ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಔರಾದ್: ನೀರಿನ ಗುಂಡಿಗೆ ಬಿದ್ದು ಬಾಲಕ ಸಾವು

Published : 7 ಸೆಪ್ಟೆಂಬರ್ 2024, 14:40 IST
Last Updated : 7 ಸೆಪ್ಟೆಂಬರ್ 2024, 14:40 IST
ಫಾಲೋ ಮಾಡಿ
Comments

ಔರಾದ್ (ಬೀದರ್ ಜಿಲ್ಲೆ): ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಜಾಗದಲ್ಲಿ ತೆಗೆದಿರುವ ಗುಂಡಿಗೆ ಬಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.

ಪಟ್ಟಣದ ಸಂತೋಷ ಕಾಲೋನಿ ನಿವಾಸಿ ಜಿಶಾನ್ ಇಸ್ಮಾಯಿಲ್ (೧೧) ಮೃತಪಟ್ಟ ಬಾಲಕ. ಶಾಲೆ ಆವರಣದಲ್ಲಿ ಆಟ ಆಡಲು ಹೋಗಿದ್ದಾಗ ಆಕಸ್ಮಿಕವಾಗಿ ಗುಂಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಔರಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಾಲಕ ಶವ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಿದ್ದಾರೆ.

ಕ್ರಮಕ್ಕೆ ಆಗ್ರಹ: ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನೂತನ ಕಾಲೇಜು ಕೊಠಡಿ ನಿರ್ಮಾಣ ಮಾಡುತ್ತಿರುವವರ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದೆ. ಸಂಬಂಧಿತರ ವಿರುದ್ಧ ಕ್ರಮ ಜರುಗಿಸುವಂತೆ ವಿದ್ಯಾರ್ಥಿ ಬಂಧುತ್ವವ ವೇದಿಕೆ ಅಧ್ಯಕ್ಷ ರತ್ನದೀಪ ಕಸ್ತೂರೆ ಮತ್ತಿತರರು ಶನಿವಾರ ಇಲ್ಲಿಯ ಸರ್ಕಾರಿ ಆಸ್ಪತ್ರೆ ಎದುರು ಜಮಾಯಿಸಿ ಆಕ್ರೋಶ ಹೊರ ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT