<p><strong>ಬೆಂಗಳೂರು</strong>: ನಗರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 192 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಟ್ಟು ₹96 ಸಾವಿರ ದಂಡ ವಸೂಲು ಮಾಡಲಾಗಿದೆ.</p>.<p>ರಸ್ತೆಗಳಲ್ಲಿ ಏಕಮುಖ ಸಂಚಾರ ನಿಯಮ ಉಲ್ಲಂಘಿಸಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಪೂರ್ವ ವಿಭಾಗದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ವಾಹನಗಳ ತಪಾಸಣೆ ನಡೆಸಿದ್ದಾರೆ. ಈ ಪೈಕಿ 167 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸಿದ ಪ್ರಕರಣದಲ್ಲಿ 25 ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ.</p>.<p><strong>ಟ್ಯಾಂಕರ್ ತಪಾಸಣೆ</strong>: 216 ವಾಟರ್ ಟ್ಯಾಂಕರ್ಗಳನ್ನು ತಪಾಸಣೆ ಮಾಡಿ, ದಾಖಲಾತಿ ಹೊಂದಿರದ 94 ವಾಹನಗಳ ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಒಟ್ಟು ₹44,500 ದಂಡ ವಸೂಲು ಮಾಡಲಾಗಿದೆ. </p>.<p>ಸುಗಮ ವಾಹನ ಸಂಚಾರಕ್ಕೆ ಸವಾರರು ಕಡ್ಡಾಯವಾಗಿ ನಿಯಮ ಪಾಲಿಸಬೇಕು. ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗುವುದು ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 192 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಟ್ಟು ₹96 ಸಾವಿರ ದಂಡ ವಸೂಲು ಮಾಡಲಾಗಿದೆ.</p>.<p>ರಸ್ತೆಗಳಲ್ಲಿ ಏಕಮುಖ ಸಂಚಾರ ನಿಯಮ ಉಲ್ಲಂಘಿಸಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಪೂರ್ವ ವಿಭಾಗದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ವಾಹನಗಳ ತಪಾಸಣೆ ನಡೆಸಿದ್ದಾರೆ. ಈ ಪೈಕಿ 167 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸಿದ ಪ್ರಕರಣದಲ್ಲಿ 25 ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ.</p>.<p><strong>ಟ್ಯಾಂಕರ್ ತಪಾಸಣೆ</strong>: 216 ವಾಟರ್ ಟ್ಯಾಂಕರ್ಗಳನ್ನು ತಪಾಸಣೆ ಮಾಡಿ, ದಾಖಲಾತಿ ಹೊಂದಿರದ 94 ವಾಹನಗಳ ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಒಟ್ಟು ₹44,500 ದಂಡ ವಸೂಲು ಮಾಡಲಾಗಿದೆ. </p>.<p>ಸುಗಮ ವಾಹನ ಸಂಚಾರಕ್ಕೆ ಸವಾರರು ಕಡ್ಡಾಯವಾಗಿ ನಿಯಮ ಪಾಲಿಸಬೇಕು. ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗುವುದು ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>