಿತು.</p>.<p>ಆಯುಧ ಪೂಜೆ: ಶುಕ್ರವಾರ ಮತ್ತು ಶನಿವಾರ ಕಾರು, ಬೈಕು ಇನ್ನಿತರ ವಾಹನಗಳನ್ನು ತೊಳೆದು, ಹೂವು, ಬಾಳೆ ಕಂದುಗಳಿಂದ ಅಲಂಕರಿಸಿ, ಬೂದು ಕುಂಬಳ ಒಡೆದು, ಕುಂಕುಮ ಹಚ್ಚಿ, ನಿಂಬೆ ಹಣ್ಣು ಚಕ್ರದಡಿಗೆ ಇಟ್ಟು ಆಯುಧ ಪೂಜೆ ನಡೆಸಿದರು. ಮನೆಯ ಮುಂದೆ ಆಕರ್ಷಕ ರಂಗೋಲಿ ಬಿಡಿಸಿ, ಮನೆ ದೇವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು. ಅಕ್ಕಪಕ್ಕದ ಮನೆಯವರು ಪರಸ್ಪರ ಸಿಹಿ ಹಂಚಿ ಶುಭ ಕೋರಿದರು.</p>.<p>ಇಸ್ಕಾನ್ನಲ್ಲಿಯೂ ಶ್ರದ್ಧಾಭಕ್ತಿಯಿಂದ ವಿಜಯದಶಮಿ ಆಚರಿಸಲಾಯಿತು. ಮಲ್ಲೇಶ್ವರದ ಕನ್ಯಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ರಾತ್ರಿವರೆಗೂ ಭಕ್ತರು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಆರ್.ಟಿ. ನಗರದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.</p>.<p>ಗಮನ ಸೆಳೆದ ಕನ್ನಡ ದಸರಾ: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಲ್ಲಿನ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ನಡೆದ ಕನ್ನಡ ದಸರಾ ಜನರ ಗಮನ ಸೆಳೆಯಿತು.</p>.<h2> ವೈಭವದ ದುರ್ಗಾ</h2>.<p> ಪೂಜೆ ನಗರದಲ್ಲಿ 150ಕ್ಕೂ ಹೆಚ್ಚು ಕಡೆ ವಿಜೃಂಭಣೆಯಿಂದ ದುರ್ಗಾ ಪೂಜೆ ಆಚರಿಸಿದ ಭಕ್ತರು ಶನಿವಾರ ವಿಸರ್ಜನೆ ಮಾಡಿದರು. ಬಂಗಾಲಿ ಸಮುದಾಯದ ಜನರು ಶ್ರದ್ಧಾ ಭಕ್ತಿಯಿಂದ ಧಾರ್ಮಿಕ ಆಚರಣೆಗಳನ್ನು ಕೈಗೊಂಡರು. </p><p>ಗಣಪತಿ ಮೂರ್ತಿಯಂತೆಯೇ ದುರ್ಗಾ ಮೂರ್ತಿಯನ್ನೂ ಪೆಂಡಾಲ್ಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಮ್ಯಾನ್ಫೋ ಕನ್ವೆನ್ಷನ್ ಸೆಂಟರ್ನಲ್ಲಿ ಐದು ದಿನಗಳು ಅದ್ಧೂರಿಯಿಂದ ಪೂಜೆಗಳು ನಡೆದವು. ದುರ್ಗಾ ಮೂರ್ತಿಯ ಮೆರವಣಿಗೆಯಲ್ಲಿ ಭಕ್ತರು ಕುಣಿದು ಸಂಭ್ರಮಿಸಿದರು. ಹಲಸೂರು ಮತ್ತು ಸ್ಯಾಂಕಿ ಕೆರೆಗಳಲ್ಲಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಧಾರ್ಮಿಕ ಆಚರಣೆ ಮತ್ತು ಸಾಂಸ್ಕೃತಿಕ ಹಬ್ಬದ ಸಮ್ಮಿಲನವಾಗಿರುವ ‘ದಸರಾ’ ನಗರದಲ್ಲಿ ಶುಕ್ರವಾರ ಮತ್ತು ಶನಿವಾರ ಜನರ ಸಂಭ್ರಮಕ್ಕೆ ಕಾರಣವಾಯಿತು. ಆಯುಧ ಪೂಜೆ ಮತ್ತು ವಿಜಯದಶಮಿ ಪ್ರಯುಕ್ತ ಮನೆ ಪೂಜೆ, ವಾಹನ ಪೂಜೆ, ಅಂಗಡಿ ಪೂಜೆಗಳನ್ನು ಸಡಗರದಿಂದ ನಡೆಸಲಾಯಿತು.</p>.<p><strong>ಜೆ.ಸಿ. ನಗರ ದಸರಾ: </strong></p>.<p>ಜೆ.ಸಿ.ನಗರ ದಸರಾ ಮಹೋತ್ಸವ ಸಮಿತಿ ಆಯೋಜಿಸಿದ್ದ ದಸರಾ ಮೆರವಣಿಗೆ ಕಳೆಗಟ್ಟಿ ಭಕ್ತರನ್ನು ಪುಳಕಿತಗೊಳಿಸಿತು. ಅಲಂಕೃತ ರಥಗಳಲ್ಲಿ ಸಾಲು ಸಾಲಾಗಿ ಬಂದ 90ಕ್ಕೂ ಹೆಚ್ಚು ಮೂರ್ತಿಗಳನ್ನು ಕಂಡು ಜನರು ಸಂಭ್ರಮಿಸಿದರು.</p>.<p>ಶಿವಾಜಿನಗರ, ಆರ್.ಟಿ. ನಗರ, ಲಕ್ಷ್ಮೀದೇವಮ್ಮ ಬ್ಲಾಕ್, ಸಿಬಿಐ ರಸ್ತೆ, ಮಠದಹಳ್ಳಿ, ಮೋತಿನಗರ, ಗಂಗೇನಹಳ್ಳಿ, ಸುಲ್ತಾನ್ಪಾಳ್ಯ, ಯಶವಂತಪುರ, ಹೆಬ್ಬಾಳ, ಗಂಗಾನಗರಗಳ ದೇವರ ಮೂರ್ತಿಗಳು ಅಲಂಕೃತಗೊಂಡ ರಥಗಳಲ್ಲಿ ಜೆ.ಸಿ.ನಗರದ ದಸರಾ ಮೈದಾನದತ್ತ ಸಾಗಿ ಬಂದವು.</p>.<p>ಮಧ್ಯರಾತ್ರಿ ಮೈದಾನಕ್ಕೆ ವಿವಿಧೆಡೆಯ ರಥಗಳು ಬಂದು ತಲುಪಿದ ನಂತರ ಬನ್ನಿಮರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆ ಕಣ್ತುಂಬಿಕೊಳ್ಳಲು ಜೆ.ಸಿ.ನಗರ ಮುಖ್ಯರಸ್ತೆ ಹಾಗೂ ಅರಮನೆ ರಸ್ತೆಯ ಇಕ್ಕೆಲಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು.</p>.<p>ಹೂವಿನ ಪಲ್ಲಕ್ಕಿ, ಪೂಜಾ ಕುಣಿತ, ಕೀಲು ಕುದುರೆ, ಕರಡಿ ಮೇಳ, ಗೊರವರ ಕುಣಿತ, ಪಟ ಕುಣಿತ, ಡೊಳ್ಳು ಕುಣಿತ ಮುಂತಾದ ಜನಪದ ಕಲಾತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದ್ದವು. ಅಲ್ಲಲ್ಲಿ ಪಟಾಕಿ ಸಿಡಿಸಲಾಯಿತು.</p>.<p>ಆಯುಧ ಪೂಜೆ: ಶುಕ್ರವಾರ ಮತ್ತು ಶನಿವಾರ ಕಾರು, ಬೈಕು ಇನ್ನಿತರ ವಾಹನಗಳನ್ನು ತೊಳೆದು, ಹೂವು, ಬಾಳೆ ಕಂದುಗಳಿಂದ ಅಲಂಕರಿಸಿ, ಬೂದು ಕುಂಬಳ ಒಡೆದು, ಕುಂಕುಮ ಹಚ್ಚಿ, ನಿಂಬೆ ಹಣ್ಣು ಚಕ್ರದಡಿಗೆ ಇಟ್ಟು ಆಯುಧ ಪೂಜೆ ನಡೆಸಿದರು. ಮನೆಯ ಮುಂದೆ ಆಕರ್ಷಕ ರಂಗೋಲಿ ಬಿಡಿಸಿ, ಮನೆ ದೇವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು. ಅಕ್ಕಪಕ್ಕದ ಮನೆಯವರು ಪರಸ್ಪರ ಸಿಹಿ ಹಂಚಿ ಶುಭ ಕೋರಿದರು.</p>.<p>ಇಸ್ಕಾನ್ನಲ್ಲಿಯೂ ಶ್ರದ್ಧಾಭಕ್ತಿಯಿಂದ ವಿಜಯದಶಮಿ ಆಚರಿಸಲಾಯಿತು. ಮಲ್ಲೇಶ್ವರದ ಕನ್ಯಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ರಾತ್ರಿವರೆಗೂ ಭಕ್ತರು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಆರ್.ಟಿ. ನಗರದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.</p>.<p>ಗಮನ ಸೆಳೆದ ಕನ್ನಡ ದಸರಾ: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಲ್ಲಿನ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ನಡೆದ ಕನ್ನಡ ದಸರಾ ಜನರ ಗಮನ ಸೆಳೆಯಿತು.</p>.<h2> ವೈಭವದ ದುರ್ಗಾ</h2>.<p> ಪೂಜೆ ನಗರದಲ್ಲಿ 150ಕ್ಕೂ ಹೆಚ್ಚು ಕಡೆ ವಿಜೃಂಭಣೆಯಿಂದ ದುರ್ಗಾ ಪೂಜೆ ಆಚರಿಸಿದ ಭಕ್ತರು ಶನಿವಾರ ವಿಸರ್ಜನೆ ಮಾಡಿದರು. ಬಂಗಾಲಿ ಸಮುದಾಯದ ಜನರು ಶ್ರದ್ಧಾ ಭಕ್ತಿಯಿಂದ ಧಾರ್ಮಿಕ ಆಚರಣೆಗಳನ್ನು ಕೈಗೊಂಡರು. </p><p>ಗಣಪತಿ ಮೂರ್ತಿಯಂತೆಯೇ ದುರ್ಗಾ ಮೂರ್ತಿಯನ್ನೂ ಪೆಂಡಾಲ್ಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಮ್ಯಾನ್ಫೋ ಕನ್ವೆನ್ಷನ್ ಸೆಂಟರ್ನಲ್ಲಿ ಐದು ದಿನಗಳು ಅದ್ಧೂರಿಯಿಂದ ಪೂಜೆಗಳು ನಡೆದವು. ದುರ್ಗಾ ಮೂರ್ತಿಯ ಮೆರವಣಿಗೆಯಲ್ಲಿ ಭಕ್ತರು ಕುಣಿದು ಸಂಭ್ರಮಿಸಿದರು. ಹಲಸೂರು ಮತ್ತು ಸ್ಯಾಂಕಿ ಕೆರೆಗಳಲ್ಲಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>