<p><strong>ಬೀದರ್:</strong> ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡವರು ಹಾಗೂ ಅದನ್ನು ಕೊಟ್ಟಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.</p>.<p>ಈ ಸಂಬಂಧ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.</p>.<p>ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಕೊಡುವುದರ ಮೂಲಕ ಶತಮಾನಗಳಿಂದ ಶೋಷಣೆಗೊಳಗಾಗಿರುವ ಅಸ್ಪೃಶ್ಯ ಸಮುದಾಯಗಳನ್ನು ಮೀಸಲಾತಿಯಿಂದ ವಂಚಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.</p>.<p>ಈಗಷ್ಟೇ ಅಸ್ಪೃಶ್ಯರು ಉನ್ನತ ಶಿಕ್ಷಣ, ಸರ್ಕಾರಿ ಹುದ್ದೆಗಳಿಗೆ ಸೇರುತ್ತಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೆ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಮೀಸಲಾತಿ ಕಸಿಯುವ ಹುನ್ನಾರ ನಡೆಸುತ್ತಿವೆ. ಬೇಡಜಂಗಮ, ಬೋವಿ ಮತ್ತು ಮಾಲಜಂಗಮ ಪದಗಳನ್ನು ದುರುಪಯೋಗ ಪಡಿಸಿಕೊಂಡು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಅಧಿಕಾರಿಗಳು ಕೊಡುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ದಾಖಲೆಗಳನ್ನು ಪರಿಶೀಲಿಸದೆ ಹೀಗೆ ಮಾಡುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.</p>.<p>ಸಮಿತಿ ಗೌರವ ಅಧ್ಯಕ್ಷ ಉಮೇಶಕುಮಾರ ಸೋರಳ್ಳಿಕರ, ಜಿಲ್ಲಾಧ್ಯಕ್ಷ ಅಭಿ ಕಾಳೆ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಮೂಲಭಾರತಿ, ಪ್ರಮುಖರಾದ ಮಹೇಶ ಗೋರನಾಳ್, ರಾಜಕುಮಾರ ಗುನ್ನಳ್ಳಿ, ಸಂತೋಷ ಎಣಕೂರೆ, ಚಂದ್ರಕಾಂತ ಆರ್. ನಿರಾಟೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡವರು ಹಾಗೂ ಅದನ್ನು ಕೊಟ್ಟಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.</p>.<p>ಈ ಸಂಬಂಧ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.</p>.<p>ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಕೊಡುವುದರ ಮೂಲಕ ಶತಮಾನಗಳಿಂದ ಶೋಷಣೆಗೊಳಗಾಗಿರುವ ಅಸ್ಪೃಶ್ಯ ಸಮುದಾಯಗಳನ್ನು ಮೀಸಲಾತಿಯಿಂದ ವಂಚಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.</p>.<p>ಈಗಷ್ಟೇ ಅಸ್ಪೃಶ್ಯರು ಉನ್ನತ ಶಿಕ್ಷಣ, ಸರ್ಕಾರಿ ಹುದ್ದೆಗಳಿಗೆ ಸೇರುತ್ತಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೆ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಮೀಸಲಾತಿ ಕಸಿಯುವ ಹುನ್ನಾರ ನಡೆಸುತ್ತಿವೆ. ಬೇಡಜಂಗಮ, ಬೋವಿ ಮತ್ತು ಮಾಲಜಂಗಮ ಪದಗಳನ್ನು ದುರುಪಯೋಗ ಪಡಿಸಿಕೊಂಡು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಅಧಿಕಾರಿಗಳು ಕೊಡುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ದಾಖಲೆಗಳನ್ನು ಪರಿಶೀಲಿಸದೆ ಹೀಗೆ ಮಾಡುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.</p>.<p>ಸಮಿತಿ ಗೌರವ ಅಧ್ಯಕ್ಷ ಉಮೇಶಕುಮಾರ ಸೋರಳ್ಳಿಕರ, ಜಿಲ್ಲಾಧ್ಯಕ್ಷ ಅಭಿ ಕಾಳೆ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಮೂಲಭಾರತಿ, ಪ್ರಮುಖರಾದ ಮಹೇಶ ಗೋರನಾಳ್, ರಾಜಕುಮಾರ ಗುನ್ನಳ್ಳಿ, ಸಂತೋಷ ಎಣಕೂರೆ, ಚಂದ್ರಕಾಂತ ಆರ್. ನಿರಾಟೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>