<p><strong>ಬೀದರ್:</strong> ‘ಕಲ್ಯಾಣ ಕರ್ನಾಟಕದ ಅತಿ ಹಿಂದುಳಿದ ಜಿಲ್ಲೆಗಳಾದ ರಾಯಚೂರು ಜಿಲ್ಲೆಗೆ ಏಮ್ಸ್ ಹಾಗೂ ಬೀದರ್ ಜಿಲ್ಲೆಯಲ್ಲಿ ಐಐಟಿ ಸ್ಥಾಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಣ್ ದಸ್ತಿ ಆಗ್ರಹಿಸಿದರು.</p>.<p>ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೇಳಿಕೊಳ್ಳುವಂತಹ ಆರೋಗ್ಯ ಸೌಕರ್ಯಗಳಿಲ್ಲ. ಪ್ರತಿಯೊಂದು ಚಿಕಿತ್ಸೆಗೆ ಹೈದರಾಬಾದ್, ಬೆಂಗಳೂರು, ಕೊಲ್ಲಾಪುರ, ಸೊಲ್ಲಾಪುರ, ಪುಣೆ, ಮುಂಬೈಗೆ ಹೋಗಬೇಕಾದ ಪರಿಸ್ಥಿತಿ ಇದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಿದರೆ ಈ ಭಾಗದವರಿಗೆ ಅನುಕೂಲವಾಗುತ್ತದೆ ಎಂದು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>ಏಮ್ಸ್ಗೆ ಆಗ್ರಹಿಸಿ ಆಗಸ್ಟ್ 6ರಿಂದ 12ರ ವರೆಗೆ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಈ ಭಾಗದವರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರೆ, ಕಲ್ಯಾಣ ಕರ್ನಾಟಕದ ಸಂಸದರು ಸಂಸತ್ತಿನೊಳಗೆ ದನಿ ಎತ್ತಬೇಕು. ಈ ಭಾಗದ ಜನರ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.</p>.<p>ನವದೆಹಲಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದವರು ಈ ಭಾಗದ ನೂತನ ಸಂಸತ್ ಸದಸ್ಯರ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ. ಅಲ್ಲಿ ರಾಯಚೂರಿನ ಏಮ್ಸ್, ಬೀದರ್ಗೆ ಐಐಟಿ ಮಂಜೂರು ಮಾಡಿಸುವುದು, ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತು ಜನಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.</p>.<p>ಪ್ರಲ್ಹಾದ್ ಜೋಶಿ ಕುತಂತ್ರ: ‘ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜಕೀಯ ಕುತಂತ್ರ ಮಾಡುತ್ತಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಸಿಗಬೇಕಾದ ಅನೇಕ ಸವಲತ್ತುಗಳನ್ನು ಧಾರವಾಡ–ಹುಬ್ಬಳ್ಳಿಗೆ ತೆಗೆದುಕೊಂಡು ಹೋಗಿದ್ದಾರೆ. ನವದೆಹಲಿಯಲ್ಲಿ ಉತ್ತರ ಕರ್ನಾಟಕ ಎಂದು ದಾರಿ ತಪ್ಪಿಸಿ, ಕಲ್ಯಾಣ ಕರ್ನಾಟಕಕ್ಕೆ ಸಿಗಬೇಕಾದ ಸೌಕರ್ಯಗಳನ್ನು ವಂಚಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಅವರು ತಮ್ಮ ಧೋರಣೆ ಬದಲಿಸಿಕೊಳ್ಳಬೇಕು. ಈ ಸಂಬಂಧ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪ್ರಲ್ಹಾದ್ ಜೋಶಿ ಅವರು ಮಾಡುತ್ತಿರುವ ಕುತಂತ್ರದ ಬಗ್ಗೆ ಮನವರಿಕೆ ಮಾಡಲಾಗುವುದು. ಇದರಿಂದ ನ್ಯಾಯ ಸಿಗದಿದ್ದರೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ರಾಯಚೂರು ಜಿಲ್ಲೆ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಬಸವರಾಜ ಕಳಸ, ಪ್ರಮುಖರಾದ ಡಾ. ರಜನೀಶ್ ವಾಲಿ, ಸುರೇಶ ಚನಶೆಟ್ಟಿ, ಶಿವಶಂಕರ ಟೋಕರೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಕಲ್ಯಾಣ ಕರ್ನಾಟಕದ ಅತಿ ಹಿಂದುಳಿದ ಜಿಲ್ಲೆಗಳಾದ ರಾಯಚೂರು ಜಿಲ್ಲೆಗೆ ಏಮ್ಸ್ ಹಾಗೂ ಬೀದರ್ ಜಿಲ್ಲೆಯಲ್ಲಿ ಐಐಟಿ ಸ್ಥಾಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಣ್ ದಸ್ತಿ ಆಗ್ರಹಿಸಿದರು.</p>.<p>ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೇಳಿಕೊಳ್ಳುವಂತಹ ಆರೋಗ್ಯ ಸೌಕರ್ಯಗಳಿಲ್ಲ. ಪ್ರತಿಯೊಂದು ಚಿಕಿತ್ಸೆಗೆ ಹೈದರಾಬಾದ್, ಬೆಂಗಳೂರು, ಕೊಲ್ಲಾಪುರ, ಸೊಲ್ಲಾಪುರ, ಪುಣೆ, ಮುಂಬೈಗೆ ಹೋಗಬೇಕಾದ ಪರಿಸ್ಥಿತಿ ಇದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಿದರೆ ಈ ಭಾಗದವರಿಗೆ ಅನುಕೂಲವಾಗುತ್ತದೆ ಎಂದು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>ಏಮ್ಸ್ಗೆ ಆಗ್ರಹಿಸಿ ಆಗಸ್ಟ್ 6ರಿಂದ 12ರ ವರೆಗೆ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಈ ಭಾಗದವರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರೆ, ಕಲ್ಯಾಣ ಕರ್ನಾಟಕದ ಸಂಸದರು ಸಂಸತ್ತಿನೊಳಗೆ ದನಿ ಎತ್ತಬೇಕು. ಈ ಭಾಗದ ಜನರ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.</p>.<p>ನವದೆಹಲಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದವರು ಈ ಭಾಗದ ನೂತನ ಸಂಸತ್ ಸದಸ್ಯರ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ. ಅಲ್ಲಿ ರಾಯಚೂರಿನ ಏಮ್ಸ್, ಬೀದರ್ಗೆ ಐಐಟಿ ಮಂಜೂರು ಮಾಡಿಸುವುದು, ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತು ಜನಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.</p>.<p>ಪ್ರಲ್ಹಾದ್ ಜೋಶಿ ಕುತಂತ್ರ: ‘ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜಕೀಯ ಕುತಂತ್ರ ಮಾಡುತ್ತಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಸಿಗಬೇಕಾದ ಅನೇಕ ಸವಲತ್ತುಗಳನ್ನು ಧಾರವಾಡ–ಹುಬ್ಬಳ್ಳಿಗೆ ತೆಗೆದುಕೊಂಡು ಹೋಗಿದ್ದಾರೆ. ನವದೆಹಲಿಯಲ್ಲಿ ಉತ್ತರ ಕರ್ನಾಟಕ ಎಂದು ದಾರಿ ತಪ್ಪಿಸಿ, ಕಲ್ಯಾಣ ಕರ್ನಾಟಕಕ್ಕೆ ಸಿಗಬೇಕಾದ ಸೌಕರ್ಯಗಳನ್ನು ವಂಚಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ಅವರು ತಮ್ಮ ಧೋರಣೆ ಬದಲಿಸಿಕೊಳ್ಳಬೇಕು. ಈ ಸಂಬಂಧ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪ್ರಲ್ಹಾದ್ ಜೋಶಿ ಅವರು ಮಾಡುತ್ತಿರುವ ಕುತಂತ್ರದ ಬಗ್ಗೆ ಮನವರಿಕೆ ಮಾಡಲಾಗುವುದು. ಇದರಿಂದ ನ್ಯಾಯ ಸಿಗದಿದ್ದರೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ರಾಯಚೂರು ಜಿಲ್ಲೆ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಬಸವರಾಜ ಕಳಸ, ಪ್ರಮುಖರಾದ ಡಾ. ರಜನೀಶ್ ವಾಲಿ, ಸುರೇಶ ಚನಶೆಟ್ಟಿ, ಶಿವಶಂಕರ ಟೋಕರೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>