ಶನಿವಾರ, 28 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಳೆಯಿಂದ ಆಗಿರುವ ಅನಾಹುತದ ಚಿತ್ರಾವಳಿ

Published : 26 ಏಪ್ರಿಲ್ 2015, 20:33 IST
ಫಾಲೋ ಮಾಡಿ
Comments

ನಗರದ ಕೆ.ಎಚ್‌. ರಸ್ತೆ ಹಿಂಭಾಗದ ಶ್ರೀನಿವಾಸ ಕಾಲೊನಿಯಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ರಾಜಕಾಲುವೆ ದುರಸ್ತಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳೀಯ ನಿವಾಸಿಗಳನ್ನು ಸಂಕಷ್ಟಕ್ಕೆ ದೂಡಿದೆ. ಮೂರು ತಿಂಗಳ ಹಿಂದೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿತ್ತು. ಮೂರು ತಿಂಗಳ ಬಳಿಕವೂ ಕಾಮಗಾರಿಯಲ್ಲಿ ಹೆಚ್ಚಿನ ಪ್ರಗತಿ ಆಗಿಲ್ಲ. ರಾಜಕಾಲುವೆಯಲ್ಲಿದ್ದ ಹೂಳನ್ನು ರಸ್ತೆ ಮೇಲೆಯೇ ಹಾಕಲಾಗಿದೆ.

ಇದರಿಂದಾಗಿ  ನಿವಾಸಿಗಳು ಮೂಗು ಮುಚ್ಚಿಕೊಂಡು ತಿರುಗಾಡಬೇಕಿದೆ. ಇನ್ನೊಂದೆಡೆ, ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಸಂಕಷ್ಟವನ್ನು ದುಪ್ಪಟ್ಟುಗೊಳಿಸಿದೆ.  10 ನಿಮಿಷದ ಮಳೆಯಾದರೂ ಮನೆಗೆ ನೀರು ನುಗ್ಗುತ್ತಿದೆ.

‘ಕಾಮಗಾರಿಯ ವೇಗ ನೋಡಿದರೆ ಪೂರ್ಣಗೊಳ್ಳಲು ಇನ್ನೂ ಆರು ತಿಂಗಳು ಬೇಕು ಎನಿಸುತ್ತದೆ. ನಾಲ್ಕು ಮಳೆಗೆ ಬದುಕು ಸಾಕಾಗಿದೆ. ಮಳೆಗಾಲದ ಸ್ಥಿತಿ ಎಣಿಸುವಾಗ ಕಣ್ಣೀರು ಬರುತ್ತದೆ’ ಎಂದು ಸ್ಥಳೀಯ ನಿವಾಸಿಯೊಬ್ಬರು ನೊಂದು ನುಡಿಯುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT