ಯಾರು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಅಂತಹವರನ್ನು ಬೆಂಬಲಿಸಬೇಕು. ಸುದೀರ್ಘ ಅವಧಿಯಿಂದ ಈ ಕೆಲಸ ಮಾಡುತ್ತಿರುವೆ.ಜಿಲ್ಲೆಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು, ಜಿಲ್ಲೆಯ ರೈತರ ಸಾಲ ಮನ್ನಾ, ಮುಚ್ಚಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಆರಂಭಿಸಲು ಶ್ರಮಿಸುವೆ. ಚುನಾವಣಾ ಪದ್ಧತಿಯಲ್ಲಿ ಬದಲಾವಣೆಗೆ ಧ್ವನಿ ಎತ್ತುವೆ. ಕಬ್ಬು, ತೊಗರಿ, ಸೋಯಾಬೀನ್ ಗೆ ಬೆಂಬಲ ಬೆಲೆ ಕೊಡಿಸುವೆ. ಕಾರಂಜಾ ಸಂತ್ರಸ್ತರ ಮಕ್ಕಳಿಗೆ ನೌಕರಿ ಕೊಡಿಸಲು ಶ್ರಮಿಸುವೆ ಎಂದು ತಿಳಿಸಿದರು.