<p><strong>ಬೀದರ್:</strong> ‘ಬೀದರ್ ವಿಶ್ವವಿದ್ಯಾಲಯವು ಕನ್ನಟ ಕಟ್ಟುವ ಮಹತ್ವದ ಕೆಲಸ ಮಾಡುತ್ತಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು.</p>.<p>ಸೋಮವಾರ ಸಂಜೆ ವಿ.ವಿ.ಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿ ಭಾಗದಲ್ಲಿ ಕನ್ನಡ ಕಟ್ಟುವ ಜವಾಬ್ದಾರಿ ಬೀದರ್ ವಿ.ವಿ. ಮೇಲಿದೆ. ವಿಶ್ವವಿದ್ಯಾಲಯವು ಕನ್ನಡಪರ ಚಟುವಟಿಕೆಗಳನ್ನು ಹಮ್ಮಿಕೊಂಡು ಕನ್ನಡದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಿದೆ ಎಂದರು.</p>.<p>ಬೀದರ್ ಜಿಲ್ಲೆಯಲ್ಲಿ ನೂತನ ವಿಶ್ವವಿದ್ಯಾಲಯ ಆರಂಭವಾಗಿರುವುದು ಹೆಮ್ಮೆಯ ಸಂಗತಿ. ಕನ್ನಡದ ಹಲವು ಪ್ರಥಮಗಳ ಪುಣ್ಯಭೂಮಿ ಶರಣರ ಬೀಡು, ಈ ಕಲ್ಯಾಣ ಕರ್ನಾಟಕವಾಗಿದೆ. ಕವಿರಾಜಮಾರ್ಗ, ವಡ್ಡಾರಾಧನೆ ಹುಟ್ಟಿದ್ದು ಈ ಭಾಗದಲ್ಲಿ. ಬೌದ್ಧ ಧರ್ಮದ ನೆಲೆ ಇಲ್ಲಿದೆ. ನಾಗಾವಿ ವಿಶ್ವವಿದ್ಯಾಲಯ ಈ ಭಾಗದಲ್ಲಿತ್ತು. ಜಗತ್ತಿನ ಮೊದಲ ಸಂಸತ್ತು ಅನುಭವ ಮಂಟಪ ಸ್ಥಾಪನೆಯಾಗಿದ್ದು ಬಸವಕಲ್ಯಾಣದಲ್ಲಿ. ದೇವರುಗಳಿಗೆ ಕನ್ನಡ ಕಲಿಸಿದ ವಚನಕಾರರ ನೆಲೆ ಈ ಪ್ರದೇಶವಾಗಿದೆ. ಈ ಪ್ರದೇಶ ಸೇರಿದಂತೆ ರಾಜ್ಯದಲ್ಲಿ ಎಲ್ಲರೂ ಸೇರಿ ಕನ್ನಡವನ್ನು ಉಳಿಸಿ, ಬೆಳೆಸುವ ಕೆಲಸ ಮಾಡೋಣ ಎಂದು ಹೇಳಿದರು.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ ಮಾತನಾಡಿ, ಬೀದರ್ ವಿಶ್ವವಿದ್ಯಾಲಯದ ಪರಿಸರವು ಸಾಹಿತ್ತಿಕವಾಗಿ ಶ್ರೀಮಂತವಾಗಿದೆ. ಇಲ್ಲಿನ ಸ್ಮಾರಕಗಳು, ಕೋಟೆ ಕೊತ್ತಲಗಳು ಈ ಭಾಗದ ಶ್ರೀಮಂತಿಕೆಯನ್ನು ಸಾರುತ್ತವೆ. ವಿದ್ಯಾರ್ಥಿಗಳಿಗೆ ಈ ಭಾಗದ ಸಮಗ್ರ ತಿಳಿವಳಿಕೆಯ ಅವಶ್ಯಕತೆಯಿದೆ ಎಂದರು.</p>.<p>ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಮಾತನಾಡಿ, ಬೀದರ್ ವಿಶ್ವವಿದ್ಯಾಲಯವು ಕನ್ನಡದ ಅಭಿವೃದ್ಧಿಗೆ ಸದಾ ಸಿದ್ಧವಿದೆ. ಆ ದಿಶೆಯಲ್ಲಿ ಕನ್ನಡಪರ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಗಡಿ ಭಾಗದಲ್ಲಿ ಕನ್ನಡ ಕಟ್ಟುವ ಕೆಲಸ ನಿರಂತರವಾಗಿ ಮುಂದುವರೆಯುತ್ತದೆ. ಕನ್ನಡ ಸಾಹಿತ್ಯ ಬೆಳವಣಿಗೆಗಾಗಿ ಇಷ್ಟರಲ್ಲೇ ವಿಶ್ವವಿದ್ಯಾಲಯದಲ್ಲಿ ಪ್ರಸಾರಾಂಗ ಆರಂಭಿಸಲಾಗುತ್ತದೆ. ಕನ್ನಡದ ಉಳಿವಿಗಾಗಿ ಪದವಿಯ ನಾಲ್ಕು ಸೆಮಿಸ್ಟರ್ಗಳಲ್ಲಿ ಕನ್ನಡ ಬೋಧನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.</p>.<p>ಕುಲಸಚಿವ ಮೊಹಮ್ಮದ್ ಶಕೀಲ್, ಭಾಷಾ ನಿಕಾಯದ ನಿವೃತ್ತ ಡೀನ್ ಜಗನ್ನಾಥ ಹೆಬ್ಬಾಳೆ, ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ದೇವಿದಾಸ ತುಮಕುಂಟೆ, ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ವಿಜಯಕುಮಾರ ಸೋನಾರೆ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಸಿದ್ರಾಮ ಸಿಂಧೆ, ವಿಶೇಷಾಧಿಕಾರಿ ರವೀಂದ್ರನಾಥ ಗಬಾಡಿ, ಕನ್ನಡ ವಿಭಾಗದ ರಾಮಚಂದ್ರ ಗಣಾಪೂರ, ಶಿವರಾಜ ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಬೀದರ್ ವಿಶ್ವವಿದ್ಯಾಲಯವು ಕನ್ನಟ ಕಟ್ಟುವ ಮಹತ್ವದ ಕೆಲಸ ಮಾಡುತ್ತಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು.</p>.<p>ಸೋಮವಾರ ಸಂಜೆ ವಿ.ವಿ.ಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿ ಭಾಗದಲ್ಲಿ ಕನ್ನಡ ಕಟ್ಟುವ ಜವಾಬ್ದಾರಿ ಬೀದರ್ ವಿ.ವಿ. ಮೇಲಿದೆ. ವಿಶ್ವವಿದ್ಯಾಲಯವು ಕನ್ನಡಪರ ಚಟುವಟಿಕೆಗಳನ್ನು ಹಮ್ಮಿಕೊಂಡು ಕನ್ನಡದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಿದೆ ಎಂದರು.</p>.<p>ಬೀದರ್ ಜಿಲ್ಲೆಯಲ್ಲಿ ನೂತನ ವಿಶ್ವವಿದ್ಯಾಲಯ ಆರಂಭವಾಗಿರುವುದು ಹೆಮ್ಮೆಯ ಸಂಗತಿ. ಕನ್ನಡದ ಹಲವು ಪ್ರಥಮಗಳ ಪುಣ್ಯಭೂಮಿ ಶರಣರ ಬೀಡು, ಈ ಕಲ್ಯಾಣ ಕರ್ನಾಟಕವಾಗಿದೆ. ಕವಿರಾಜಮಾರ್ಗ, ವಡ್ಡಾರಾಧನೆ ಹುಟ್ಟಿದ್ದು ಈ ಭಾಗದಲ್ಲಿ. ಬೌದ್ಧ ಧರ್ಮದ ನೆಲೆ ಇಲ್ಲಿದೆ. ನಾಗಾವಿ ವಿಶ್ವವಿದ್ಯಾಲಯ ಈ ಭಾಗದಲ್ಲಿತ್ತು. ಜಗತ್ತಿನ ಮೊದಲ ಸಂಸತ್ತು ಅನುಭವ ಮಂಟಪ ಸ್ಥಾಪನೆಯಾಗಿದ್ದು ಬಸವಕಲ್ಯಾಣದಲ್ಲಿ. ದೇವರುಗಳಿಗೆ ಕನ್ನಡ ಕಲಿಸಿದ ವಚನಕಾರರ ನೆಲೆ ಈ ಪ್ರದೇಶವಾಗಿದೆ. ಈ ಪ್ರದೇಶ ಸೇರಿದಂತೆ ರಾಜ್ಯದಲ್ಲಿ ಎಲ್ಲರೂ ಸೇರಿ ಕನ್ನಡವನ್ನು ಉಳಿಸಿ, ಬೆಳೆಸುವ ಕೆಲಸ ಮಾಡೋಣ ಎಂದು ಹೇಳಿದರು.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ ಮಾತನಾಡಿ, ಬೀದರ್ ವಿಶ್ವವಿದ್ಯಾಲಯದ ಪರಿಸರವು ಸಾಹಿತ್ತಿಕವಾಗಿ ಶ್ರೀಮಂತವಾಗಿದೆ. ಇಲ್ಲಿನ ಸ್ಮಾರಕಗಳು, ಕೋಟೆ ಕೊತ್ತಲಗಳು ಈ ಭಾಗದ ಶ್ರೀಮಂತಿಕೆಯನ್ನು ಸಾರುತ್ತವೆ. ವಿದ್ಯಾರ್ಥಿಗಳಿಗೆ ಈ ಭಾಗದ ಸಮಗ್ರ ತಿಳಿವಳಿಕೆಯ ಅವಶ್ಯಕತೆಯಿದೆ ಎಂದರು.</p>.<p>ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಮಾತನಾಡಿ, ಬೀದರ್ ವಿಶ್ವವಿದ್ಯಾಲಯವು ಕನ್ನಡದ ಅಭಿವೃದ್ಧಿಗೆ ಸದಾ ಸಿದ್ಧವಿದೆ. ಆ ದಿಶೆಯಲ್ಲಿ ಕನ್ನಡಪರ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಗಡಿ ಭಾಗದಲ್ಲಿ ಕನ್ನಡ ಕಟ್ಟುವ ಕೆಲಸ ನಿರಂತರವಾಗಿ ಮುಂದುವರೆಯುತ್ತದೆ. ಕನ್ನಡ ಸಾಹಿತ್ಯ ಬೆಳವಣಿಗೆಗಾಗಿ ಇಷ್ಟರಲ್ಲೇ ವಿಶ್ವವಿದ್ಯಾಲಯದಲ್ಲಿ ಪ್ರಸಾರಾಂಗ ಆರಂಭಿಸಲಾಗುತ್ತದೆ. ಕನ್ನಡದ ಉಳಿವಿಗಾಗಿ ಪದವಿಯ ನಾಲ್ಕು ಸೆಮಿಸ್ಟರ್ಗಳಲ್ಲಿ ಕನ್ನಡ ಬೋಧನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.</p>.<p>ಕುಲಸಚಿವ ಮೊಹಮ್ಮದ್ ಶಕೀಲ್, ಭಾಷಾ ನಿಕಾಯದ ನಿವೃತ್ತ ಡೀನ್ ಜಗನ್ನಾಥ ಹೆಬ್ಬಾಳೆ, ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ದೇವಿದಾಸ ತುಮಕುಂಟೆ, ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ವಿಜಯಕುಮಾರ ಸೋನಾರೆ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಸಿದ್ರಾಮ ಸಿಂಧೆ, ವಿಶೇಷಾಧಿಕಾರಿ ರವೀಂದ್ರನಾಥ ಗಬಾಡಿ, ಕನ್ನಡ ವಿಭಾಗದ ರಾಮಚಂದ್ರ ಗಣಾಪೂರ, ಶಿವರಾಜ ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>