<p><strong>ಬೀದರ್:</strong> ‘ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹಾಗೂ ಅವರ ತಂಡದಿಂದ ನನಗೆ ಜೀವ ಭಯ ಇದೆ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸುವೆ’ ಎಂದು ಔರಾದ್ನ ಬಿಜೆಪಿ ವಿಜೇತ ಅಭ್ಯರ್ಥಿ ಪ್ರಭು ಚವಾಣ್ ಹೇಳಿದರು.</p>.<p>‘ಖೂಬಾ ಅವರು ನನಗೆ ಜಾತಿ ನಿಂದನೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿಸಿ, ಕಬ್ಬು ಕಟಾವು ಮಾಡಲು ಕಳುಹಿಸಿಕೊಡುವುದಾಗಿ ತಮ್ಮ ಸಮೀಪವರ್ತಿಗಳ ಬಳಿ ಹೇಳಿಕೊಂಡಿದ್ದಾರೆ’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಬಿಜೆಪಿಯ ಸಂಸದ ಮತ್ತು ಸಚಿವರಾಗಿರುವ ಅವರು ಔರಾದ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ನನ್ನನ್ನು ಸೋಲಿಸಲು ಪ್ರಯತ್ನಿಸಿದರು. ಆದರೆ, ಅಭಿವೃದ್ಧಿ ಕೆಲಸ ಹಾಗೂ ಜನರ ಆಶೀರ್ವಾದದಿಂದ ಪುನರಾಯ್ಕೆಯಾದೆ’ ಎಂದರು.</p>.<p>ಇದರ ಕುರಿತು ಪ್ರತಿಕ್ರಿಯೆಗಾಗಿ ಸಂಪರ್ಕಿಸಿದಾಗ, ಭಗವಂತ ಖೂಬಾ ಅವರು ಲಭ್ಯವಾಗಲಿಲ್ಲ.</p>.<p>ಖೂಬಾ ಅವರ ಪಕ್ಷ ವಿರೋಧಿ ಚಟುವಟಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ವರಿಷ್ಠರಿಗೆ ದೂರು ಸಲ್ಲಿಸುವೆ. ಕ್ರಮಕ್ಕಾಗಿ ಒತ್ತಾಯಿಸುವೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹಾಗೂ ಅವರ ತಂಡದಿಂದ ನನಗೆ ಜೀವ ಭಯ ಇದೆ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸುವೆ’ ಎಂದು ಔರಾದ್ನ ಬಿಜೆಪಿ ವಿಜೇತ ಅಭ್ಯರ್ಥಿ ಪ್ರಭು ಚವಾಣ್ ಹೇಳಿದರು.</p>.<p>‘ಖೂಬಾ ಅವರು ನನಗೆ ಜಾತಿ ನಿಂದನೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿಸಿ, ಕಬ್ಬು ಕಟಾವು ಮಾಡಲು ಕಳುಹಿಸಿಕೊಡುವುದಾಗಿ ತಮ್ಮ ಸಮೀಪವರ್ತಿಗಳ ಬಳಿ ಹೇಳಿಕೊಂಡಿದ್ದಾರೆ’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಬಿಜೆಪಿಯ ಸಂಸದ ಮತ್ತು ಸಚಿವರಾಗಿರುವ ಅವರು ಔರಾದ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ನನ್ನನ್ನು ಸೋಲಿಸಲು ಪ್ರಯತ್ನಿಸಿದರು. ಆದರೆ, ಅಭಿವೃದ್ಧಿ ಕೆಲಸ ಹಾಗೂ ಜನರ ಆಶೀರ್ವಾದದಿಂದ ಪುನರಾಯ್ಕೆಯಾದೆ’ ಎಂದರು.</p>.<p>ಇದರ ಕುರಿತು ಪ್ರತಿಕ್ರಿಯೆಗಾಗಿ ಸಂಪರ್ಕಿಸಿದಾಗ, ಭಗವಂತ ಖೂಬಾ ಅವರು ಲಭ್ಯವಾಗಲಿಲ್ಲ.</p>.<p>ಖೂಬಾ ಅವರ ಪಕ್ಷ ವಿರೋಧಿ ಚಟುವಟಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ವರಿಷ್ಠರಿಗೆ ದೂರು ಸಲ್ಲಿಸುವೆ. ಕ್ರಮಕ್ಕಾಗಿ ಒತ್ತಾಯಿಸುವೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>