<p><strong>ಬೀದರ್</strong>: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರ ನವದೆಹಲಿಯ ನಿವಾಸಕ್ಕೆ ಬುಧವಾರ ಭೇಟಿ ನೀಡಿದರು.</p>.<p>ಕಟೀಲ್ ಅವರಿಗೆ ಹಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಗೌರವಿಸಿದರು.</p>.<p>ತಮಗೆ ಸಚಿವ ಸ್ಥಾನ ಲಭಿಸಿದ್ದಕ್ಕೆ ರಾಜ್ಯ ಅದರಲ್ಲೂ ಕಲ್ಯಾಣ ಕರ್ನಾಟಕದ ಜನತೆಗೆ ಬಹಳ ಸಂತಸವಾಗಿದೆ. ದೊರೆತ ಅವಕಾಶ ಬಳಸಿಕೊಂಡು, ದೇಶ, ರಾಜ್ಯ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ ಎಂದು ಕಟೀಲ್, ಖೂಬಾ ಅವರಿಗೆ ಸಲಹೆ ಮಾಡಿದರು.</p>.<p class="Briefhead"><strong>ಕೇಂದ್ರ ರಸಗೊಬ್ಬರ ಸಚಿವರಿಗೆ ಸನ್ಮಾನ</strong></p>.<p><br />ಬೀದರ್: ನವದೆಹಲಿಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ಜಿಲ್ಲೆಯ ಜನಪ್ರತಿನಿಧಿಗಳು ಬುಧವಾರ ಸನ್ಮಾನಿಸಿದರು.</p>.<p><br />ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಹಾಗೂ ಚಂದ್ರಶೇಖರ ಪಾಟೀಲ ಅವರು ಪುಷ್ಪಗುಚ್ಛ ನೀಡಿ ಶುಭ ಕೋರಿದರು.</p>.<p><br />ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರದಿಂದ ಎಲ್ಲ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.<br />ಜಿಲ್ಲೆಯ ಪ್ರಗತಿಗೆ ಎಲ್ಲರೂ ಒಂದಾಗಿ ಶ್ರಮಿಸೋಣ. ನಿಮ್ಮ ಕ್ಷೇತ್ರದಲ್ಲಿ ಏನೇ ಅಭಿವೃದ್ಧಿ ಕೆಲಸಗಳಾಗಬೇಕಿದ್ದಲ್ಲಿ ಅಗತ್ಯ ಪ್ರಸ್ತಾವ ಸಿದ್ಧಪಡಿಸಿ ಗಮನಕ್ಕೆ ತನ್ನಿ. ನಾನು ಎಲ್ಲ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದು ಖೂಬಾ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರ ನವದೆಹಲಿಯ ನಿವಾಸಕ್ಕೆ ಬುಧವಾರ ಭೇಟಿ ನೀಡಿದರು.</p>.<p>ಕಟೀಲ್ ಅವರಿಗೆ ಹಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಗೌರವಿಸಿದರು.</p>.<p>ತಮಗೆ ಸಚಿವ ಸ್ಥಾನ ಲಭಿಸಿದ್ದಕ್ಕೆ ರಾಜ್ಯ ಅದರಲ್ಲೂ ಕಲ್ಯಾಣ ಕರ್ನಾಟಕದ ಜನತೆಗೆ ಬಹಳ ಸಂತಸವಾಗಿದೆ. ದೊರೆತ ಅವಕಾಶ ಬಳಸಿಕೊಂಡು, ದೇಶ, ರಾಜ್ಯ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ ಎಂದು ಕಟೀಲ್, ಖೂಬಾ ಅವರಿಗೆ ಸಲಹೆ ಮಾಡಿದರು.</p>.<p class="Briefhead"><strong>ಕೇಂದ್ರ ರಸಗೊಬ್ಬರ ಸಚಿವರಿಗೆ ಸನ್ಮಾನ</strong></p>.<p><br />ಬೀದರ್: ನವದೆಹಲಿಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಮೂಲ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ಜಿಲ್ಲೆಯ ಜನಪ್ರತಿನಿಧಿಗಳು ಬುಧವಾರ ಸನ್ಮಾನಿಸಿದರು.</p>.<p><br />ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಹಾಗೂ ಚಂದ್ರಶೇಖರ ಪಾಟೀಲ ಅವರು ಪುಷ್ಪಗುಚ್ಛ ನೀಡಿ ಶುಭ ಕೋರಿದರು.</p>.<p><br />ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರದಿಂದ ಎಲ್ಲ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.<br />ಜಿಲ್ಲೆಯ ಪ್ರಗತಿಗೆ ಎಲ್ಲರೂ ಒಂದಾಗಿ ಶ್ರಮಿಸೋಣ. ನಿಮ್ಮ ಕ್ಷೇತ್ರದಲ್ಲಿ ಏನೇ ಅಭಿವೃದ್ಧಿ ಕೆಲಸಗಳಾಗಬೇಕಿದ್ದಲ್ಲಿ ಅಗತ್ಯ ಪ್ರಸ್ತಾವ ಸಿದ್ಧಪಡಿಸಿ ಗಮನಕ್ಕೆ ತನ್ನಿ. ನಾನು ಎಲ್ಲ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದು ಖೂಬಾ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>