<p><strong>ಬೀದರ್</strong>: ‘ಕಲೆ ಕಾಲಾತೀತ, ಸೀಮಾತೀತವಾದುದು. ಅದು ಎಲ್ಲರಿಗೂ ಪರಮಾನಂತ ನೀಡುತ್ತದೆ. ಅದನ್ನು ಜಾತಿ, ಮತ, ಪಂಥದ ಹಂಗಿಲ್ಲ’ ಎಂದು ರಾಷ್ಟ್ರೀಯ ಜಾನಪದ ಮತ್ತು ಬುಡಕಟ್ಟು ಕಲಾ ಪರಿಷತ್ತಿನ ಅಧ್ಯಕ್ಷ ನಿರ್ಮಲ್ ರತನಲಾಲ್ ವೈದ್ಯ ತಿಳಿಸಿದರು.</p>.<p>ನಗರದ ಕರ್ನಾಟಕ ಕಾಲೇಜಿನ ಕನ್ನಡ ವಿಭಾಗ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಭಾರತೀಯ ಸಂಸ್ಕೃತಿ’ ಕುರಿತು ಉಪನ್ಯಾಸ ನೀಡಿದರು.</p>.<p>ಕಲೆಗೆ ಸಮಯ, ಪ್ರದೇಶದ ಬಂಧನ ಇಲ್ಲ. ಮನುಷ್ಯ ಹುಟ್ಟಿದಾಗ ಜಾತಿ, ಮತಗಳ ಯಾವುದೇ ಬಂಧನ ಇರಲಿಲ್ಲ. ನಂತರದ ದಿನಗಳಲ್ಲಿ ನಾನಾ ಅಚರಣೆ, ಮತ್ತಿತರ ಕಾರಣಗಳಿಂದಾಗಿ ಜಾತಿ, ಮತ, ಪಂಥಗಳು ಹುಟ್ಟಿಕೊಂಡವು. ಆದರೆ, ಕಲೆ ಇವೆಲ್ಲವನ್ನು ಮೀರಿ ಬೆಳೆದಿದೆ ಎಂದರು.</p>.<p>ಭಾರತೀಯ ಸಂಸ್ಕೃತಿ ಶ್ರೀಮಂತಿಕೆಯಿಂದ ಕೂಡಿದೆ. ಅದು ನಮ್ಮ ಸಂಸ್ಕೃತಿಯ ಭಾಗ. ಅದನ್ನೀಗ ಪಾಶ್ಚಾತ್ಯರೂ ಅನುಸರಿಸುತ್ತಿದ್ದಾರೆ. ಇದರ ಮಹತ್ವ ಎಷ್ಟಿದೆ ಎಂಬುದನ್ನು ಅರಿಯಬಹುದು ಎಂದು ಹೇಳಿದರು. </p>.<p>ಆಚರಣೆಗಳು ಎಷ್ಟೇ ಭಿನ್ನವಾಗಿದ್ದರೂ ಅವೆಲ್ಲವುಗಳನ್ನೂ ಸಂಸ್ಕೃತಿ ಜೋಡಿಸುತ್ತದೆ. ಎಲ್ಲರನ್ನೂ ಒಂದುಗೂಡಿಸುವ ಅದ್ಭುತ ಶಕ್ತಿ ಸಂಸ್ಕೃತಿಗಿದೆ. ಈ ಸಂಸ್ಕೃತಿಯನ್ನು ಸಂರಕ್ಷಿಸುವ, ಸಶಕ್ತಗೊಳಿಸುವ ಕಾರ್ಯ ಆಗಬೇಕಾಗಿದೆ ಎಂದು ತಿಳಿಸಿದರು. </p>.<p>ಜಾನಪದ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮುಂತಾದವುಗಳ ಮೂಲಕ ಸಂಸ್ಕೃತಿಯು ಪ್ರಸಾರವಾಗುತ್ತಿದೆ. ಹಬ್ಬ ಹರಿದಿನಗಳು, ಕೌಟುಂಬಿಕ ಆಚರಣೆಗಳೂ ಸಂಸ್ಕೃತಿಯನ್ನು ಪರಿಚಯಿಸುತ್ತವೆ ಎಂದರು.</p>.<p>ಪ್ರಾಚಾರ್ಯ ಮಲ್ಲಿಕಾರ್ಜುನ ಹಂಗರಗಿ ಮಾತನಾಡಿ, ಕಲೆ, ಸಂಸ್ಕೃತಿಯನ್ನು ಉಳಿಸುವ ಕೆಲಸ ಇನ್ನಷ್ಟು ವ್ಯಾಪಕವಾಗಿ ನಡೆಯಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಸಂಸ್ಕೃತಿ, ಪರಂಪರೆಯ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದರು.</p>.<p>ಕನ್ನಡ ವಿಭಾಗದ ಮುಖ್ಯಸ್ಥ ಜಗನ್ನಾಥ ಹೆಬ್ಬಾಳೆ ಮಾತನಾಡಿ, ರಾಷ್ಟ್ರೀಯ ಬುಡಕಟ್ಟು ಕಲಾ ಪರಿಷತ್ತು ಬಹಳ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಜಾನಪದ ವಿಶ್ವವಿದ್ಯಾಲಯಕ್ಕೆ ಸಾಕಷ್ಟು ಅನುದಾನವೂ ಲಭಿಸಿದೆ. ಜಾನಪದ ವಿಶ್ವವಿದ್ಯಾಲಯದಲ್ಲಿ ವಸ್ತು ಸಂಗ್ರಹಾಲಯ ಆರಂಭಿಸಲಾಗಿದೆ. ಬೀದರ್ನಲ್ಲೂ ಆರಂಭಿಸುವ ಚಿಂತನೆ ನಡೆಯುತ್ತಿದೆ ಎಂದು ಹೇಳಿದರು.</p>.<p>ಕಲಾ ಪರಿಷತ್ತಿನ ಕಾರ್ಯದರ್ಶಿ ರಾಜಕುಮಾರ ಹೆಬ್ಬಾಳೆ, ಕಲೆ ಮತ್ತು ಕಲಾವಿದರನ್ನು ಆರ್ಥಿಕವಾಗಿ ಸಬಲಗೊಳಿಸಲು ಹಲವು ಕಾರ್ಯಕ್ರಮ ರೂಪಿಸಲಾಗಿದೆ. ಬೇರೆ ಬೇರೆ ರಾಜ್ಯಗಳ ಕಲಾವಿದರನ್ನು ಆಹ್ವಾನಿಸುವ ಮೂಲಕ ಸಾಂಸ್ಕೃತಿಕ ವಿನಿಯಮಕ್ಕೆ ಶ್ರಮಿಸಲಾಗುತ್ತಿದೆ ಎಂದರು.</p>.<p>ಪತ್ರಕರ್ತ ಮಾರುತಿ ಸೋನಾರ, ಮಹಾನಂದ ಮಡಕಿ, ಸುನೀತಾ ಕೂಡ್ಲಿಕರ್, ಮಲ್ಲಯ್ಯ ಮಠಪತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಕಲೆ ಕಾಲಾತೀತ, ಸೀಮಾತೀತವಾದುದು. ಅದು ಎಲ್ಲರಿಗೂ ಪರಮಾನಂತ ನೀಡುತ್ತದೆ. ಅದನ್ನು ಜಾತಿ, ಮತ, ಪಂಥದ ಹಂಗಿಲ್ಲ’ ಎಂದು ರಾಷ್ಟ್ರೀಯ ಜಾನಪದ ಮತ್ತು ಬುಡಕಟ್ಟು ಕಲಾ ಪರಿಷತ್ತಿನ ಅಧ್ಯಕ್ಷ ನಿರ್ಮಲ್ ರತನಲಾಲ್ ವೈದ್ಯ ತಿಳಿಸಿದರು.</p>.<p>ನಗರದ ಕರ್ನಾಟಕ ಕಾಲೇಜಿನ ಕನ್ನಡ ವಿಭಾಗ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಭಾರತೀಯ ಸಂಸ್ಕೃತಿ’ ಕುರಿತು ಉಪನ್ಯಾಸ ನೀಡಿದರು.</p>.<p>ಕಲೆಗೆ ಸಮಯ, ಪ್ರದೇಶದ ಬಂಧನ ಇಲ್ಲ. ಮನುಷ್ಯ ಹುಟ್ಟಿದಾಗ ಜಾತಿ, ಮತಗಳ ಯಾವುದೇ ಬಂಧನ ಇರಲಿಲ್ಲ. ನಂತರದ ದಿನಗಳಲ್ಲಿ ನಾನಾ ಅಚರಣೆ, ಮತ್ತಿತರ ಕಾರಣಗಳಿಂದಾಗಿ ಜಾತಿ, ಮತ, ಪಂಥಗಳು ಹುಟ್ಟಿಕೊಂಡವು. ಆದರೆ, ಕಲೆ ಇವೆಲ್ಲವನ್ನು ಮೀರಿ ಬೆಳೆದಿದೆ ಎಂದರು.</p>.<p>ಭಾರತೀಯ ಸಂಸ್ಕೃತಿ ಶ್ರೀಮಂತಿಕೆಯಿಂದ ಕೂಡಿದೆ. ಅದು ನಮ್ಮ ಸಂಸ್ಕೃತಿಯ ಭಾಗ. ಅದನ್ನೀಗ ಪಾಶ್ಚಾತ್ಯರೂ ಅನುಸರಿಸುತ್ತಿದ್ದಾರೆ. ಇದರ ಮಹತ್ವ ಎಷ್ಟಿದೆ ಎಂಬುದನ್ನು ಅರಿಯಬಹುದು ಎಂದು ಹೇಳಿದರು. </p>.<p>ಆಚರಣೆಗಳು ಎಷ್ಟೇ ಭಿನ್ನವಾಗಿದ್ದರೂ ಅವೆಲ್ಲವುಗಳನ್ನೂ ಸಂಸ್ಕೃತಿ ಜೋಡಿಸುತ್ತದೆ. ಎಲ್ಲರನ್ನೂ ಒಂದುಗೂಡಿಸುವ ಅದ್ಭುತ ಶಕ್ತಿ ಸಂಸ್ಕೃತಿಗಿದೆ. ಈ ಸಂಸ್ಕೃತಿಯನ್ನು ಸಂರಕ್ಷಿಸುವ, ಸಶಕ್ತಗೊಳಿಸುವ ಕಾರ್ಯ ಆಗಬೇಕಾಗಿದೆ ಎಂದು ತಿಳಿಸಿದರು. </p>.<p>ಜಾನಪದ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮುಂತಾದವುಗಳ ಮೂಲಕ ಸಂಸ್ಕೃತಿಯು ಪ್ರಸಾರವಾಗುತ್ತಿದೆ. ಹಬ್ಬ ಹರಿದಿನಗಳು, ಕೌಟುಂಬಿಕ ಆಚರಣೆಗಳೂ ಸಂಸ್ಕೃತಿಯನ್ನು ಪರಿಚಯಿಸುತ್ತವೆ ಎಂದರು.</p>.<p>ಪ್ರಾಚಾರ್ಯ ಮಲ್ಲಿಕಾರ್ಜುನ ಹಂಗರಗಿ ಮಾತನಾಡಿ, ಕಲೆ, ಸಂಸ್ಕೃತಿಯನ್ನು ಉಳಿಸುವ ಕೆಲಸ ಇನ್ನಷ್ಟು ವ್ಯಾಪಕವಾಗಿ ನಡೆಯಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಸಂಸ್ಕೃತಿ, ಪರಂಪರೆಯ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದರು.</p>.<p>ಕನ್ನಡ ವಿಭಾಗದ ಮುಖ್ಯಸ್ಥ ಜಗನ್ನಾಥ ಹೆಬ್ಬಾಳೆ ಮಾತನಾಡಿ, ರಾಷ್ಟ್ರೀಯ ಬುಡಕಟ್ಟು ಕಲಾ ಪರಿಷತ್ತು ಬಹಳ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಜಾನಪದ ವಿಶ್ವವಿದ್ಯಾಲಯಕ್ಕೆ ಸಾಕಷ್ಟು ಅನುದಾನವೂ ಲಭಿಸಿದೆ. ಜಾನಪದ ವಿಶ್ವವಿದ್ಯಾಲಯದಲ್ಲಿ ವಸ್ತು ಸಂಗ್ರಹಾಲಯ ಆರಂಭಿಸಲಾಗಿದೆ. ಬೀದರ್ನಲ್ಲೂ ಆರಂಭಿಸುವ ಚಿಂತನೆ ನಡೆಯುತ್ತಿದೆ ಎಂದು ಹೇಳಿದರು.</p>.<p>ಕಲಾ ಪರಿಷತ್ತಿನ ಕಾರ್ಯದರ್ಶಿ ರಾಜಕುಮಾರ ಹೆಬ್ಬಾಳೆ, ಕಲೆ ಮತ್ತು ಕಲಾವಿದರನ್ನು ಆರ್ಥಿಕವಾಗಿ ಸಬಲಗೊಳಿಸಲು ಹಲವು ಕಾರ್ಯಕ್ರಮ ರೂಪಿಸಲಾಗಿದೆ. ಬೇರೆ ಬೇರೆ ರಾಜ್ಯಗಳ ಕಲಾವಿದರನ್ನು ಆಹ್ವಾನಿಸುವ ಮೂಲಕ ಸಾಂಸ್ಕೃತಿಕ ವಿನಿಯಮಕ್ಕೆ ಶ್ರಮಿಸಲಾಗುತ್ತಿದೆ ಎಂದರು.</p>.<p>ಪತ್ರಕರ್ತ ಮಾರುತಿ ಸೋನಾರ, ಮಹಾನಂದ ಮಡಕಿ, ಸುನೀತಾ ಕೂಡ್ಲಿಕರ್, ಮಲ್ಲಯ್ಯ ಮಠಪತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>