<p><strong>ಭಾಲ್ಕಿ</strong>: ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳು ಸೂರ್ಯ-ಚಂದ್ರ ಇರುವರೆಗೂ ಶಾಶ್ವತವಾಗಿ ಉಳಿಯಲಿವೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.</p>.<p>ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಶನಿವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಬಸವಣ್ಣನವರು ಕಂದಾಚಾರ, ಮೌಢ್ಯತೆ, ಅಸ್ಪೃಶ್ಯತೆ, ಜಾತೀಯತೆ ವಿರುದ್ಧ ಹೋರಾಡಿದರು. ವಚನಗಳನ್ನು ರಚಿಸಿ ಜಾಗೃತಿ ಮೂಡಿಸಿದರು. ಮಹಿಳೆಯರಿಗೆ ಸ್ವಾತಂತ್ರ್ಯ ಕಲ್ಪಿಸಿ ಸಮ ಸಮಾಜದ ಕಲ್ಪನೆ ಬಿತ್ತಿದ್ದರು. ಎಲ್ಲ ಸಮುದಾಯದ ಶರಣರನ್ನು ಅನುಭವ ಮಂಟಪದಲ್ಲಿ ಸೇರಿಸಿ ಸಮಾನತೆ ಸಾರಿದರು ಎಂದು ತಿಳಿಸಿದರು.</p>.<p>ಬಸವಣ್ಣನವರ ತತ್ವಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಾರ ಗೌರವ ಇದೆ. ಬರುವ ದಿನಗಳಲ್ಲಿ ಬಸವ ಜಯಂತಿಯನ್ನು ಕೇಂದ್ರ ಸರಕಾರದ ವತಿಯಿಂದ ದೇಶಾದ್ಯಂತ ಆಚರಿಸಲು ಕ್ರಮ ಜರುಗಿಸಬೇಕು. ಬಸವಣ್ಣನವರ ವಿಚಾರಧಾರೆ ಎಲ್ಲೆಡೆ ಪಸರಿಸಲು ಬಸವಲಿಂಗ ಪಟ್ಟದ್ದೇವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಮನವಿ ಮೇರೆಗೆ ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಘೋಷಣೆ ಮಾಡುವುದರ ಜತೆಗೆ ವಿಶ್ವ ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಮಾಡುತ್ತಿರುವುದು ಅತ್ಯಂತ ಸಂತಸದ ಸಂಗತಿ ಎಂದು ನುಡಿದರು.</p>.<p>ಬಸವಲಿಂಗ ದೇವರು ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಬಿಡುಗಡೆಗೊಳಿಸಿದರು.</p>.<p>ಯುವ ಮುಖಂಡ ಸಾಗರ ಖಂಡ್ರೆ, ಪ್ರಮುಖರಾದ ಬಸವರಾಜ ವಂಕೆ, ಹಿರಿಯ ವಕೀಲ ರಾಜಶೇಖರ ಅಷ್ಟೂರೆ, ತಾಲ್ಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ವಕೀಲ ಶ್ರೀಕಾಂತ ಭೋರಾಳೆ, ತಾಲ್ಲೂಕು ಕರವೇ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ, ಕಸಾಪ ನಗರ ಘಟಕದ ಅಧ್ಯಕ್ಷ ಸಂತೋಷ ಬಿಜಿ ಪಾಟೀಲ, ಅಶೋಕ ಬಾವುಗೆ, ಕಪಿಲ್ ಕಲ್ಯಾಣೆ, ಮಲ್ಲಿಕಾರ್ಜುನ ಬಿರಾದಾರ, ಪ್ರಶಾಂತ ಕೊಟಗೀರಾ, ರಾಜಕುಮಾರ ಬಾವುಗೆ, ಸುನಿತಾ ಮಮ್ಮಾ, ಬಸವರಾಜ ಮರೆ, ದೀಪಕ ಠಮಕೆ ಸೇರಿದಂತೆ ಬಸವಾಭಿಮಾನಿಗಳು, ಅಕ್ಕನ ಬಳಗದ ಶರಣೆಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳು ಸೂರ್ಯ-ಚಂದ್ರ ಇರುವರೆಗೂ ಶಾಶ್ವತವಾಗಿ ಉಳಿಯಲಿವೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.</p>.<p>ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಶನಿವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಬಸವಣ್ಣನವರು ಕಂದಾಚಾರ, ಮೌಢ್ಯತೆ, ಅಸ್ಪೃಶ್ಯತೆ, ಜಾತೀಯತೆ ವಿರುದ್ಧ ಹೋರಾಡಿದರು. ವಚನಗಳನ್ನು ರಚಿಸಿ ಜಾಗೃತಿ ಮೂಡಿಸಿದರು. ಮಹಿಳೆಯರಿಗೆ ಸ್ವಾತಂತ್ರ್ಯ ಕಲ್ಪಿಸಿ ಸಮ ಸಮಾಜದ ಕಲ್ಪನೆ ಬಿತ್ತಿದ್ದರು. ಎಲ್ಲ ಸಮುದಾಯದ ಶರಣರನ್ನು ಅನುಭವ ಮಂಟಪದಲ್ಲಿ ಸೇರಿಸಿ ಸಮಾನತೆ ಸಾರಿದರು ಎಂದು ತಿಳಿಸಿದರು.</p>.<p>ಬಸವಣ್ಣನವರ ತತ್ವಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಾರ ಗೌರವ ಇದೆ. ಬರುವ ದಿನಗಳಲ್ಲಿ ಬಸವ ಜಯಂತಿಯನ್ನು ಕೇಂದ್ರ ಸರಕಾರದ ವತಿಯಿಂದ ದೇಶಾದ್ಯಂತ ಆಚರಿಸಲು ಕ್ರಮ ಜರುಗಿಸಬೇಕು. ಬಸವಣ್ಣನವರ ವಿಚಾರಧಾರೆ ಎಲ್ಲೆಡೆ ಪಸರಿಸಲು ಬಸವಲಿಂಗ ಪಟ್ಟದ್ದೇವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಮನವಿ ಮೇರೆಗೆ ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಘೋಷಣೆ ಮಾಡುವುದರ ಜತೆಗೆ ವಿಶ್ವ ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಮಾಡುತ್ತಿರುವುದು ಅತ್ಯಂತ ಸಂತಸದ ಸಂಗತಿ ಎಂದು ನುಡಿದರು.</p>.<p>ಬಸವಲಿಂಗ ದೇವರು ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಬಿಡುಗಡೆಗೊಳಿಸಿದರು.</p>.<p>ಯುವ ಮುಖಂಡ ಸಾಗರ ಖಂಡ್ರೆ, ಪ್ರಮುಖರಾದ ಬಸವರಾಜ ವಂಕೆ, ಹಿರಿಯ ವಕೀಲ ರಾಜಶೇಖರ ಅಷ್ಟೂರೆ, ತಾಲ್ಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ವಕೀಲ ಶ್ರೀಕಾಂತ ಭೋರಾಳೆ, ತಾಲ್ಲೂಕು ಕರವೇ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ, ಕಸಾಪ ನಗರ ಘಟಕದ ಅಧ್ಯಕ್ಷ ಸಂತೋಷ ಬಿಜಿ ಪಾಟೀಲ, ಅಶೋಕ ಬಾವುಗೆ, ಕಪಿಲ್ ಕಲ್ಯಾಣೆ, ಮಲ್ಲಿಕಾರ್ಜುನ ಬಿರಾದಾರ, ಪ್ರಶಾಂತ ಕೊಟಗೀರಾ, ರಾಜಕುಮಾರ ಬಾವುಗೆ, ಸುನಿತಾ ಮಮ್ಮಾ, ಬಸವರಾಜ ಮರೆ, ದೀಪಕ ಠಮಕೆ ಸೇರಿದಂತೆ ಬಸವಾಭಿಮಾನಿಗಳು, ಅಕ್ಕನ ಬಳಗದ ಶರಣೆಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>