<p><strong>ಬೀದರ್:</strong> ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕ, ಸಿರಿಗನ್ನಡ ವೇದಿಕೆ, ರೂಪಾ ಕಲೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ಟ್ರಸ್ಟ್ ಸಹಯೋಗದಲ್ಲಿ ಮಹಿಳಾ ದಿನಾಚರಣೆ, ಆಶಾ ಕಾರ್ಯಕರ್ತೆಯರ ಸನ್ಮಾನ ನಗರದ ಕುಂಬಾರವಾಡದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.</p>.<p>ಡಾ. ವೈಶಾಲಿ ಕಾರ್ಯಕ್ರಮ ಉದ್ಘಾಟಿಸಿ, ಆಶಾ ಕಾರ್ಯಕರ್ತೆಯರು ಸಮಾಜಕ್ಕಾಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಸನ್ಮಾನಿಸಿರುವುದು ಶ್ಲಾಘನಾರ್ಹ ಎಂದರು.</p>.<p>ಸುವರ್ಣ ಧನ್ನೂರ ಮಾತನಾಡಿ, ಹೆಣ್ಣುಮಕ್ಕಳು ಯಾರಿಗೂ ಕಮ್ಮಿ ಇಲ್ಲ. ಅವರ ಕನಸು ಸಾಕಾರಗೊಳಿಸಲು ಎಲ್ಲರೂ ಸಹಕಾರ ಕೊಡಬೇಕು ಎಂದು ಹೇಳಿದರು. </p>.<p>ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ರೂಪ ಪಾಟೀಲ ಮಾತನಾಡಿ, ಮಹಿಳೆಯರನ್ನು ಮಹಿಳೆಯರು ಗೌರವಿಸಿ, ಸಹಕರಿಸಬೇಕು. ಹೆಣ್ಣು ಹೆಣ್ಣಿಗೆ ಶತ್ರು ಎನ್ನುವುದನ್ನು ಮರೆಯಬೇಕು. ಹೆಣ್ಣು ಮಕ್ಕಳು ಮುಂದೆ ಬರಲು ಸಾಧ್ಯವಾಗುತ್ತದೆ ಎಂದರು.</p>.<p>ಪ್ರಾಧ್ಯಾಪಕಿ ವಿದ್ಯಾವತಿ ಬಲ್ಲೂರ್ ಮಾತನಾಡಿ, ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಅವಳು ಅಬಲೆಯಲ್ಲ ಸಬಲೆ ಎಂದು ಹೇಳಿದರು.</p>.<p>ಶ್ರೇಯಾ ಮಹಿಂದ್ರಕರ್, ಸ್ವರೂಪರಾಣಿ ನಾಗೂರೆ, ದೀಪಿಕಾ ರಗಟೆ, ಸುಜಾತ ಹೊಸಮನಿ, ಸ್ಫೂರ್ತಿ ಧನ್ನೂರ ಹಾಜರಿದ್ದರು. 19 ಜನ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು . </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕ, ಸಿರಿಗನ್ನಡ ವೇದಿಕೆ, ರೂಪಾ ಕಲೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ಟ್ರಸ್ಟ್ ಸಹಯೋಗದಲ್ಲಿ ಮಹಿಳಾ ದಿನಾಚರಣೆ, ಆಶಾ ಕಾರ್ಯಕರ್ತೆಯರ ಸನ್ಮಾನ ನಗರದ ಕುಂಬಾರವಾಡದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.</p>.<p>ಡಾ. ವೈಶಾಲಿ ಕಾರ್ಯಕ್ರಮ ಉದ್ಘಾಟಿಸಿ, ಆಶಾ ಕಾರ್ಯಕರ್ತೆಯರು ಸಮಾಜಕ್ಕಾಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಸನ್ಮಾನಿಸಿರುವುದು ಶ್ಲಾಘನಾರ್ಹ ಎಂದರು.</p>.<p>ಸುವರ್ಣ ಧನ್ನೂರ ಮಾತನಾಡಿ, ಹೆಣ್ಣುಮಕ್ಕಳು ಯಾರಿಗೂ ಕಮ್ಮಿ ಇಲ್ಲ. ಅವರ ಕನಸು ಸಾಕಾರಗೊಳಿಸಲು ಎಲ್ಲರೂ ಸಹಕಾರ ಕೊಡಬೇಕು ಎಂದು ಹೇಳಿದರು. </p>.<p>ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ರೂಪ ಪಾಟೀಲ ಮಾತನಾಡಿ, ಮಹಿಳೆಯರನ್ನು ಮಹಿಳೆಯರು ಗೌರವಿಸಿ, ಸಹಕರಿಸಬೇಕು. ಹೆಣ್ಣು ಹೆಣ್ಣಿಗೆ ಶತ್ರು ಎನ್ನುವುದನ್ನು ಮರೆಯಬೇಕು. ಹೆಣ್ಣು ಮಕ್ಕಳು ಮುಂದೆ ಬರಲು ಸಾಧ್ಯವಾಗುತ್ತದೆ ಎಂದರು.</p>.<p>ಪ್ರಾಧ್ಯಾಪಕಿ ವಿದ್ಯಾವತಿ ಬಲ್ಲೂರ್ ಮಾತನಾಡಿ, ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಅವಳು ಅಬಲೆಯಲ್ಲ ಸಬಲೆ ಎಂದು ಹೇಳಿದರು.</p>.<p>ಶ್ರೇಯಾ ಮಹಿಂದ್ರಕರ್, ಸ್ವರೂಪರಾಣಿ ನಾಗೂರೆ, ದೀಪಿಕಾ ರಗಟೆ, ಸುಜಾತ ಹೊಸಮನಿ, ಸ್ಫೂರ್ತಿ ಧನ್ನೂರ ಹಾಜರಿದ್ದರು. 19 ಜನ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು . </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>