<p><strong>ಬಸವಕಲ್ಯಾಣ:</strong> ವಿದ್ಯಾರ್ಥಿಗಳು ಸತತ ಅಧ್ಯಯನ ನಡೆಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆಯುವುದರ ಮೂಲಕ ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅಂಬರೀಶ ವಾಗ್ಮೋಡೆ ಹೇಳಿದ್ದಾರೆ.</p>.<p>ನಗರದ ಬಸವೇಶ್ವರ ಪದವಿ ಕಾಲೇಜಿನಲ್ಲಿ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಮಂಗಳವಾರ ಹಮ್ಮಿಕೊಂಡಿದ್ದ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಶಿಕ್ಷಣ ಪಡೆದ ನಂತರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಿ ಜೀವನದ ಮಾರ್ಗವನ್ನು ಕಂಡುಕೊಳ್ಳಬೇಕಾಗುತ್ತದೆ. ತಮ್ಮ ಶಕ್ತಿಯನ್ನು ಉದ್ಯೋಗ ಪಡೆಯುವುದಕ್ಕೆ ಮತ್ತು ಸಮಾಜ ಕಾರ್ಯ ಕೈಗೊಳ್ಳುವಲ್ಲಿ ವ್ಯಯಿಸಬೇಕು. ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಉತ್ತಮ ನಾಗರಿಕ ಆಗಬೇಕು’ ಎಂದರು.</p>.<p>‘ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸದೆ, ದುಶ್ಚಟಗಳ ದಾಸರಾಗದೆ ಸುಂದರ ಬದುಕನ್ನು ರೂಪಿಸಿಕೊಳ್ಳಬೇಕು’ ಎಂದರು.</p>.<p>ಪ್ರೊ.ವಿಜಯಲಕ್ಷ್ಮಿ ಗಡ್ಡೆ ಮಾತನಾಡಿ, ‘ನಿರಂತರ ಶ್ರಮದೊಂದಿಗೆ ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಯಶಸ್ಸು ಸಾಧಿಸಬಹುದು’ ಎಂದರು.</p>.<p>ಉಪನ್ಯಾಸಕ ಶ್ರೀನಿವಾಸ ಉಮಾಪುರೆ, ಬಸವರಾಜ ಖಂಡಾಳೆ, ಚನ್ನಬಸಪ್ಪ ಶೆಟ್ಟೆಪ್ಪ, ಸಂಗೀತಾ ಮಹಾಗಾವೆ, ವಿದ್ಯಾರ್ಥಿಗಳಾದ ಪಾರ್ವತಿ, ನಂದಿನಿ ಮಾಶೆಟ್ಟೆ, ವಿಶಾಲ, ಅರುಣ ಗಾಯಕವಾಡ ಮಾತನಾಡಿದರು. ವಿದ್ಯಾರ್ಥಿಗಳಾದ ಕವಿತಾ ಮತ್ತು ಶ್ರೇಯಾ ಇವರನ್ನು ಸನ್ಮಾನಿಸಲಾಯಿತು.</p>.<p>ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಬಸವರಾಜ ಕೋರಕೆ, ರಾಜಕುಮಾರ ಹೊಳಕುಂದೆ, ಶ್ರೀಕಾಂತ ಬಡದಾಳೆ, ಸುಭಾಷ ಹೊಳಕುಂದೆ, ಜಗನ್ನಾಥ ಖೂಬಾ, ರೇವಣಪ್ಪ ರಾಯವಾಡೆ, ಪ್ರಾಚಾರ್ಯರಾದ, ಶಾಂತಲಾ ಪಾಟೀಲ, ಅಶೋಕ ರೆಡ್ಡಿ ಗದಲೇಗಾಂವ, ಗಂಗಾಧರ ಸಾಲಿಮಠ, ಗಣೇಶ ಮೇತ್ರೆ, ಪ್ರಶಾಂತ ಬುಡಗೆ, ವಿವೇಕಾನಂದ ಶಿಂಧೆ, ರೋಶನ್ ಬಿ, ಜಗದೇವಿ, ಸೌಮ್ಯ, ಪ್ರವೀಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ವಿದ್ಯಾರ್ಥಿಗಳು ಸತತ ಅಧ್ಯಯನ ನಡೆಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆಯುವುದರ ಮೂಲಕ ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅಂಬರೀಶ ವಾಗ್ಮೋಡೆ ಹೇಳಿದ್ದಾರೆ.</p>.<p>ನಗರದ ಬಸವೇಶ್ವರ ಪದವಿ ಕಾಲೇಜಿನಲ್ಲಿ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಮಂಗಳವಾರ ಹಮ್ಮಿಕೊಂಡಿದ್ದ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಶಿಕ್ಷಣ ಪಡೆದ ನಂತರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಿ ಜೀವನದ ಮಾರ್ಗವನ್ನು ಕಂಡುಕೊಳ್ಳಬೇಕಾಗುತ್ತದೆ. ತಮ್ಮ ಶಕ್ತಿಯನ್ನು ಉದ್ಯೋಗ ಪಡೆಯುವುದಕ್ಕೆ ಮತ್ತು ಸಮಾಜ ಕಾರ್ಯ ಕೈಗೊಳ್ಳುವಲ್ಲಿ ವ್ಯಯಿಸಬೇಕು. ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಉತ್ತಮ ನಾಗರಿಕ ಆಗಬೇಕು’ ಎಂದರು.</p>.<p>‘ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸದೆ, ದುಶ್ಚಟಗಳ ದಾಸರಾಗದೆ ಸುಂದರ ಬದುಕನ್ನು ರೂಪಿಸಿಕೊಳ್ಳಬೇಕು’ ಎಂದರು.</p>.<p>ಪ್ರೊ.ವಿಜಯಲಕ್ಷ್ಮಿ ಗಡ್ಡೆ ಮಾತನಾಡಿ, ‘ನಿರಂತರ ಶ್ರಮದೊಂದಿಗೆ ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಯಶಸ್ಸು ಸಾಧಿಸಬಹುದು’ ಎಂದರು.</p>.<p>ಉಪನ್ಯಾಸಕ ಶ್ರೀನಿವಾಸ ಉಮಾಪುರೆ, ಬಸವರಾಜ ಖಂಡಾಳೆ, ಚನ್ನಬಸಪ್ಪ ಶೆಟ್ಟೆಪ್ಪ, ಸಂಗೀತಾ ಮಹಾಗಾವೆ, ವಿದ್ಯಾರ್ಥಿಗಳಾದ ಪಾರ್ವತಿ, ನಂದಿನಿ ಮಾಶೆಟ್ಟೆ, ವಿಶಾಲ, ಅರುಣ ಗಾಯಕವಾಡ ಮಾತನಾಡಿದರು. ವಿದ್ಯಾರ್ಥಿಗಳಾದ ಕವಿತಾ ಮತ್ತು ಶ್ರೇಯಾ ಇವರನ್ನು ಸನ್ಮಾನಿಸಲಾಯಿತು.</p>.<p>ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಬಸವರಾಜ ಕೋರಕೆ, ರಾಜಕುಮಾರ ಹೊಳಕುಂದೆ, ಶ್ರೀಕಾಂತ ಬಡದಾಳೆ, ಸುಭಾಷ ಹೊಳಕುಂದೆ, ಜಗನ್ನಾಥ ಖೂಬಾ, ರೇವಣಪ್ಪ ರಾಯವಾಡೆ, ಪ್ರಾಚಾರ್ಯರಾದ, ಶಾಂತಲಾ ಪಾಟೀಲ, ಅಶೋಕ ರೆಡ್ಡಿ ಗದಲೇಗಾಂವ, ಗಂಗಾಧರ ಸಾಲಿಮಠ, ಗಣೇಶ ಮೇತ್ರೆ, ಪ್ರಶಾಂತ ಬುಡಗೆ, ವಿವೇಕಾನಂದ ಶಿಂಧೆ, ರೋಶನ್ ಬಿ, ಜಗದೇವಿ, ಸೌಮ್ಯ, ಪ್ರವೀಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>