<p><strong>ಭಾಲ್ಕಿ:</strong> ಪಟ್ಟಣದಲ್ಲಿ ಕನ್ನಡ ಜ್ಯೋತಿ ರಥ ಯಾತ್ರೆ ಸಂಭ್ರಮ ಮನೆ ಮಾಡಿತ್ತು. ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಭಾಲ್ಕಿ ಸಹಯೋಗದಲ್ಲಿ ಗುರುವಾರ ಪಟ್ಟಣದ ಬಿಕೆಐಟಿ ಕಾಲೇಜು ಎದುರು ಕನ್ನಡ ಜ್ಯೋತಿ ರಥ ಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಚಾಲನೆ ನೀಡಿದರು.</p>.<p>ನಂತರ ರಥಯಾತ್ರೆಯಲ್ಲಿ ಸಚಿವರು ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿದರು. ಬಳಿಕ ಬೋಮ್ಮಗೊಂಡೇಶ್ವರ ವೃತ್ತ, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತದ ಮೂಲಕ ಪುರಭವನ ತಲುಪಿತು. </p>.<p>ಕನ್ನಡ ಗೀತೆಗೆ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಪ್ರಮುಖರು ಹೆಜ್ಜೆ ಹಾಕಿ ಗಮನ ಸೆಳೆದರು. ಕನ್ನಡಪರ ಸಂಘಟನೆ ಪ್ರಮುಖರು, ವಿದ್ಯಾರ್ಥಿಗಳು ಡಿಜೆ ಸೌಂಡ್ಗೆ ಕುಣಿದು ಸಂಭ್ರಮಿಸಿದರು. ಡೊಳ್ಳು ಕುಣಿತ, ಲಂಬಾಣಿ ನೃತ್ಯ ವಿವಿಧ ಕಲಾ ತಂಡಗಳು ಮೆರವಣಿಗೆಗೆ ಆಕರ್ಷಣೆ ತಂದು ಕೊಟ್ಟವು.</p>.<p>ನಂತರ </p>.<p>ಪ್ರತಿವರ್ಷ ರಾಜ್ಯದಿಂದ ಸುಮಾರು ₹ 4 ಲಕ್ಷ ಕೋಟಿ ಜಿಎಸ್ಟಿ ಪಾಲು ಕೇಂದ್ರಕ್ಕೆ ನೀಡುತ್ತಿದೆ. ಆದರೆ, ಕೇಂದ್ರ ಸರ್ಕಾರ ಕೇವಲ ₹ 50 ಸಾವಿರ ಕೋಟಿ ನೀಡಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.</p>.<p>ಸೌಮ್ಯ ಸ್ವಭಾವದ ಕನ್ನಡಿಗರು ಪ್ರಶ್ನಿಸುವ ಮನೋಭಾವ ಬೆಳೆಸಿ ಕೊಳ್ಳಬೇಕಾಗಿದೆ ಎಂದರು.</p>.<p>ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಕೆಕೆಆರ್ಡಿಬಿ ಯೋಜನೆಯಡಿ ಬರುವ ಶೇ 25ರಷ್ಟು ಅನುದಾನ ಮೀಸಲಿಡುವುದಾಗಿ ಭರವಸೆ ನೀಡಿದರು. ಶಾಲಾ-ಕಾಲೇಜು ಕಟ್ಟಡ, ಕೋಣೆ, ಪೀಠೋಪಕರಣ, ಆಟದ ಮೈದಾನ, ಶೌಚಾಲಯ, ಸುತ್ತುಗೋಡೆ ಸೇರಿ ಮುಂತಾದ ಶೈಕ್ಷಣಿಕ ಮೂಲ ಸೌಕರ್ಯಗಳಿಗೆ ಅನುದಾನ ಬಳಸಲಾಗುವುದು ಎಂದು ತಿಳಿಸಿದರು.</p>.<p>ರಾಜ್ಯದಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸುತ್ತಿದೆ. ಈ ರಥಯಾತ್ರೆ ಮೂಲಕ ಯುವ ಪೀಳಿಗೆಗೆ ಕನ್ನಡ ಭಾಷೆ, ಸಂಸ್ಕೃತಿ, ಕಲೆ, ಪರಂಪರೆ ಪರಿಚಯಿಸುವ ಕೆಲಸ ಮಾಡಿಕೊಡಲಾಗುತ್ತಿದೆಎಂದು ನುಡಿದರು.</p>.<p>ಕನ್ನಡ ಭಾಷೆ, ನುಡಿ, ಜಲ, ಅಸ್ಮಿತೆಗಾಗಿ ಸಂಘರ್ಷ, ಹೋರಾಟ ಮಾಡಿದ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಕರ್ನಾಟಕದ ಏಕೀಕರಣ, ಹೈದರಾಬಾದ್ ಕರ್ನಾಟಕ ವಿಮೋಚನೆಗಾಗಿ ಅನೇಕರು ತಮ್ಮ ಪ್ರಾಣವನ್ನು ಲೆಕ್ಕಿಸದೇ ನಿರಂತರ ಚಳುವಳಿ, ಹೋರಾಟ ನಡೆಸಿದರ ಪರಿಣಾಮ ನಾವೆಲ್ಲರೂ ಇಂದು ಅಖಂಡ ಕರ್ನಾಟಕದಲ್ಲಿ ನೆಲೆಸಿದ್ದೇವೆ. ಕನ್ನಡ ನೆಲದ ರಕ್ಷಣೆಗೆ ನಿಂತ ಪ್ರತಿಯೊಬ್ಬರನ್ನು ನೆನಯುವುದರ ಜತೆಗೆ ಯುವ ಸಮುದಾಯಕ್ಕೆ ಹಿಂದಿನ ಇತಿಹಾಸ ತಿಳಿಸಿ ಕೊಡುವ ಪ್ರಯತ್ನ ಮಾಡಬೇಕಾಗಿದೆ. ಇಲ್ಲದಿದ್ದರೇ ಯುವ ಪೀಳಿಗೆಗೆ ಇತಿಹಾಸ ಸೃಷ್ಟಿಸಲು ಸಾಧ್ಯವಾಗುವುದಿಲ್ಲ ಎಂದರು.</p>.<p>ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಕನ್ನಡ ಭಾಷೆಗೆ ಬಹುದೊಡ್ಡ ಇತಿಹಾಸವಿದೆ. ಶರಣರು ಕನ್ನಡ ಭಾಷೆಯಲ್ಲಿ ವಚನ ರಚಿಸಿ ಕನ್ನಡದ ಮಹತ್ವ ಸಾರಿದ್ದಾರೆ. ಹಾಗಾಗಿ ಕನ್ನಡಿಗರಲ್ಲಿ ಸ್ವಾಭಿಮಾನ ಕಿಚ್ಚು ಇರಬೇಕು. ಸಮಗ್ರ ಕನ್ನಡದ ಅಭಿವೃದ್ಧಿಗೆ ಎಲ್ಲರೂ ಕಂಕಣಬದ್ಧರಾಗಬೇಕು ಎಂದು ತಿಳಿಸಿದರು.</p>.<p>ಮಹಾಲಿಂಗ ಸ್ವಾಮೀಜಿ, ತಾಲ್ಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ಮಲ್ಲಮ್ಮ ಆರ್. ಪಾಟೀಲ, ಪ್ರಮುಖರಾದ ಬಸವರಾಜ ವಂಕೆ, ವಿಜಯಕುಮಾರ ರಾಜಭವನ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ್ ಹುಸೇನ್, ರಾಜಕುಮಾರ ಸಾಲಿ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಗೋಪಾಲ ಹಿಪ್ಪರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ದೀಪಕ ಠಮಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ಪಟ್ಟಣದಲ್ಲಿ ಕನ್ನಡ ಜ್ಯೋತಿ ರಥ ಯಾತ್ರೆ ಸಂಭ್ರಮ ಮನೆ ಮಾಡಿತ್ತು. ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಭಾಲ್ಕಿ ಸಹಯೋಗದಲ್ಲಿ ಗುರುವಾರ ಪಟ್ಟಣದ ಬಿಕೆಐಟಿ ಕಾಲೇಜು ಎದುರು ಕನ್ನಡ ಜ್ಯೋತಿ ರಥ ಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಚಾಲನೆ ನೀಡಿದರು.</p>.<p>ನಂತರ ರಥಯಾತ್ರೆಯಲ್ಲಿ ಸಚಿವರು ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿದರು. ಬಳಿಕ ಬೋಮ್ಮಗೊಂಡೇಶ್ವರ ವೃತ್ತ, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತದ ಮೂಲಕ ಪುರಭವನ ತಲುಪಿತು. </p>.<p>ಕನ್ನಡ ಗೀತೆಗೆ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಪ್ರಮುಖರು ಹೆಜ್ಜೆ ಹಾಕಿ ಗಮನ ಸೆಳೆದರು. ಕನ್ನಡಪರ ಸಂಘಟನೆ ಪ್ರಮುಖರು, ವಿದ್ಯಾರ್ಥಿಗಳು ಡಿಜೆ ಸೌಂಡ್ಗೆ ಕುಣಿದು ಸಂಭ್ರಮಿಸಿದರು. ಡೊಳ್ಳು ಕುಣಿತ, ಲಂಬಾಣಿ ನೃತ್ಯ ವಿವಿಧ ಕಲಾ ತಂಡಗಳು ಮೆರವಣಿಗೆಗೆ ಆಕರ್ಷಣೆ ತಂದು ಕೊಟ್ಟವು.</p>.<p>ನಂತರ </p>.<p>ಪ್ರತಿವರ್ಷ ರಾಜ್ಯದಿಂದ ಸುಮಾರು ₹ 4 ಲಕ್ಷ ಕೋಟಿ ಜಿಎಸ್ಟಿ ಪಾಲು ಕೇಂದ್ರಕ್ಕೆ ನೀಡುತ್ತಿದೆ. ಆದರೆ, ಕೇಂದ್ರ ಸರ್ಕಾರ ಕೇವಲ ₹ 50 ಸಾವಿರ ಕೋಟಿ ನೀಡಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.</p>.<p>ಸೌಮ್ಯ ಸ್ವಭಾವದ ಕನ್ನಡಿಗರು ಪ್ರಶ್ನಿಸುವ ಮನೋಭಾವ ಬೆಳೆಸಿ ಕೊಳ್ಳಬೇಕಾಗಿದೆ ಎಂದರು.</p>.<p>ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಕೆಕೆಆರ್ಡಿಬಿ ಯೋಜನೆಯಡಿ ಬರುವ ಶೇ 25ರಷ್ಟು ಅನುದಾನ ಮೀಸಲಿಡುವುದಾಗಿ ಭರವಸೆ ನೀಡಿದರು. ಶಾಲಾ-ಕಾಲೇಜು ಕಟ್ಟಡ, ಕೋಣೆ, ಪೀಠೋಪಕರಣ, ಆಟದ ಮೈದಾನ, ಶೌಚಾಲಯ, ಸುತ್ತುಗೋಡೆ ಸೇರಿ ಮುಂತಾದ ಶೈಕ್ಷಣಿಕ ಮೂಲ ಸೌಕರ್ಯಗಳಿಗೆ ಅನುದಾನ ಬಳಸಲಾಗುವುದು ಎಂದು ತಿಳಿಸಿದರು.</p>.<p>ರಾಜ್ಯದಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸುತ್ತಿದೆ. ಈ ರಥಯಾತ್ರೆ ಮೂಲಕ ಯುವ ಪೀಳಿಗೆಗೆ ಕನ್ನಡ ಭಾಷೆ, ಸಂಸ್ಕೃತಿ, ಕಲೆ, ಪರಂಪರೆ ಪರಿಚಯಿಸುವ ಕೆಲಸ ಮಾಡಿಕೊಡಲಾಗುತ್ತಿದೆಎಂದು ನುಡಿದರು.</p>.<p>ಕನ್ನಡ ಭಾಷೆ, ನುಡಿ, ಜಲ, ಅಸ್ಮಿತೆಗಾಗಿ ಸಂಘರ್ಷ, ಹೋರಾಟ ಮಾಡಿದ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಕರ್ನಾಟಕದ ಏಕೀಕರಣ, ಹೈದರಾಬಾದ್ ಕರ್ನಾಟಕ ವಿಮೋಚನೆಗಾಗಿ ಅನೇಕರು ತಮ್ಮ ಪ್ರಾಣವನ್ನು ಲೆಕ್ಕಿಸದೇ ನಿರಂತರ ಚಳುವಳಿ, ಹೋರಾಟ ನಡೆಸಿದರ ಪರಿಣಾಮ ನಾವೆಲ್ಲರೂ ಇಂದು ಅಖಂಡ ಕರ್ನಾಟಕದಲ್ಲಿ ನೆಲೆಸಿದ್ದೇವೆ. ಕನ್ನಡ ನೆಲದ ರಕ್ಷಣೆಗೆ ನಿಂತ ಪ್ರತಿಯೊಬ್ಬರನ್ನು ನೆನಯುವುದರ ಜತೆಗೆ ಯುವ ಸಮುದಾಯಕ್ಕೆ ಹಿಂದಿನ ಇತಿಹಾಸ ತಿಳಿಸಿ ಕೊಡುವ ಪ್ರಯತ್ನ ಮಾಡಬೇಕಾಗಿದೆ. ಇಲ್ಲದಿದ್ದರೇ ಯುವ ಪೀಳಿಗೆಗೆ ಇತಿಹಾಸ ಸೃಷ್ಟಿಸಲು ಸಾಧ್ಯವಾಗುವುದಿಲ್ಲ ಎಂದರು.</p>.<p>ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಕನ್ನಡ ಭಾಷೆಗೆ ಬಹುದೊಡ್ಡ ಇತಿಹಾಸವಿದೆ. ಶರಣರು ಕನ್ನಡ ಭಾಷೆಯಲ್ಲಿ ವಚನ ರಚಿಸಿ ಕನ್ನಡದ ಮಹತ್ವ ಸಾರಿದ್ದಾರೆ. ಹಾಗಾಗಿ ಕನ್ನಡಿಗರಲ್ಲಿ ಸ್ವಾಭಿಮಾನ ಕಿಚ್ಚು ಇರಬೇಕು. ಸಮಗ್ರ ಕನ್ನಡದ ಅಭಿವೃದ್ಧಿಗೆ ಎಲ್ಲರೂ ಕಂಕಣಬದ್ಧರಾಗಬೇಕು ಎಂದು ತಿಳಿಸಿದರು.</p>.<p>ಮಹಾಲಿಂಗ ಸ್ವಾಮೀಜಿ, ತಾಲ್ಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ಮಲ್ಲಮ್ಮ ಆರ್. ಪಾಟೀಲ, ಪ್ರಮುಖರಾದ ಬಸವರಾಜ ವಂಕೆ, ವಿಜಯಕುಮಾರ ರಾಜಭವನ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ್ ಹುಸೇನ್, ರಾಜಕುಮಾರ ಸಾಲಿ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಗೋಪಾಲ ಹಿಪ್ಪರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ದೀಪಕ ಠಮಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>