<p><strong>ಬೀದರ್</strong>: ಕೇಂದ್ರ ಸರ್ಕಾರದ ಅಣತಿಯಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೋಟಿಸ್ ಕೊಟ್ಟಿದ್ದು, ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಇದರ ವಿರುದ್ಧ ಕುರುಬ ಸಮಾಜದ ವಿವಿಧ ಸಂಘಟನೆಗಳಿಂದ ಆ. 5ರಂದು ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಮಾಜದ ಹಿರಿಯ ಮುಖಂಡರೂ ಆದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ ತಿಳಿಸಿದರು. </p><p>ಆ.5ರಂದು ಬೆಳಿಗ್ಗೆ 10ಕ್ಕೆ ನಗರದ ಬೊಮ್ಮಗೊಂಡೇಶ್ವರ ವೃತ್ತದಿಂದ ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್ ಸಿಂಗ್ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ, ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.</p><p>ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ, ಸಂಗೊಳ್ಳಿ ರಾಯಣ್ಣ ಜನಪರ ವೇದಿಕೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘ, ಕನಕ ಯುವ ಸೇನೆ, ಕನಕ ಸಂಘ ಸೇರಿದಂತೆ ಜಿಲ್ಲೆಯ ಗೊಂಡ (ಕುರುಬ) ಸಮಾಜ ಸಂಘಟನೆಗಳು, ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.</p><p>ಹಗರಣ ಎಂಬ ಪದವೇ ಬಿಜೆಪಿಯವರಿಂದ ಹುಟ್ಟಿಕೊಂಡಿದೆ. ಅದು ಕೇಸರಿ ಕಲಿಗಳಿಗಷ್ಟೇ ಗೊತ್ತಿದೆ. ಬಿಜೆಪಿಯವರು ತಲೆ ಬುಡ ಇಲ್ಲದ, ಎಳ್ಳಷ್ಟು ಹುರುಳಿಲ್ಲದ ಮುಡಾ ಹಗರಣ ಸೃಷ್ಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೆಸರು ಎರೆಚಲು ಪ್ರಯತ್ನಿಸುತ್ತಿರುದ್ದಾರೆ. ಇದು ಮೂರ್ಖತನದ ಪರಮಾವಧಿ, ಖಂಡನೀಯ. ಎರಡನೇ ಸಲ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಶುದ್ಧ ಹಸ್ತರಾಗಿ ಆಡಳಿತ ನಡೆಸುತ್ತಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಬಸವಣ್ಣನವರ ತತ್ವಗಳನ್ನು ಪಾಲಿಸುತ್ತ ಸಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಇಲ್ಲಸಲ್ಲದ ಸುಳ್ಳುಗಳನ್ನು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದರು.</p>.<p>ಸಿದ್ದರಾಮಯ್ಯನವರು ಅವರ ಅಧಿಕಾರದ ಅವಧಿಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರೈತರು, ಮಹಿಳೆಯರು, ಯುವಕರು, ಅಶಕ್ತರು, ದೀನ–ದಲಿತರು, ಬಡವರು ಇದರಲ್ಲಿ ಸೇರಿದ್ದಾರೆ. ಅನ್ನಭಾಗ್ಯ, ಶಕ್ತಿ, ಯುವ ನಿಧಿ, ಗೃಹಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳಿಂದ ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ಆಗಿದೆ. ಇಡೀ ದೇಶ ಕರ್ನಾಟಕದತ್ತ ತಿರುಗಿ ನೋಡುವಂತಾಗಿದೆ. ಆದರೆ, ಬಿಜೆಪಿಯವರು ಇದನ್ನು ಸಹಿಸಿಕೊಳ್ಳದೆ ಹೊಟ್ಟೆಕಿಚ್ಚಿನಿಂದ ಹುರುಳಿಲ್ಲದ ಆರೋಪಗಳನ್ನು ಸಿದ್ದರಾಮಯ್ಯ ವಿರುದ್ಧ ಮಾಡುತ್ತಿದ್ದಾರೆ. ಇದನ್ನು ಕುರುಬ ಸಮಾಜ ಸಹಿಸುವುದಿಲ್ಲ ಎಂದು ಹೇಳಿದರು.</p><p>ಶ್ರೀಮಂತರ ಪರ ಕಾಳಜಿ ಹೊಂದಿರುವ ಬಿಜೆಪಿಯವರು ಮನಬಂದಂತೆ ಹಣ ಲೂಟಿ ಹೊಡೆದಿದ್ದರಿಂದಲೇ ಜನ ಅವರನ್ನು ಕಳೆದ ಚುನಾವಣೆಯಲ್ಲಿ ಸೋಲಿಸಿದರು. ಹೀಗಿದ್ದರೂ ಅವರು ಪಾಠ ಕಲಿತಿಲ್ಲ. ಹೀಗಾಗಿಯೇ ಸಿದ್ದರಾಮಯ್ಯನವರ ಜನಪರ ಆಡಳಿತ ಅರಗಿಸಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಒಂದಿಲ್ಲೊಂದು ಷಡ್ಯಂತ್ರಗಳನ್ನು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು. </p><p>ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿಯವರು ತಕ್ಷಣವೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಜನರೇ ತಕ್ಕ ಪಾಠ ಕಲಿಸುವರು. ಅಪಪ್ರಚಾರ ಮಾಡುವುದನ್ನು ಬಿಟ್ಟು ವಿರೋಧ ಪಕ್ಷವಾಗಿ ಸರ್ಕಾರಕ್ಕೆ ಉತ್ತಮ ಸಲಹೆ ಮಾಡುವ ಕೆಲಸ ಬಿಜೆಪಿಯವರು ಮಾಡಬೇಕು ಎಂದು ತಿಳಿಸಿದರು. </p><p>ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷ ಬಸವರಾಜ ಹೇಡೆ, ಗೊಂಡ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಬಿರಾದಾರ, ಹಣಮಂತ ಮಲ್ಕಾಪೂರ, ನರಸಪ್ಪ ಯಾಕತಪೂರ, ಗಣಪತಿ ಕಮಠಾಣ, ಅಮರ ವಡಗಾವೆ, ರಾಜು ಚಿಟ್ಟಾವಾಡಿ, ಬಾಲಾಜಿ ಜಬಾಡೆ, ಸಚಿನ್ ಕಲ್ಲೂರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಕೇಂದ್ರ ಸರ್ಕಾರದ ಅಣತಿಯಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೋಟಿಸ್ ಕೊಟ್ಟಿದ್ದು, ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಇದರ ವಿರುದ್ಧ ಕುರುಬ ಸಮಾಜದ ವಿವಿಧ ಸಂಘಟನೆಗಳಿಂದ ಆ. 5ರಂದು ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಮಾಜದ ಹಿರಿಯ ಮುಖಂಡರೂ ಆದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ್ ಚಿಮಕೋಡೆ ತಿಳಿಸಿದರು. </p><p>ಆ.5ರಂದು ಬೆಳಿಗ್ಗೆ 10ಕ್ಕೆ ನಗರದ ಬೊಮ್ಮಗೊಂಡೇಶ್ವರ ವೃತ್ತದಿಂದ ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್ ಸಿಂಗ್ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ, ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.</p><p>ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ, ಸಂಗೊಳ್ಳಿ ರಾಯಣ್ಣ ಜನಪರ ವೇದಿಕೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘ, ಕನಕ ಯುವ ಸೇನೆ, ಕನಕ ಸಂಘ ಸೇರಿದಂತೆ ಜಿಲ್ಲೆಯ ಗೊಂಡ (ಕುರುಬ) ಸಮಾಜ ಸಂಘಟನೆಗಳು, ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.</p><p>ಹಗರಣ ಎಂಬ ಪದವೇ ಬಿಜೆಪಿಯವರಿಂದ ಹುಟ್ಟಿಕೊಂಡಿದೆ. ಅದು ಕೇಸರಿ ಕಲಿಗಳಿಗಷ್ಟೇ ಗೊತ್ತಿದೆ. ಬಿಜೆಪಿಯವರು ತಲೆ ಬುಡ ಇಲ್ಲದ, ಎಳ್ಳಷ್ಟು ಹುರುಳಿಲ್ಲದ ಮುಡಾ ಹಗರಣ ಸೃಷ್ಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೆಸರು ಎರೆಚಲು ಪ್ರಯತ್ನಿಸುತ್ತಿರುದ್ದಾರೆ. ಇದು ಮೂರ್ಖತನದ ಪರಮಾವಧಿ, ಖಂಡನೀಯ. ಎರಡನೇ ಸಲ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಶುದ್ಧ ಹಸ್ತರಾಗಿ ಆಡಳಿತ ನಡೆಸುತ್ತಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಬಸವಣ್ಣನವರ ತತ್ವಗಳನ್ನು ಪಾಲಿಸುತ್ತ ಸಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಇಲ್ಲಸಲ್ಲದ ಸುಳ್ಳುಗಳನ್ನು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದರು.</p>.<p>ಸಿದ್ದರಾಮಯ್ಯನವರು ಅವರ ಅಧಿಕಾರದ ಅವಧಿಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರೈತರು, ಮಹಿಳೆಯರು, ಯುವಕರು, ಅಶಕ್ತರು, ದೀನ–ದಲಿತರು, ಬಡವರು ಇದರಲ್ಲಿ ಸೇರಿದ್ದಾರೆ. ಅನ್ನಭಾಗ್ಯ, ಶಕ್ತಿ, ಯುವ ನಿಧಿ, ಗೃಹಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳಿಂದ ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ಆಗಿದೆ. ಇಡೀ ದೇಶ ಕರ್ನಾಟಕದತ್ತ ತಿರುಗಿ ನೋಡುವಂತಾಗಿದೆ. ಆದರೆ, ಬಿಜೆಪಿಯವರು ಇದನ್ನು ಸಹಿಸಿಕೊಳ್ಳದೆ ಹೊಟ್ಟೆಕಿಚ್ಚಿನಿಂದ ಹುರುಳಿಲ್ಲದ ಆರೋಪಗಳನ್ನು ಸಿದ್ದರಾಮಯ್ಯ ವಿರುದ್ಧ ಮಾಡುತ್ತಿದ್ದಾರೆ. ಇದನ್ನು ಕುರುಬ ಸಮಾಜ ಸಹಿಸುವುದಿಲ್ಲ ಎಂದು ಹೇಳಿದರು.</p><p>ಶ್ರೀಮಂತರ ಪರ ಕಾಳಜಿ ಹೊಂದಿರುವ ಬಿಜೆಪಿಯವರು ಮನಬಂದಂತೆ ಹಣ ಲೂಟಿ ಹೊಡೆದಿದ್ದರಿಂದಲೇ ಜನ ಅವರನ್ನು ಕಳೆದ ಚುನಾವಣೆಯಲ್ಲಿ ಸೋಲಿಸಿದರು. ಹೀಗಿದ್ದರೂ ಅವರು ಪಾಠ ಕಲಿತಿಲ್ಲ. ಹೀಗಾಗಿಯೇ ಸಿದ್ದರಾಮಯ್ಯನವರ ಜನಪರ ಆಡಳಿತ ಅರಗಿಸಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಒಂದಿಲ್ಲೊಂದು ಷಡ್ಯಂತ್ರಗಳನ್ನು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು. </p><p>ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿಯವರು ತಕ್ಷಣವೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಜನರೇ ತಕ್ಕ ಪಾಠ ಕಲಿಸುವರು. ಅಪಪ್ರಚಾರ ಮಾಡುವುದನ್ನು ಬಿಟ್ಟು ವಿರೋಧ ಪಕ್ಷವಾಗಿ ಸರ್ಕಾರಕ್ಕೆ ಉತ್ತಮ ಸಲಹೆ ಮಾಡುವ ಕೆಲಸ ಬಿಜೆಪಿಯವರು ಮಾಡಬೇಕು ಎಂದು ತಿಳಿಸಿದರು. </p><p>ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷ ಬಸವರಾಜ ಹೇಡೆ, ಗೊಂಡ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಬಿರಾದಾರ, ಹಣಮಂತ ಮಲ್ಕಾಪೂರ, ನರಸಪ್ಪ ಯಾಕತಪೂರ, ಗಣಪತಿ ಕಮಠಾಣ, ಅಮರ ವಡಗಾವೆ, ರಾಜು ಚಿಟ್ಟಾವಾಡಿ, ಬಾಲಾಜಿ ಜಬಾಡೆ, ಸಚಿನ್ ಕಲ್ಲೂರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>