<p><strong>ಬೀದರ್:</strong> ‘ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅಮರನಾಥ ಪಾಟೀಲ ಅವರು ಗೆದ್ದರೆ ಬಿಜೆಪಿಯ ಕಾರ್ಯಕರ್ತರು ಗೆದ್ದಂತೆ’ ಎಂದು ಬಿಜೆಪಿ ಕಲಬುರಗಿ ವಿಭಾಗ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್ ಹೇಳಿದರು.</p>.<p>ನಗರದ ಪಕ್ಷದ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಈ ಕಾರಣಕ್ಕಾಗಿಯೇ ಪಕ್ಷ ಅವರನ್ನು ಕಣಕ್ಕಿಳಿಸಿದೆ. ಕಾರ್ಯಕರ್ತರು ಪ್ರತಿಯೊಬ್ಬ ಮತದಾರರನ್ನು ಭೇಟಿ ಮಾಡಿ ಬಿಜೆಪಿಗೆ ಪ್ರಥಮ ಪ್ರಾಶ್ಯಸ್ತದ ಮತ ಕೊಡಿಸಲು ಶ್ರಮಿಸಬೇಕೆಂದು ತಿಳಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷರಾದ ಶಶಿಧರ ಹೊಸಳ್ಳಿ, ರಾಜೇಂದ್ರ ಪೂಜಾರಿ, ಚುನಾವಣಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ, ಸಹ ಸಂಚಾಲಕ ಮಹೇಶ್ ಪಾಲಕ್, ಬೀದರ್ ಉಸ್ತುವಾರಿ ರಾಜಶೇಖರ್ ನಾಗಮೂರ್ತಿ, ಪ್ರಮುಖರಾದ ರೇವಣಸಿನ, ಸುಭಾಷ್ ಮಡಿವಾಳ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅಮರನಾಥ ಪಾಟೀಲ ಅವರು ಗೆದ್ದರೆ ಬಿಜೆಪಿಯ ಕಾರ್ಯಕರ್ತರು ಗೆದ್ದಂತೆ’ ಎಂದು ಬಿಜೆಪಿ ಕಲಬುರಗಿ ವಿಭಾಗ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್ ಹೇಳಿದರು.</p>.<p>ನಗರದ ಪಕ್ಷದ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಈ ಕಾರಣಕ್ಕಾಗಿಯೇ ಪಕ್ಷ ಅವರನ್ನು ಕಣಕ್ಕಿಳಿಸಿದೆ. ಕಾರ್ಯಕರ್ತರು ಪ್ರತಿಯೊಬ್ಬ ಮತದಾರರನ್ನು ಭೇಟಿ ಮಾಡಿ ಬಿಜೆಪಿಗೆ ಪ್ರಥಮ ಪ್ರಾಶ್ಯಸ್ತದ ಮತ ಕೊಡಿಸಲು ಶ್ರಮಿಸಬೇಕೆಂದು ತಿಳಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷರಾದ ಶಶಿಧರ ಹೊಸಳ್ಳಿ, ರಾಜೇಂದ್ರ ಪೂಜಾರಿ, ಚುನಾವಣಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ, ಸಹ ಸಂಚಾಲಕ ಮಹೇಶ್ ಪಾಲಕ್, ಬೀದರ್ ಉಸ್ತುವಾರಿ ರಾಜಶೇಖರ್ ನಾಗಮೂರ್ತಿ, ಪ್ರಮುಖರಾದ ರೇವಣಸಿನ, ಸುಭಾಷ್ ಮಡಿವಾಳ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>