<p><strong>ಬೀದರ್</strong>: ‘ಸಮಕಾಲೀನ ಸಂದರ್ಭದಲ್ಲಿ ಮಾಧ್ಯಮದ ಪಾವಿತ್ರ್ಯ ಕಾಪಾಡುವ ಅಗತ್ಯ ಬಹಳ ಇದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.</p>.<p>ಬೀದರ್ ಜಿಲ್ಲಾ ಪತ್ರಿಕಾ ದಿನಾಚರಣೆ ಸಮಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಮಾಧ್ಯಮಗಳ ಪಾತ್ರ ಬಹಳ ಮಹತ್ವದ್ದು. ಆಡಳಿತ ನಡೆಸುವವರ ಲೋಪ ದೋಷಗಳನ್ನು ಎತ್ತಿ ತೋರಿಸಿ, ಜನಾಭಿಪ್ರಾಯ ರೂಪಿಸುವ ದೊಡ್ಡ ಶಕ್ತಿ ಮಾಧ್ಯಮಕ್ಕಿದೆ. ಆದರೆ, ನಿರ್ಭಿಡೆ, ನಿಷ್ಪಕ್ಷಪಾತವಾಗಿ ಮಾಧ್ಯಮಗಳು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.</p>.<p>ಸುಳ್ಳು ಸುದ್ದಿ, ಪಟ್ಟಭದ್ರ ಹಿತಾಸಕ್ತಿಗಳಿಗೆ ಪೂರಕವಾಗಿ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟಗೊಳ್ಳುತ್ತಿರುವುದು ದುರದೃಷ್ಟಕರ. ಅದರಲ್ಲೂ ಎಲೆಕ್ಟ್ರಾನಿಕ್ ಮಾಧ್ಯಮಗಳು ಅತಿ ರೋಚಕತೆ ಹಿಂದೆ ಬಿದ್ದಿವೆ. ಈಗಲೂ ಮುದ್ರಣ ಮಾಧ್ಯಮ ತನ್ನ ವಿಶ್ವಾಸಾರ್ಹತೆ ಉಳಿಸಿಕೊಂಡಿದೆ. ಸಮಾಜದಲ್ಲಿ ಒಡಕು ಉಂಟು ಮಾಡುವ ಕೆಲಸ ಮಾಧ್ಯಮಗಳು ಮಾಡಬಾರದು ಎಂದು ತಿಳಿಸಿದರು.</p>.<p>ಪತ್ರಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳು ವಸ್ತುನಿಷ್ಠ ಸುದ್ದಿಗಳನ್ನು ಪ್ರಕಟಿಸಬೇಕು. ಸತ್ಯವಾದ ಸುದ್ದಿಗಳು ಬರಬೇಕು. ಪತ್ರಕರ್ತರು ಉತ್ತಮ ಸಮಾಜಕ್ಕಾಗಿ ಕೆಲಸ ಮಾಡಬೇಕು. ಪತ್ರಕರ್ತರಿಗೆ ನಮ್ಮ ಸರ್ಕಾರ ಅಗತ್ಯ ಸುರಕ್ಷತೆ ಕಲ್ಪಿಸಿಕೊಡಲಿದೆ. ವಿಮೆ, ಬಸ್ ಪಾಸ್ ಸೌಲಭ್ಯವನ್ನು ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದರು.</p>.<p>ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ಬೀದರ್ ಮಿನಿ ಭಾರತ ಇದ್ದಂತೆ. ಇಲ್ಲಿ ಹಿಂದೂ, ಮುಸ್ಲಿಂ, ಕೈಸ್ತ, ಸಿಖ್ ಸೇರಿದಂತೆ ಎಲ್ಲಾ ಧರ್ಮೀಯರು ಇದ್ದಾರೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ಗಳನ್ನು ನೀಡುವ ಕುರಿತು ನಿಯಮಗಳನ್ನು ರೂಪಿಸುತ್ತಿದ್ದು ಒಂದು ತಿಂಗಳೊಳಗೆ ಪತ್ರಕರ್ತರ ಕೈ ಸೇರಲಿವೆ. ಆರೋಗ್ಯ ಯೋಜನೆ ಮತ್ತು ಪತ್ರಕರ್ತರಿಗೆ ನೀಡುವ ಪಿಂಚಣಿ ₹12 ಸಾವಿರದಿಂದ ₹15 ಸಾವಿರಕ್ಕೆ ಹೆಚ್ಚಿಸುವ ಪ್ರಸ್ತಾವ ಇದೆ. ಪತ್ರಕರ್ತರು ಸಮಾಜ ಹಾಗೂ ಸರ್ಕಾರದ ಕೊಂಡಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ವಿಶ್ವಾಸಾರ್ಹತೆಯಿಂದ ಕೆಲಸ ಮಾಡುವ ಮೂಲಕ ಪತ್ರಿಕಾ ರಂಗದ ಆಳ ಮತ್ತು ಅಗಲವನ್ನು ತಿಳಿದುಕೊಳ್ಳಬೇಕು. ವಿಶ್ವಾಸಾರ್ಹತೆ ಇರುವ ಪತ್ರಕರ್ತರಿಗೆ ಸಿಗುವ ಗೌರವ ಯಾರಿಗೂ ಸಿಗುವುದಿಲ್ಲ. ಆ ಎತ್ತರದ ಗೌರವದ ಸ್ಥಾನ ಉಳಿಸಿಕೊಂಡು ಕೆಲಸ ಮಾಡಬೇಕು ಎಂದರು.</p>.<p>ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ಪತ್ರಕರ್ತರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ನಾನು ಕೂಡ ಪ್ರಯತ್ನಿಸುವೆ. ಪತ್ರಿಕಾ ಭವನಕ್ಕೆ ಅಗತ್ಯ ನೆರವು ಕೂಡ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಮಾತನಾಡಿ, ಪತ್ರಕರ್ತರಿಗೆ ಬದ್ಧತೆ ಇರಬೇಕು. ಉತ್ತಮವಾದ ಸುದ್ದಿಗಳನ್ನು ಕೊಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪತ್ರಿಕಾ ದಿನಾಚರಣೆ ಸಮಿತಿ ಪ್ರಧಾನ ಕಾರ್ಯದರ್ಶಿ ಆನಂದ ದೇವಪ್ಪ, ಪತ್ರಕರ್ತರು ಹಾಗೂ ಕುಟುಂಬದವರಿಗೆ ಯಾವುದೇ ರೀತಿಯ ಮಿತಿ ಇಲ್ಲದೆ ಆರೋಗ್ಯ ಸೇವೆ ಕಲ್ಪಿಸಬೇಕು. ಪತ್ರಿಕಾ ಭವನದ ಉನ್ನತೀಕರಣಕ್ಕೆ ನೆರವು ನೀಡಬೇಕು ಎಂದು ಹಕ್ಕು ಮಂಡಿಸಿದರು.</p>.<p>ಮುಖ್ಯಮಂತ್ರಿಗಳ ಮಾಧ್ಯಮ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿ ಗಿರೀಶ್ ಕೋಟೆ, ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಜಿ., ಕೆಯುಡಬ್ಲ್ಯೂಜೆ ಉಪಾಧ್ಯಕ್ಷ ಭವಾನಿ ಸಿಂಗ್ ಠಾಕೂರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಪತ್ರಿಕಾ ದಿನಾಚರಣೆ ಸಮಿತಿ ಸಂಚಾಲಕ ಮಲ್ಲಿಕಾರ್ಜುನ ಬಿರಾದಾರ ಸ್ವಾಗತಿಸಿದರು. ಪತ್ರಕರ್ತರಾದ ಅಪ್ಪಾರಾವ್ ಸೌದಿ, ಮಾಳಪ್ಪ ಅಡಸಾರೆ ನಿರೂಪಿಸಿದರು. ಜಿಲ್ಲೆಯ ಪತ್ರಕರ್ತರು ಭಾಗವಹಿಸಿದ್ದರು.</p>.<p> ‘ಸುಳ್ಳು ಜೊಳ್ಳು ಪತ್ರಕರ್ತರ ಹೊರಹಾಕಿ’ ‘ಸುಳ್ಳು ಜೊಳ್ಳು ಹಾಗೂ ಬ್ಲ್ಯಾಕ್ಮೇಲ್ ಮಾಡುವ ಪತ್ರಕರ್ತರನ್ನು ಪತ್ರಕರ್ತರೇ ಹೊರಹಾಕಬೇಕು. ಏಕೆಂದರೆ ಬೇರೆಯವರಿಗೆ ಆ ಕೆಲಸ ಮಾಡಲು ಆಗುವುದಿಲ್ಲ’ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಪತ್ರಕರ್ತರಿಗಾಗಿಯೇ ಆರೋಗ್ಯ ಯೋಜನೆ ಜಾರಿಗೊಳಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಬರುವ 15 ದಿನಗಳಲ್ಲಿ ವಿತರಣೆ ಆಗಬಹುದು ಎಂದರು.</p>.<p> ‘ಸೆಲೆಬ್ರಿಟಿ ಶ್ರೀಮಂತರ ಪರ’ ‘ಜನರ ಸಮಸ್ಯೆಗಳನ್ನು ಸರ್ಕಾರಕ್ಕೆ ತರುವ ತಮ್ಮ ಜವಾಬ್ದಾರಿಯನ್ನು ಮರೆತ ಮಾಧ್ಯಮಗಳು ಸೆಲೆಬ್ರಿಟಿಗಳು ಮತ್ತು ಕಾರ್ಪೋರೇಟ್ ಶ್ರೀಮಂತರ ಬಗ್ಗೆ ತೋರಿಸುವ ಫ್ಯಾಷನ್ ಗೆ ಜಾರಿವೆ’ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ಪತ್ರಕರ್ತರು ಕೇಳಿಸಿಕೊಳ್ಳುವ ಕುತೂಹಲ ಕಳೆದುಕೊಂಡಿದ್ದಾರೆ. ಸತ್ಯ ಸುಳ್ಳನ್ನು ಸರಿಯಾಗಿ ಗ್ರಹಿಸುವ ವ್ಯವದಾನ ಕಳೆದು ಹೋಗಿದೆ. ಗುಣಮಟ್ಟದ ಪತ್ರಿಕೋದ್ಯಮ ಇಲ್ಲವಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಸಮಕಾಲೀನ ಸಂದರ್ಭದಲ್ಲಿ ಮಾಧ್ಯಮದ ಪಾವಿತ್ರ್ಯ ಕಾಪಾಡುವ ಅಗತ್ಯ ಬಹಳ ಇದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.</p>.<p>ಬೀದರ್ ಜಿಲ್ಲಾ ಪತ್ರಿಕಾ ದಿನಾಚರಣೆ ಸಮಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಮಾಧ್ಯಮಗಳ ಪಾತ್ರ ಬಹಳ ಮಹತ್ವದ್ದು. ಆಡಳಿತ ನಡೆಸುವವರ ಲೋಪ ದೋಷಗಳನ್ನು ಎತ್ತಿ ತೋರಿಸಿ, ಜನಾಭಿಪ್ರಾಯ ರೂಪಿಸುವ ದೊಡ್ಡ ಶಕ್ತಿ ಮಾಧ್ಯಮಕ್ಕಿದೆ. ಆದರೆ, ನಿರ್ಭಿಡೆ, ನಿಷ್ಪಕ್ಷಪಾತವಾಗಿ ಮಾಧ್ಯಮಗಳು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.</p>.<p>ಸುಳ್ಳು ಸುದ್ದಿ, ಪಟ್ಟಭದ್ರ ಹಿತಾಸಕ್ತಿಗಳಿಗೆ ಪೂರಕವಾಗಿ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟಗೊಳ್ಳುತ್ತಿರುವುದು ದುರದೃಷ್ಟಕರ. ಅದರಲ್ಲೂ ಎಲೆಕ್ಟ್ರಾನಿಕ್ ಮಾಧ್ಯಮಗಳು ಅತಿ ರೋಚಕತೆ ಹಿಂದೆ ಬಿದ್ದಿವೆ. ಈಗಲೂ ಮುದ್ರಣ ಮಾಧ್ಯಮ ತನ್ನ ವಿಶ್ವಾಸಾರ್ಹತೆ ಉಳಿಸಿಕೊಂಡಿದೆ. ಸಮಾಜದಲ್ಲಿ ಒಡಕು ಉಂಟು ಮಾಡುವ ಕೆಲಸ ಮಾಧ್ಯಮಗಳು ಮಾಡಬಾರದು ಎಂದು ತಿಳಿಸಿದರು.</p>.<p>ಪತ್ರಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳು ವಸ್ತುನಿಷ್ಠ ಸುದ್ದಿಗಳನ್ನು ಪ್ರಕಟಿಸಬೇಕು. ಸತ್ಯವಾದ ಸುದ್ದಿಗಳು ಬರಬೇಕು. ಪತ್ರಕರ್ತರು ಉತ್ತಮ ಸಮಾಜಕ್ಕಾಗಿ ಕೆಲಸ ಮಾಡಬೇಕು. ಪತ್ರಕರ್ತರಿಗೆ ನಮ್ಮ ಸರ್ಕಾರ ಅಗತ್ಯ ಸುರಕ್ಷತೆ ಕಲ್ಪಿಸಿಕೊಡಲಿದೆ. ವಿಮೆ, ಬಸ್ ಪಾಸ್ ಸೌಲಭ್ಯವನ್ನು ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದರು.</p>.<p>ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ಬೀದರ್ ಮಿನಿ ಭಾರತ ಇದ್ದಂತೆ. ಇಲ್ಲಿ ಹಿಂದೂ, ಮುಸ್ಲಿಂ, ಕೈಸ್ತ, ಸಿಖ್ ಸೇರಿದಂತೆ ಎಲ್ಲಾ ಧರ್ಮೀಯರು ಇದ್ದಾರೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ಗಳನ್ನು ನೀಡುವ ಕುರಿತು ನಿಯಮಗಳನ್ನು ರೂಪಿಸುತ್ತಿದ್ದು ಒಂದು ತಿಂಗಳೊಳಗೆ ಪತ್ರಕರ್ತರ ಕೈ ಸೇರಲಿವೆ. ಆರೋಗ್ಯ ಯೋಜನೆ ಮತ್ತು ಪತ್ರಕರ್ತರಿಗೆ ನೀಡುವ ಪಿಂಚಣಿ ₹12 ಸಾವಿರದಿಂದ ₹15 ಸಾವಿರಕ್ಕೆ ಹೆಚ್ಚಿಸುವ ಪ್ರಸ್ತಾವ ಇದೆ. ಪತ್ರಕರ್ತರು ಸಮಾಜ ಹಾಗೂ ಸರ್ಕಾರದ ಕೊಂಡಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ವಿಶ್ವಾಸಾರ್ಹತೆಯಿಂದ ಕೆಲಸ ಮಾಡುವ ಮೂಲಕ ಪತ್ರಿಕಾ ರಂಗದ ಆಳ ಮತ್ತು ಅಗಲವನ್ನು ತಿಳಿದುಕೊಳ್ಳಬೇಕು. ವಿಶ್ವಾಸಾರ್ಹತೆ ಇರುವ ಪತ್ರಕರ್ತರಿಗೆ ಸಿಗುವ ಗೌರವ ಯಾರಿಗೂ ಸಿಗುವುದಿಲ್ಲ. ಆ ಎತ್ತರದ ಗೌರವದ ಸ್ಥಾನ ಉಳಿಸಿಕೊಂಡು ಕೆಲಸ ಮಾಡಬೇಕು ಎಂದರು.</p>.<p>ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ಪತ್ರಕರ್ತರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ನಾನು ಕೂಡ ಪ್ರಯತ್ನಿಸುವೆ. ಪತ್ರಿಕಾ ಭವನಕ್ಕೆ ಅಗತ್ಯ ನೆರವು ಕೂಡ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಮಾತನಾಡಿ, ಪತ್ರಕರ್ತರಿಗೆ ಬದ್ಧತೆ ಇರಬೇಕು. ಉತ್ತಮವಾದ ಸುದ್ದಿಗಳನ್ನು ಕೊಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪತ್ರಿಕಾ ದಿನಾಚರಣೆ ಸಮಿತಿ ಪ್ರಧಾನ ಕಾರ್ಯದರ್ಶಿ ಆನಂದ ದೇವಪ್ಪ, ಪತ್ರಕರ್ತರು ಹಾಗೂ ಕುಟುಂಬದವರಿಗೆ ಯಾವುದೇ ರೀತಿಯ ಮಿತಿ ಇಲ್ಲದೆ ಆರೋಗ್ಯ ಸೇವೆ ಕಲ್ಪಿಸಬೇಕು. ಪತ್ರಿಕಾ ಭವನದ ಉನ್ನತೀಕರಣಕ್ಕೆ ನೆರವು ನೀಡಬೇಕು ಎಂದು ಹಕ್ಕು ಮಂಡಿಸಿದರು.</p>.<p>ಮುಖ್ಯಮಂತ್ರಿಗಳ ಮಾಧ್ಯಮ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿ ಗಿರೀಶ್ ಕೋಟೆ, ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಜಿ., ಕೆಯುಡಬ್ಲ್ಯೂಜೆ ಉಪಾಧ್ಯಕ್ಷ ಭವಾನಿ ಸಿಂಗ್ ಠಾಕೂರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಪತ್ರಿಕಾ ದಿನಾಚರಣೆ ಸಮಿತಿ ಸಂಚಾಲಕ ಮಲ್ಲಿಕಾರ್ಜುನ ಬಿರಾದಾರ ಸ್ವಾಗತಿಸಿದರು. ಪತ್ರಕರ್ತರಾದ ಅಪ್ಪಾರಾವ್ ಸೌದಿ, ಮಾಳಪ್ಪ ಅಡಸಾರೆ ನಿರೂಪಿಸಿದರು. ಜಿಲ್ಲೆಯ ಪತ್ರಕರ್ತರು ಭಾಗವಹಿಸಿದ್ದರು.</p>.<p> ‘ಸುಳ್ಳು ಜೊಳ್ಳು ಪತ್ರಕರ್ತರ ಹೊರಹಾಕಿ’ ‘ಸುಳ್ಳು ಜೊಳ್ಳು ಹಾಗೂ ಬ್ಲ್ಯಾಕ್ಮೇಲ್ ಮಾಡುವ ಪತ್ರಕರ್ತರನ್ನು ಪತ್ರಕರ್ತರೇ ಹೊರಹಾಕಬೇಕು. ಏಕೆಂದರೆ ಬೇರೆಯವರಿಗೆ ಆ ಕೆಲಸ ಮಾಡಲು ಆಗುವುದಿಲ್ಲ’ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಪತ್ರಕರ್ತರಿಗಾಗಿಯೇ ಆರೋಗ್ಯ ಯೋಜನೆ ಜಾರಿಗೊಳಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಬರುವ 15 ದಿನಗಳಲ್ಲಿ ವಿತರಣೆ ಆಗಬಹುದು ಎಂದರು.</p>.<p> ‘ಸೆಲೆಬ್ರಿಟಿ ಶ್ರೀಮಂತರ ಪರ’ ‘ಜನರ ಸಮಸ್ಯೆಗಳನ್ನು ಸರ್ಕಾರಕ್ಕೆ ತರುವ ತಮ್ಮ ಜವಾಬ್ದಾರಿಯನ್ನು ಮರೆತ ಮಾಧ್ಯಮಗಳು ಸೆಲೆಬ್ರಿಟಿಗಳು ಮತ್ತು ಕಾರ್ಪೋರೇಟ್ ಶ್ರೀಮಂತರ ಬಗ್ಗೆ ತೋರಿಸುವ ಫ್ಯಾಷನ್ ಗೆ ಜಾರಿವೆ’ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ಪತ್ರಕರ್ತರು ಕೇಳಿಸಿಕೊಳ್ಳುವ ಕುತೂಹಲ ಕಳೆದುಕೊಂಡಿದ್ದಾರೆ. ಸತ್ಯ ಸುಳ್ಳನ್ನು ಸರಿಯಾಗಿ ಗ್ರಹಿಸುವ ವ್ಯವದಾನ ಕಳೆದು ಹೋಗಿದೆ. ಗುಣಮಟ್ಟದ ಪತ್ರಿಕೋದ್ಯಮ ಇಲ್ಲವಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>