<p>ಬೆಂಗಳೂರು: ‘ಶಾಸ್ತ್ರೀಯ ನೃತ್ಯವು ಸಾಂಸ್ಕೃತಿಕ ಜಗತ್ತಿನ ಅವಿಭಾಜ್ಯ ಅಂಗ. ಈ ಕಲಾ ಪ್ರಕಾರವನ್ನು ರಾಜ ಮಹಾರಾಜರ ಕಾಲದಿಂದಲೂ ಪ್ರೋತ್ಸಾಹಿಸುತ್ತಾ ಬರಲಾಗಿದೆ’ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ತಿಳಿಸಿದರು. </p>.<p>ಸೃಷ್ಟಿ ಅಭಿನಯ ಕಲಾವಿದರ ಕೇಂದ್ರ ನಗರದಲ್ಲಿ ಬುಧವಾರ ಹಮ್ಮಿಕೊಂಡ ವಿಶ್ವ ನೃತ್ಯ ದಿನಾಚರಣೆ, ಮಾಯಾರಾವ್ ಸ್ಮರಣಾರ್ಥ ಕಥಕ್ ಉತ್ಸವದಲ್ಲಿ ಕಲಾವಿದೆ ಲಕ್ಷ್ಮಿ ಗೋಪಾಲಸ್ವಾಮಿ ಅವರಿಗೆ ‘ಸೃಷ್ಟಿ ರಾಷ್ಟ್ರೀಯ ನೃತ್ಯ ಪರಿಣತಿ ಪ್ರಶಸ್ತಿ’ ಪ್ರದಾನ ಮಾಡಿ, ಮಾತನಾಡಿದರು. </p>.<p>‘ನೃತ್ಯದ ಬಗ್ಗೆ ವಿವಿಧ ಶಾಸನಗಳಲ್ಲಿಯೂ ಉಲ್ಲೇಖಿಸಲಾಗಿದೆ. ಸ್ವಾತಂತ್ರ್ಯ ದೊರೆತ ಬಳಿಕ ಸಂಘ–ಸಂಸ್ಥೆಗಳು ನೃತ್ಯ ಸೇರಿ ವಿವಿಧ ಕಲಾ ಪ್ರಕಾರವನ್ನು ಪ್ರೋತ್ಸಾಹಿಸಿ, ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುತ್ತಿವೆ. ಇದು ಶ್ಲಾಘನೀಯ ಕಾರ್ಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. </p>.<p>ಸೃಷ್ಟಿ ಅಭಿನಯ ಕಲಾವಿದರ ಕೇಂದ್ರದ ನಿರ್ದೇಶಕ ಎ.ವಿ. ಸತ್ಯನಾರಾಯಣ, ‘ನೃತ್ಯವು ಮನರಂಜನೆ ಮಾತ್ರವಾಗಿರದೆ, ಅಷ್ಟಾಂಗ ಸೇವೆಯಲ್ಲಿ ಒಂದಾಗಿದೆ. ನಮ್ಮ ಸಂಸ್ಕೃತಿಯಲ್ಲಿಯೇ ನೃತ್ಯ ಇದೆ. ಹೋಳಿ, ಗಣೇಶ ಹಬ್ಬ ವಿವಿಧ ಸಂದರ್ಭದಲ್ಲಿ ನೃತ್ಯ ಕಾಣಬಹುದಾಗಿದ್ದು, ಈ ಕಲಾ ಪ್ರಕಾರ ಜೀವನದ ಅವಿಭಾಜ್ಯ ಅಂಗವಾಗಿದೆ’ ಎಂದು ಹೇಳಿದರು. </p>.<p>ಪ್ರಶಸ್ತಿ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದ ಲಕ್ಷ್ಮಿ ಗೋಪಾಲಸ್ವಾಮಿ, ‘ಅಭಿನಯ ಮತ್ತು ನೃತ್ಯದಲ್ಲಿ ಯಶಸ್ಸು ಸಾಧಿಸಲು ಸರಿಯಾದ ಹಾದಿಯಲ್ಲಿ ಸಾಗಬೇಕು. ಈ ಗೌರವವು ಸಂತೋಷ ನೀಡಿದೆ’ ಎಂದರು. </p>.<p>ಇದೇ ವೇಳೆ ಕಲಾವಿದರು ಭರತನಾಟ್ಯ, ಕುಚಿಪುಡಿ, ಒಡಿಸ್ಸಿ, ಕಥಕ್ ಸೇರಿ ವಿವಿಧ ನೃತ್ಯ ಪ್ರಕಾರದಲ್ಲಿ ಪ್ರದರ್ಶನ ನೀಡಿದರು. ಎ.ವಿ. ಸತ್ಯನಾರಾಯಣ ಅವರು ನಾಟ್ಯ ಸಂಯೋಜನೆ ಮಾಡಿರುವ ‘ಭಜ ಗೋವಿಂದಂ’ ನೃತ್ಯ ನಾಟಕ ಪ್ರದರ್ಶನವೂ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಶಾಸ್ತ್ರೀಯ ನೃತ್ಯವು ಸಾಂಸ್ಕೃತಿಕ ಜಗತ್ತಿನ ಅವಿಭಾಜ್ಯ ಅಂಗ. ಈ ಕಲಾ ಪ್ರಕಾರವನ್ನು ರಾಜ ಮಹಾರಾಜರ ಕಾಲದಿಂದಲೂ ಪ್ರೋತ್ಸಾಹಿಸುತ್ತಾ ಬರಲಾಗಿದೆ’ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ತಿಳಿಸಿದರು. </p>.<p>ಸೃಷ್ಟಿ ಅಭಿನಯ ಕಲಾವಿದರ ಕೇಂದ್ರ ನಗರದಲ್ಲಿ ಬುಧವಾರ ಹಮ್ಮಿಕೊಂಡ ವಿಶ್ವ ನೃತ್ಯ ದಿನಾಚರಣೆ, ಮಾಯಾರಾವ್ ಸ್ಮರಣಾರ್ಥ ಕಥಕ್ ಉತ್ಸವದಲ್ಲಿ ಕಲಾವಿದೆ ಲಕ್ಷ್ಮಿ ಗೋಪಾಲಸ್ವಾಮಿ ಅವರಿಗೆ ‘ಸೃಷ್ಟಿ ರಾಷ್ಟ್ರೀಯ ನೃತ್ಯ ಪರಿಣತಿ ಪ್ರಶಸ್ತಿ’ ಪ್ರದಾನ ಮಾಡಿ, ಮಾತನಾಡಿದರು. </p>.<p>‘ನೃತ್ಯದ ಬಗ್ಗೆ ವಿವಿಧ ಶಾಸನಗಳಲ್ಲಿಯೂ ಉಲ್ಲೇಖಿಸಲಾಗಿದೆ. ಸ್ವಾತಂತ್ರ್ಯ ದೊರೆತ ಬಳಿಕ ಸಂಘ–ಸಂಸ್ಥೆಗಳು ನೃತ್ಯ ಸೇರಿ ವಿವಿಧ ಕಲಾ ಪ್ರಕಾರವನ್ನು ಪ್ರೋತ್ಸಾಹಿಸಿ, ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುತ್ತಿವೆ. ಇದು ಶ್ಲಾಘನೀಯ ಕಾರ್ಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. </p>.<p>ಸೃಷ್ಟಿ ಅಭಿನಯ ಕಲಾವಿದರ ಕೇಂದ್ರದ ನಿರ್ದೇಶಕ ಎ.ವಿ. ಸತ್ಯನಾರಾಯಣ, ‘ನೃತ್ಯವು ಮನರಂಜನೆ ಮಾತ್ರವಾಗಿರದೆ, ಅಷ್ಟಾಂಗ ಸೇವೆಯಲ್ಲಿ ಒಂದಾಗಿದೆ. ನಮ್ಮ ಸಂಸ್ಕೃತಿಯಲ್ಲಿಯೇ ನೃತ್ಯ ಇದೆ. ಹೋಳಿ, ಗಣೇಶ ಹಬ್ಬ ವಿವಿಧ ಸಂದರ್ಭದಲ್ಲಿ ನೃತ್ಯ ಕಾಣಬಹುದಾಗಿದ್ದು, ಈ ಕಲಾ ಪ್ರಕಾರ ಜೀವನದ ಅವಿಭಾಜ್ಯ ಅಂಗವಾಗಿದೆ’ ಎಂದು ಹೇಳಿದರು. </p>.<p>ಪ್ರಶಸ್ತಿ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದ ಲಕ್ಷ್ಮಿ ಗೋಪಾಲಸ್ವಾಮಿ, ‘ಅಭಿನಯ ಮತ್ತು ನೃತ್ಯದಲ್ಲಿ ಯಶಸ್ಸು ಸಾಧಿಸಲು ಸರಿಯಾದ ಹಾದಿಯಲ್ಲಿ ಸಾಗಬೇಕು. ಈ ಗೌರವವು ಸಂತೋಷ ನೀಡಿದೆ’ ಎಂದರು. </p>.<p>ಇದೇ ವೇಳೆ ಕಲಾವಿದರು ಭರತನಾಟ್ಯ, ಕುಚಿಪುಡಿ, ಒಡಿಸ್ಸಿ, ಕಥಕ್ ಸೇರಿ ವಿವಿಧ ನೃತ್ಯ ಪ್ರಕಾರದಲ್ಲಿ ಪ್ರದರ್ಶನ ನೀಡಿದರು. ಎ.ವಿ. ಸತ್ಯನಾರಾಯಣ ಅವರು ನಾಟ್ಯ ಸಂಯೋಜನೆ ಮಾಡಿರುವ ‘ಭಜ ಗೋವಿಂದಂ’ ನೃತ್ಯ ನಾಟಕ ಪ್ರದರ್ಶನವೂ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>