<p><strong>ಔರಾದ್:</strong> ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ) ಕಾಮಗಾರಿ ಪರಿಶೀಲಿಸಿದರು.</p>.<p>ಖಾನಾಪುರ ಅರಣ್ಯ ಪ್ರದೇಶದಲ್ಲಿ ನೀರು ಮತ್ತು ಮಣ್ಣು ಸಂರಕ್ಷಣೆ ಮಾಡುವ ಸಿಸಿಟಿ ಕಾಮಗಾರಿ ಪರಿಶೀಲಿಸಿ ಕೆಲ ಹೊತ್ತು ಕಾರ್ಮಿಕರ ಜತೆ ಮಾತನಾಡಿಸಿದರು.</p>.<p>‘ಇಲ್ಲಿ ಕೆಲಸ ಮಾಡಲು ನಿಮಗೇನಾದರೂ ತೊಂದರೆ ಆಗುತ್ತಿದೆಯಾ, ಕೂಲಿ ಹಣ ಸಮಯಕ್ಕೆ ಸರಿಯಾಗಿ ಬರುತ್ತಿದೆಯಾ’ ಎಂದು ಕೇಳಿದರು.</p>.<p>’ನೀವು ನಿರಂತರ ಕೆಲಸ ಮಾಡಿದರೆ ನಿಮ್ಮ ಕುಟುಂಬಕ್ಕೆ ಆರ್ಥಿಕ ನೆರವು ಸಿಗುತ್ತದೆ. ನಗರ ಪ್ರದೇಶಗಳಿಗೆ ವಲಸೆ ಹೋಗಿ ಕೆಲಸ ಮಾಡುವುದಕ್ಕಿಂತ ನಿಮ್ಮ ಊರಲ್ಲೇ ಉಳಿದು ಕೆಲಸ ಮಾಡಿದರೆ ತುಂಬಾನೇ ಅನುಕೂಲ. ಈ ನರೇಗಾ ಯೋಜನೆಯಲ್ಲಿ ರೈತರು ತಮ್ಮ ಹೊಲದಲ್ಲಿ ತಾವೇ ಕೆಲಸ ಮಾಡಿಕೊಂಡರೂ ಕೂಲಿ ಹಣ ಸಿಗುತ್ತದೆ’ ಎಂದು ಹೇಳಿದರು.</p>.<p>ಮೆಡಪಳ್ಳಿ ಕೆರೆಗೆ ಭೇಟಿ ನೀಡಿದ ಉಪ ಕಾರ್ಯದರ್ಶಿಗಳು ಕೆರೆ ಹೂಳೆತ್ತುವ ಕಾಮಗಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ರೀತಿಯ ಕಾಮಗಾರಿಯಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸುದೇಶ್, ‘ತಾಲ್ಲೂಕಿನಲ್ಲಿ 2000 ಸಾವಿರಕ್ಕೂ ಹೆಚ್ಚು ನರೇಗಾ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕೆಲಸ ಕೇಳಲು ಬಂದ ಎಲ್ಲರಿಗೂ ಕೆಲಸ ಕೊಡುವಂತೆ ಎಲ್ಲ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ, ಸುಭಾಷ ಬುಯ್ಯಾ, ನರೇಗಾ ತಾಂತ್ರಿಕ ಸಂಯೋಜಕ ಆನಂದ, ಸಿಇಸಿ ಸಂಯೋಜಕಿ ಓಶಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ) ಕಾಮಗಾರಿ ಪರಿಶೀಲಿಸಿದರು.</p>.<p>ಖಾನಾಪುರ ಅರಣ್ಯ ಪ್ರದೇಶದಲ್ಲಿ ನೀರು ಮತ್ತು ಮಣ್ಣು ಸಂರಕ್ಷಣೆ ಮಾಡುವ ಸಿಸಿಟಿ ಕಾಮಗಾರಿ ಪರಿಶೀಲಿಸಿ ಕೆಲ ಹೊತ್ತು ಕಾರ್ಮಿಕರ ಜತೆ ಮಾತನಾಡಿಸಿದರು.</p>.<p>‘ಇಲ್ಲಿ ಕೆಲಸ ಮಾಡಲು ನಿಮಗೇನಾದರೂ ತೊಂದರೆ ಆಗುತ್ತಿದೆಯಾ, ಕೂಲಿ ಹಣ ಸಮಯಕ್ಕೆ ಸರಿಯಾಗಿ ಬರುತ್ತಿದೆಯಾ’ ಎಂದು ಕೇಳಿದರು.</p>.<p>’ನೀವು ನಿರಂತರ ಕೆಲಸ ಮಾಡಿದರೆ ನಿಮ್ಮ ಕುಟುಂಬಕ್ಕೆ ಆರ್ಥಿಕ ನೆರವು ಸಿಗುತ್ತದೆ. ನಗರ ಪ್ರದೇಶಗಳಿಗೆ ವಲಸೆ ಹೋಗಿ ಕೆಲಸ ಮಾಡುವುದಕ್ಕಿಂತ ನಿಮ್ಮ ಊರಲ್ಲೇ ಉಳಿದು ಕೆಲಸ ಮಾಡಿದರೆ ತುಂಬಾನೇ ಅನುಕೂಲ. ಈ ನರೇಗಾ ಯೋಜನೆಯಲ್ಲಿ ರೈತರು ತಮ್ಮ ಹೊಲದಲ್ಲಿ ತಾವೇ ಕೆಲಸ ಮಾಡಿಕೊಂಡರೂ ಕೂಲಿ ಹಣ ಸಿಗುತ್ತದೆ’ ಎಂದು ಹೇಳಿದರು.</p>.<p>ಮೆಡಪಳ್ಳಿ ಕೆರೆಗೆ ಭೇಟಿ ನೀಡಿದ ಉಪ ಕಾರ್ಯದರ್ಶಿಗಳು ಕೆರೆ ಹೂಳೆತ್ತುವ ಕಾಮಗಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ರೀತಿಯ ಕಾಮಗಾರಿಯಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸುದೇಶ್, ‘ತಾಲ್ಲೂಕಿನಲ್ಲಿ 2000 ಸಾವಿರಕ್ಕೂ ಹೆಚ್ಚು ನರೇಗಾ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕೆಲಸ ಕೇಳಲು ಬಂದ ಎಲ್ಲರಿಗೂ ಕೆಲಸ ಕೊಡುವಂತೆ ಎಲ್ಲ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ, ಸುಭಾಷ ಬುಯ್ಯಾ, ನರೇಗಾ ತಾಂತ್ರಿಕ ಸಂಯೋಜಕ ಆನಂದ, ಸಿಇಸಿ ಸಂಯೋಜಕಿ ಓಶಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>