<p><strong>ಬೀದರ್</strong>: ‘ನಾನು ಮೊದಲಿನಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಮಾನಿ. ಈಗಿನ ಇವರ ನಡೆ ನೋಡಿದರೆ ಇವರು ಹಿಂದಿನ ಸಿದ್ದರಾಮಯ್ಯನವರೇ ಎಂಬ ಅನುಮಾನ ಬರುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ರಾಜುಗೌಡ ಹೇಳಿದರು.</p>.<p>ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಪಕ್ಷದ ಜಿಲ್ಲಾ ಕಾರ್ಯಕಾರಣಿ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿಯಲ್ಲ ₹87 ಕೋಟಿ ಅಕ್ರಮ ನಡೆದಿದೆ ಎಂದು ಸಿ.ಎಂ ಹೇಳಿದ್ದಾರೆ. ವಿಧಾನಸಭೆ ಒಳಗೆ ವಿಸ್ತೃತವಾಗಿ ಮಾತನಾಡಿರುವ ಸಿದ್ದರಾಮಯ್ಯನವರು ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಸರ್ಕಾರದ ಅವಧಿಯ ಅಕ್ರಮಗಳ ಕುರಿತು ಮಾತನಾಡಿದ್ದಾರೆ. ಒಂದುವೇಳೆ ನಮ್ಮ ಅವಧಿಯಲ್ಲಿ ಅಕ್ರಮ ನಡೆದರೆ ಅವರದೇ ಸರ್ಕಾರವಿದ್ದು, ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಅದು ಬಿಟ್ಟು ಬ್ಲ್ಯಾಕ್ಮೇಲ್, ಅಂಜಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.</p>.<p>ನಮ್ಮ ಸರ್ಕಾರವಿದ್ದಾಗ 40 ಪರ್ಸೆಂಟ್ ಕಮಿಷನ್ ಸರ್ಕಾರವೆಂದು ದೊಡ್ಡ ಗುಲ್ಲು ಎಬ್ಬಿಸಿದ್ದರು. ಈಗ ಇವರು ‘ವೈಟ್’ನಲ್ಲಿ ಹೊಡೆಯುತ್ತಿದ್ದಾರೆ. ಪ್ರತಿಯೊಂದು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಜಿಲ್ಲಾ, ತಾಲ್ಲೂಕು ಮಟ್ಟಕ್ಕೆ ತಲುಪಿದೆ. ಹಣವಿಲ್ಲದೆ ಯಾವುದೇ ಕೆಲಸಗಳಾಗುತ್ತಿಲ್ಲ. ಈ ಸರ್ಕಾರ ಜಾಸ್ತಿ ದಿನ ಹೋಗೋಲ್ಲ ಅನಿಸ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ನಾನು ಮೊದಲಿನಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಮಾನಿ. ಈಗಿನ ಇವರ ನಡೆ ನೋಡಿದರೆ ಇವರು ಹಿಂದಿನ ಸಿದ್ದರಾಮಯ್ಯನವರೇ ಎಂಬ ಅನುಮಾನ ಬರುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ರಾಜುಗೌಡ ಹೇಳಿದರು.</p>.<p>ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಪಕ್ಷದ ಜಿಲ್ಲಾ ಕಾರ್ಯಕಾರಣಿ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿಯಲ್ಲ ₹87 ಕೋಟಿ ಅಕ್ರಮ ನಡೆದಿದೆ ಎಂದು ಸಿ.ಎಂ ಹೇಳಿದ್ದಾರೆ. ವಿಧಾನಸಭೆ ಒಳಗೆ ವಿಸ್ತೃತವಾಗಿ ಮಾತನಾಡಿರುವ ಸಿದ್ದರಾಮಯ್ಯನವರು ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಸರ್ಕಾರದ ಅವಧಿಯ ಅಕ್ರಮಗಳ ಕುರಿತು ಮಾತನಾಡಿದ್ದಾರೆ. ಒಂದುವೇಳೆ ನಮ್ಮ ಅವಧಿಯಲ್ಲಿ ಅಕ್ರಮ ನಡೆದರೆ ಅವರದೇ ಸರ್ಕಾರವಿದ್ದು, ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಅದು ಬಿಟ್ಟು ಬ್ಲ್ಯಾಕ್ಮೇಲ್, ಅಂಜಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.</p>.<p>ನಮ್ಮ ಸರ್ಕಾರವಿದ್ದಾಗ 40 ಪರ್ಸೆಂಟ್ ಕಮಿಷನ್ ಸರ್ಕಾರವೆಂದು ದೊಡ್ಡ ಗುಲ್ಲು ಎಬ್ಬಿಸಿದ್ದರು. ಈಗ ಇವರು ‘ವೈಟ್’ನಲ್ಲಿ ಹೊಡೆಯುತ್ತಿದ್ದಾರೆ. ಪ್ರತಿಯೊಂದು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಜಿಲ್ಲಾ, ತಾಲ್ಲೂಕು ಮಟ್ಟಕ್ಕೆ ತಲುಪಿದೆ. ಹಣವಿಲ್ಲದೆ ಯಾವುದೇ ಕೆಲಸಗಳಾಗುತ್ತಿಲ್ಲ. ಈ ಸರ್ಕಾರ ಜಾಸ್ತಿ ದಿನ ಹೋಗೋಲ್ಲ ಅನಿಸ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>