<p><strong>ಬೀದರ್:</strong> ನ್ಯಾಷನಲ್ ನೆಟ್ವರ್ಕ್ ಆಫ್ ಸೆಕ್ಸ್ ವರ್ಕರ್, ಕರ್ನಾಟಕ ಲೈಂಗಿಕ ಕಾರ್ಮಿಕರ ಯೂನಿಯನ್, ಸಂಗಮ– ಸಂಗ್ರಾಮ್– ಸಾಥಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಅಂತರರಾಷ್ಟ್ರೀಯ ಲೈಂಗಿಕ ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಶುಕ್ರವಾರ ವಕಾಲತ್ತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಸಂವಿಧಾನದ ಪೀಠಿಕೆ ಓದುವುದರೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಕೀಲರು, ಲೈಂಗಿಕ ಅಲ್ಪಸಂಖ್ಯಾತರು, ಪೊಲೀಸರು, ವಿವಿಧ ಸಂಘಟನೆಗಳವರು ಪಾಲ್ಗೊಂಡಿದ್ದರು.</p>.<p>ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಲ್ಲಮ್ಮ ಮಾತನಾಡಿ, ಲೈಂಗಿಕ ಕಾರ್ಮಿಕರು ಕಳಂಕ, ತಾರತಮ್ಯದಿಂದ ಮುಕ್ತರಾಗಬೇಕು. ಇತರರಂತೆ ಅವರು ಉದ್ಯಮಶೀಲರಾಗಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದರು.</p>.<p>ಎಫ್ಪಿಎಐನ ಶ್ರೀನಿವಾಸ್ ಬಿರಾದಾರ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗುರುರಾಜ, ರಾಮ್ ಸಿಂಗ್ ರಾಠೋಡ್, ಸಂಗಮ ಸಂಸ್ಥೆ ನಿರ್ದೇಶಕ ರಾಜೇಶ್ , ಭೀಮ್, ಮಹೇಶ್, ಭಾರತಿ, ಶಕುಂತಲಾ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನ್ಯಾಷನಲ್ ನೆಟ್ವರ್ಕ್ ಆಫ್ ಸೆಕ್ಸ್ ವರ್ಕರ್, ಕರ್ನಾಟಕ ಲೈಂಗಿಕ ಕಾರ್ಮಿಕರ ಯೂನಿಯನ್, ಸಂಗಮ– ಸಂಗ್ರಾಮ್– ಸಾಥಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಅಂತರರಾಷ್ಟ್ರೀಯ ಲೈಂಗಿಕ ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಶುಕ್ರವಾರ ವಕಾಲತ್ತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಸಂವಿಧಾನದ ಪೀಠಿಕೆ ಓದುವುದರೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಕೀಲರು, ಲೈಂಗಿಕ ಅಲ್ಪಸಂಖ್ಯಾತರು, ಪೊಲೀಸರು, ವಿವಿಧ ಸಂಘಟನೆಗಳವರು ಪಾಲ್ಗೊಂಡಿದ್ದರು.</p>.<p>ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಲ್ಲಮ್ಮ ಮಾತನಾಡಿ, ಲೈಂಗಿಕ ಕಾರ್ಮಿಕರು ಕಳಂಕ, ತಾರತಮ್ಯದಿಂದ ಮುಕ್ತರಾಗಬೇಕು. ಇತರರಂತೆ ಅವರು ಉದ್ಯಮಶೀಲರಾಗಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದರು.</p>.<p>ಎಫ್ಪಿಎಐನ ಶ್ರೀನಿವಾಸ್ ಬಿರಾದಾರ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗುರುರಾಜ, ರಾಮ್ ಸಿಂಗ್ ರಾಠೋಡ್, ಸಂಗಮ ಸಂಸ್ಥೆ ನಿರ್ದೇಶಕ ರಾಜೇಶ್ , ಭೀಮ್, ಮಹೇಶ್, ಭಾರತಿ, ಶಕುಂತಲಾ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>