ಗೋವಿಂದ ರೆಡ್ಡಿ ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಬೀದರ್ ಡಿಸಿಯಾಗಿ ನಿಯೋಜನೆಗೊಂಡಿರುವ ಶಿಲ್ಪಾ ಶರ್ಮಾ ಅವರು ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದರು.
ಎರಡು ದಿನಗಳ ಹಿಂದೆ ಎಸ್ಪಿ ಚನ್ನಬಸವಣ್ಣ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿತ್ತು. ಇದರ ಬೆನ್ನಲ್ಲೇ ಡಿಸಿ ವರ್ಗಾವಣೆ ಮಾಡಿದೆ.