<p><strong>ಬೀದರ್</strong>: ನಗರದ ಬಿ.ವಿ. ಭೂಮರಡ್ಡಿ ಕಾಲೇಜಿನ ಆವರಣದಲ್ಲಿ ಶನಿವಾರ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸೈನಿಕ ಶಾಲೆ ಹಾಗೂ ಪದವಿ ಕಾಲೇಜಿನ ಎನ್.ಸಿ.ಸಿ. ಘಟಕದಿಂದ ಕಾರ್ಗಿಲ್ ವಿಜಯ್ ದಿನದ ರಜತ ಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು.</p>.<p>ಬಿ.ವಿ.ಬಿ ಶಾಲಾ – ಕಾಲೇಜುಗಳ ಸಂಚಾಲಕ ಡಾ. ರಜನೀಶ ಎಸ್. ವಾಲಿ, ಕಾರ್ಗಿಲ್ ಕದನದಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರಕ್ಕೆ ಪುಷ್ಪ ಗೌರವ ಸಮರ್ಪಿಸಿದರು. ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸೈನಿಕ ಬಿ.ಎಚ್.ಎಂ. ಸಂಜೀವಕುಮಾರ ಅವರನ್ನು ಸನ್ಮಾನಿಸಿದರು. </p>.<p>ಕಾಲೇಜಿನ ಪ್ರಾಂಶುಪಾಲ ಪಿ. ವಿಠ್ಠಲ ರಡ್ಡಿ ಅವರು, ನಮ್ಮ ದೇಶ ಸುರಕ್ಷತೆಯಿಂದ ಇರಬೇಕಾದರೆ ಸೈನಿಕರ ತ್ಯಾಗ, ಬಲಿದಾನವೇ ಕಾರಣ. ಸೈನಿಕರು ನಮಗೆ ರಕ್ಷಣೆ ಕೊಟ್ಟರೆ, ರೈತರು ನಮಗೆ ಅನ್ನ ಕೊಡುತ್ತಾರೆ. ಇವರಿಬ್ಬರನ್ನೂ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.</p>.<p>ಕಾಲೇಜಿನ ಆವರಣದಲ್ಲಿ ಸುಸಜ್ಜಿತ ಸೈನಿಕ ಶಾಲೆ ಪ್ರಾರಂಭಿಸಲಾಗಿದೆ. ಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಇದು ವರದಾನವಾಗಲಿದೆ ಎಂದು ತಿಳಿಸಿದರು.</p>.<p>ಉಪಪ್ರಾಂಶುಪಾಲ ಅನಿಲ್ ಕುಮಾರ್ ಆಣದೂರೆ, ಶಿಕ್ಷಕ ಜಗದೀಶ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ದೀಪಾ ರಾಗ, ಸಿಬ್ಬಂದಿ, ವಿದ್ಯಾರ್ಥಿಗಳು, ಎನ್ಸಿಸಿ ಕೆಡೆಟ್ಗಳು ಹಾಜರಿದ್ದರು. ಇದೇ ವೇಳೆ ಕಾರ್ಗಿಲ್ ಕದನದ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ನಗರದ ಬಿ.ವಿ. ಭೂಮರಡ್ಡಿ ಕಾಲೇಜಿನ ಆವರಣದಲ್ಲಿ ಶನಿವಾರ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸೈನಿಕ ಶಾಲೆ ಹಾಗೂ ಪದವಿ ಕಾಲೇಜಿನ ಎನ್.ಸಿ.ಸಿ. ಘಟಕದಿಂದ ಕಾರ್ಗಿಲ್ ವಿಜಯ್ ದಿನದ ರಜತ ಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು.</p>.<p>ಬಿ.ವಿ.ಬಿ ಶಾಲಾ – ಕಾಲೇಜುಗಳ ಸಂಚಾಲಕ ಡಾ. ರಜನೀಶ ಎಸ್. ವಾಲಿ, ಕಾರ್ಗಿಲ್ ಕದನದಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರಕ್ಕೆ ಪುಷ್ಪ ಗೌರವ ಸಮರ್ಪಿಸಿದರು. ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸೈನಿಕ ಬಿ.ಎಚ್.ಎಂ. ಸಂಜೀವಕುಮಾರ ಅವರನ್ನು ಸನ್ಮಾನಿಸಿದರು. </p>.<p>ಕಾಲೇಜಿನ ಪ್ರಾಂಶುಪಾಲ ಪಿ. ವಿಠ್ಠಲ ರಡ್ಡಿ ಅವರು, ನಮ್ಮ ದೇಶ ಸುರಕ್ಷತೆಯಿಂದ ಇರಬೇಕಾದರೆ ಸೈನಿಕರ ತ್ಯಾಗ, ಬಲಿದಾನವೇ ಕಾರಣ. ಸೈನಿಕರು ನಮಗೆ ರಕ್ಷಣೆ ಕೊಟ್ಟರೆ, ರೈತರು ನಮಗೆ ಅನ್ನ ಕೊಡುತ್ತಾರೆ. ಇವರಿಬ್ಬರನ್ನೂ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.</p>.<p>ಕಾಲೇಜಿನ ಆವರಣದಲ್ಲಿ ಸುಸಜ್ಜಿತ ಸೈನಿಕ ಶಾಲೆ ಪ್ರಾರಂಭಿಸಲಾಗಿದೆ. ಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಇದು ವರದಾನವಾಗಲಿದೆ ಎಂದು ತಿಳಿಸಿದರು.</p>.<p>ಉಪಪ್ರಾಂಶುಪಾಲ ಅನಿಲ್ ಕುಮಾರ್ ಆಣದೂರೆ, ಶಿಕ್ಷಕ ಜಗದೀಶ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ದೀಪಾ ರಾಗ, ಸಿಬ್ಬಂದಿ, ವಿದ್ಯಾರ್ಥಿಗಳು, ಎನ್ಸಿಸಿ ಕೆಡೆಟ್ಗಳು ಹಾಜರಿದ್ದರು. ಇದೇ ವೇಳೆ ಕಾರ್ಗಿಲ್ ಕದನದ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>