‘ಪಾದಚಾರಿ ಮಾರ್ಗ ಒತ್ತುವರಿಯಿಂದ ನಗರದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಅದನ್ನು ತೆರವುಗೊಳಿಸಲು ಇತ್ತೀಚೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಅದರಂತೆ ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ, ಡಿವೈಎಸ್ಪಿ ಶಿವನಗೌಡ ಪಾಟೀಲ ಹಾಗೂ ನಗರಸಭೆ ಪೌರಾಯುಕ್ತ ಶಿವರಾಜ ರಾಠೋಡ್ ಅವರ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಅತಿಕ್ರಮಣ ತೆರವಿಗೆ ನಿರ್ಧರಿಸಲಾಗಿತ್ತು. ಅದರಂತೆ ನಗರದಲ್ಲಿ ಕಳೆದೆರಡು ದಿನಗಳಿಂದ ಒತ್ತುವರಿ ತೆರವುಗೊಳಿಸಲಾಗುತ್ತಿದೆ. ಜಿ.ವಿ ಮಾಲ್ ಒತ್ತುವರಿ ತೆರವಿಗೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಹೋಗಿದ್ದಾಗ ಮಾಲ್ನವರು ಕೆಲಸಕ್ಕೆ ಅಡ್ಡಿಪಡಿಸಿ, ಜೀವ ಬೆದರಿಕೆ ಹಾಕಿದ್ದಾರೆ. ಈಗ ಅವರ ಬಂಧನಕ್ಕೆ ಅರೆಸ್ಟ್ ವಾರೆಂಟ್ ಹೊರಡಿಸಲಾಗಿದ್ದು, ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.