ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಮೀಸಲಾತಿ ಇರಬೇಕೇ ವಿನಃ ಅದರಲ್ಲಿ ಪ್ರತ್ಯೇಕತೆ ಸಲ್ಲದು. ಆದರೆ, ಬಿಜೆಪಿ ಸಮಾಜಗಳಲ್ಲಿ ಒಡಕು ಮೂಡಿಸಿ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿದೆ. ಪರಿಶಿಷ್ಟರಲ್ಲಿ 101 ಜಾತಿಗಳು ಒಳಗೊಂಡಿದ್ದು, ಎಲ್ಲರೂ ಒಟ್ಟಾಗಿದ್ದೆವು ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.