<p><strong>ಔರಾದ್</strong>: ಸ್ಮಶಾನ ಭೂಮಿ ಅತಿಕ್ರಮಣ ತೆರವಿಗಾಗಿ ಆಗ್ರಹಿಸಿ ವ್ಯಾಪಾರಿ ಸಂಘ ಇದೇ 29ರಂದು ಔರಾದ್ ಬಂದ್ಗೆ ಕರೆ ನೀಡಿದೆ.</p>.<p>ವಿವಿಧ ಸಂಘಟನೆಗಳು ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಮಂಗಳವಾರ 5ನೇ ದಿನಕ್ಕೆ ಕಾಲಿಟ್ಟಿದ್ದು, ವ್ಯಾಪಾರಿ ಸಂಘದ ಮುಖಂಡರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.</p>.<p>ಸ್ಮಶಾನ ಭೂಮಿ ಅತಿಕ್ರಮಣ ತೆರವು ಬೇಡಿಕೆ ಬಹಳ ಹಳೆಯದು. ಈ ವಿಷಯದಲ್ಲಿ ಹಿಂದೂಗಳು ಶಾಂತ ರೀತಿಯಿಂದ ಹೋರಾಟ ಮಾಡುತ್ತಾ ಬಂದ್ದಿದ್ದಾರೆ. ಆದರೆ, ಆಡಳಿತ ವರ್ಗ ಮಾತ್ರ ಬೇಡಿಕೆಯನ್ನು ಹಗುರುವಾಗಿ ಪರಿಗಣಿಸಿದ ಕಾರಣ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಈಗ ನಾವು ಕೂಡ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದು ವ್ಯಾಪಾರಿ ಸಂಘದ ಅಧ್ಯಕ್ಷ ಸಂದೀಪ ಮೀಸೆ ತಿಳಿಸಿದ್ದಾರೆ.</p>.<p>ಸಂಘದ ಉಪಾಧ್ಯಕ್ಷ ನಾಗರಾಜ ಉಪ್ಪೆ, ರೇವಣಪ್ಪ ಜಾಂತೆ, ಸಂಜು ನೌಬಾದೆ, ನಂದು ಜೀರ್ಗೆ, ಸಚಿನ್ ಗಿರಣೆ, ವಿಜಯಕುಮಾರ ನಿರ್ಮಳೆ, ಆನಂದ ಘುಳೆ, ಬಾಲರಾಜ ಯಂಡೆ, ಅಂಬರೇಶ್ ದೇಶಮುಖ ಇಂದಿನ ಧರಣಿಯಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ಸ್ಮಶಾನ ಭೂಮಿ ಅತಿಕ್ರಮಣ ತೆರವಿಗಾಗಿ ಆಗ್ರಹಿಸಿ ವ್ಯಾಪಾರಿ ಸಂಘ ಇದೇ 29ರಂದು ಔರಾದ್ ಬಂದ್ಗೆ ಕರೆ ನೀಡಿದೆ.</p>.<p>ವಿವಿಧ ಸಂಘಟನೆಗಳು ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಮಂಗಳವಾರ 5ನೇ ದಿನಕ್ಕೆ ಕಾಲಿಟ್ಟಿದ್ದು, ವ್ಯಾಪಾರಿ ಸಂಘದ ಮುಖಂಡರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.</p>.<p>ಸ್ಮಶಾನ ಭೂಮಿ ಅತಿಕ್ರಮಣ ತೆರವು ಬೇಡಿಕೆ ಬಹಳ ಹಳೆಯದು. ಈ ವಿಷಯದಲ್ಲಿ ಹಿಂದೂಗಳು ಶಾಂತ ರೀತಿಯಿಂದ ಹೋರಾಟ ಮಾಡುತ್ತಾ ಬಂದ್ದಿದ್ದಾರೆ. ಆದರೆ, ಆಡಳಿತ ವರ್ಗ ಮಾತ್ರ ಬೇಡಿಕೆಯನ್ನು ಹಗುರುವಾಗಿ ಪರಿಗಣಿಸಿದ ಕಾರಣ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಈಗ ನಾವು ಕೂಡ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದು ವ್ಯಾಪಾರಿ ಸಂಘದ ಅಧ್ಯಕ್ಷ ಸಂದೀಪ ಮೀಸೆ ತಿಳಿಸಿದ್ದಾರೆ.</p>.<p>ಸಂಘದ ಉಪಾಧ್ಯಕ್ಷ ನಾಗರಾಜ ಉಪ್ಪೆ, ರೇವಣಪ್ಪ ಜಾಂತೆ, ಸಂಜು ನೌಬಾದೆ, ನಂದು ಜೀರ್ಗೆ, ಸಚಿನ್ ಗಿರಣೆ, ವಿಜಯಕುಮಾರ ನಿರ್ಮಳೆ, ಆನಂದ ಘುಳೆ, ಬಾಲರಾಜ ಯಂಡೆ, ಅಂಬರೇಶ್ ದೇಶಮುಖ ಇಂದಿನ ಧರಣಿಯಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>