ಬೀದರ್: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿಸಿರುವ ರಾಜ್ಯ ಸರ್ಕಾರವು ಅವರ ಜಾಗಕ್ಕೆ ಪ್ರದೀಪ್ ಗುಂಟಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಚನ್ನಬಸವಣ್ಣ ಅವರನ್ನು ಬೆಂಗಳೂರಿನ ಪ್ರಧಾನ ಕಚೇರಿಯ ಆಡಳಿತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಾರಾಗೃಹ ವಿಭಾಗದಲ್ಲಿದ್ದ ಪ್ರದೀಪ್ ಗುಂಟಿ ಅವರನ್ನು ಬೀದರ್ ಎಸ್ಪಿಯಾಗಿ ನೇಮಕ ಮಾಡಿದೆ.
ಎರಡು ವರ್ಷಗಳ ಅವಧಿಯಲ್ಲಿ ಚನ್ನಬಸವಣ್ಣ ಅವರು ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ಮಾಡಿದ್ದಾರೆ. ಸಂಚಾರ ಸುವ್ಯವಸ್ಥೆಯಲ್ಲಿ ಸುಧಾರಣೆ, ಅಕ್ರಮ ಗಾಂಜಾ, ಅಕ್ರಮ ಗುಟ್ಕಾ ಸಾಗಾಟ, ಐಪಿಎಲ್ ಬೆಟ್ಟಿಂಗ್ ಗೆ ಕಡಿವಾಣ ಹಾಕಿದ್ದಾರೆ.