<p>ಬೀದರ್: ರಾಜ್ಯ ಸರ್ಕಾರವು ರೈತ ಉತ್ಪಾದಕರ ಸಂಸ್ಥೆಗಳಿಗೆ (ಎಫ್ಪಿಒ) ಬಾಕಿ ಇರುವ ಹಣ ಬಿಡುಗಡೆಗೊಳಿಸಬೇಕು ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಆಗ್ರಹಿಸಿದೆ.</p>.<p>ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಮೋರ್ಚಾ ಪ್ರಮುಖರು ನಗರದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.</p>.<p>‘ಕೇಂದ್ರದ ಮಾದರಿಯಂತೆ ರಾಜ್ಯ ಸರ್ಕಾರ ಎಫ್ಪಿಒ ರಚನೆ ಮಾಡಿದೆ. ಆದರೆ, ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಸ್ವಾತಂತ್ರ್ಯ ಅಮೃತ ನೆನಪಿಗಾಗಿ ಅಮೃತ ರೈತ ಉತ್ಪಾದಕರ ಸಂಸ್ಥೆಗಳನ್ನು ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಚನೆ ಮಾಡಲಾಗಿತ್ತು. 2021-22ರಿಂದ ಈವರೆಗೆ ರಾಜ್ಯದಲ್ಲಿ 490 ರೈತ ಉತ್ಪಾದಕರ ಸಂಸ್ಥೆಗಳು ರಚನೆಯಾಗಿವೆ. ಅಂದಾಜು ₹150 ಕೋಟಿ ಅನುದಾನ ಬಿಡುಗಡೆ ಮಾಡಬೇಕಿದೆ. ಇದರಲ್ಲಿ ಶೇ.12ರಷ್ಟು ಅನುದಾನ ಹಿಂದಿನ ಬಿಜೆಪಿ ಸರ್ಕಾರ ಬಿಡುಗಡೆಗೊಳಿಸಿದೆ. ಅನುದಾನ ಕೊಡದ ಕಾರಣ ರೈತ ಉತ್ಪಾದಕರ ಸಂಸ್ಥೆಗಳ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ಆರೋಪಿಸಿದರು.</p>.<p>ಅನುದಾನ ಬಿಡುಗಡೆಯಾಗದ ಕಾರಣ ಹತ್ತು ಲಕ್ಷ ರೈತರಿಗೆ ಮತ್ತು ಹನ್ನೆರಡು ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಬಾಕಿ ಇರುವ ಅನುದಾನವನ್ನು ಸಂಸ್ಥೆಗಳಿಗೆ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.</p>.<p>ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಂಜುಕುಮಾರ ಪಾಟೀಲ, ಪಕ್ಷದ ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್, ಪ್ರಮುಖರಾದ ರಾಜೇಂದ್ರ ಪೂಜಾರಿ, ಮಹೇಶ ಪಾಲಂ, ಚಂದ್ರಶೇಖರ ಪಾಟೀಲ, ನಾಗರಾಜ ಕರ್ಪೂರ, ರಾಜಕುಮಾರ ಹರಕಂಚಿ, ಸುದರ್ಶನ, ವೆಂಕಟ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ರಾಜ್ಯ ಸರ್ಕಾರವು ರೈತ ಉತ್ಪಾದಕರ ಸಂಸ್ಥೆಗಳಿಗೆ (ಎಫ್ಪಿಒ) ಬಾಕಿ ಇರುವ ಹಣ ಬಿಡುಗಡೆಗೊಳಿಸಬೇಕು ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಆಗ್ರಹಿಸಿದೆ.</p>.<p>ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಮೋರ್ಚಾ ಪ್ರಮುಖರು ನಗರದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.</p>.<p>‘ಕೇಂದ್ರದ ಮಾದರಿಯಂತೆ ರಾಜ್ಯ ಸರ್ಕಾರ ಎಫ್ಪಿಒ ರಚನೆ ಮಾಡಿದೆ. ಆದರೆ, ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಸ್ವಾತಂತ್ರ್ಯ ಅಮೃತ ನೆನಪಿಗಾಗಿ ಅಮೃತ ರೈತ ಉತ್ಪಾದಕರ ಸಂಸ್ಥೆಗಳನ್ನು ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಚನೆ ಮಾಡಲಾಗಿತ್ತು. 2021-22ರಿಂದ ಈವರೆಗೆ ರಾಜ್ಯದಲ್ಲಿ 490 ರೈತ ಉತ್ಪಾದಕರ ಸಂಸ್ಥೆಗಳು ರಚನೆಯಾಗಿವೆ. ಅಂದಾಜು ₹150 ಕೋಟಿ ಅನುದಾನ ಬಿಡುಗಡೆ ಮಾಡಬೇಕಿದೆ. ಇದರಲ್ಲಿ ಶೇ.12ರಷ್ಟು ಅನುದಾನ ಹಿಂದಿನ ಬಿಜೆಪಿ ಸರ್ಕಾರ ಬಿಡುಗಡೆಗೊಳಿಸಿದೆ. ಅನುದಾನ ಕೊಡದ ಕಾರಣ ರೈತ ಉತ್ಪಾದಕರ ಸಂಸ್ಥೆಗಳ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ಆರೋಪಿಸಿದರು.</p>.<p>ಅನುದಾನ ಬಿಡುಗಡೆಯಾಗದ ಕಾರಣ ಹತ್ತು ಲಕ್ಷ ರೈತರಿಗೆ ಮತ್ತು ಹನ್ನೆರಡು ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಬಾಕಿ ಇರುವ ಅನುದಾನವನ್ನು ಸಂಸ್ಥೆಗಳಿಗೆ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.</p>.<p>ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಂಜುಕುಮಾರ ಪಾಟೀಲ, ಪಕ್ಷದ ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್, ಪ್ರಮುಖರಾದ ರಾಜೇಂದ್ರ ಪೂಜಾರಿ, ಮಹೇಶ ಪಾಲಂ, ಚಂದ್ರಶೇಖರ ಪಾಟೀಲ, ನಾಗರಾಜ ಕರ್ಪೂರ, ರಾಜಕುಮಾರ ಹರಕಂಚಿ, ಸುದರ್ಶನ, ವೆಂಕಟ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>