<p><strong>ಬೀದರ್</strong>: ‘ಹರಿದಾಸರು ಜ್ಞಾನದ ಮೂಲಕ ಸಮಾಜದಲ್ಲಿನ ನ್ಯೂನತೆ ಮತ್ತು ಅಂಧಕಾರವನ್ನು ಹೋಗಲಾಡಿಸಿ, ಭಕ್ತಿರಸವನ್ನು ಚಿಮ್ಮಿಸಿ, ಸಾಮಾನ್ಯ ಸಾಧಕನ ಜೀವನ ಸಮೃದ್ಧಗೊಳಿಸಲು ಶ್ರಮಿಸಿದ್ದಾರೆ’ ಎಂದು ಬಿ.ವಿ. ಭೂಮರಡ್ಡಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಶಿವರಾಜ ಜಿ. ಮಠ ತಿಳಿಸಿದರು.</p>.<p>ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನಿಂದ ನಗರದ ಚಿಕ್ಕಮಣಿ ಡಿ. ದೇವರಾಜ ಅರಸು ಪ್ರೌಢ ಶಾಲೆಯಲ್ಲಿ ಶನಿವಾರ ಪುರಂದರದಾಸರ ಆರಾಧನೆ ಅಂಗವಾಗಿ ಹಮ್ಮಿಕೊಂಡಿದ್ದ ‘ದಾಸರೆಂದರೆ ಪುರಂದರದಾಸರಯ್ಯ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಲೌಕಿಕ ಹಿತದ ಜೊತೆಗೆ ಪಾರಮಾರ್ಥಿಕ ಸತ್ಯದ ಕಡೆಗೆ ಸಾಮಾನ್ಯರ ಮನಸ್ಸು ಆಕರ್ಷಿಸಿದ ಹರಿದಾಸರು, ಜಗದ ಏಳಿಗೆಯನ್ನು ಕನ್ನಡದ ಸಿರಿಗಂಧದ ಕೀರ್ತನೆ ಸಾಹಿತ್ಯದ ಮೂಲಕ ಮಾಡಿದ್ದಾರೆ ಎಂದರು.</p>.<p>ಪ್ರೊ. ಬಸವರಾಜ ಬಿರಾದಾರ ಮಾತನಾಡಿ, ಪುರಂದರದಾಸರು ಜನಪದ ಹಾಗೂ ಮಾನವ ಜನಾಂಗದ ಕವಿಗಳು. ಅವರು ತಮ್ಮ ಬಾಳಿನುದ್ದಕ್ಕೂ ಅನುಭವಿಸಿದ್ದನ್ನು ಪ್ರಾಮಾಣಿಕವಾಗಿ ಕೀರ್ತನೆಗಳ ಮೂಲಕ ಹೇಳಿದ್ದಾರೆ. ಡಂಭಾಚಾರ, ಕಂದಾಚಾರ, ಅಪನಂಬಿಕೆಗಳು ಹೋಗಲಾಡಿಸುವ ಶಕ್ತಿಯುತವಾದ ಜೀವನಮೌಲ್ಯಗಳನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ತಿಳಿಸಿದರು.</p>.<p>ಮುಖ್ಯಶಿಕ್ಷಕ ವಿಜಯಕುಮಾರ ಪಾಟೀಲ, ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ರವೀಂದ್ರ ಲಂಜವಾಡಕರ, ಮೆಹಬೂಬ್ ಉಸ್ತಾದ್, ಪ್ರಕಾಶ ಬಿರಾದಾರ, ಮೊಹಮ್ಮದ್ ಆರೀಫ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಹರಿದಾಸರು ಜ್ಞಾನದ ಮೂಲಕ ಸಮಾಜದಲ್ಲಿನ ನ್ಯೂನತೆ ಮತ್ತು ಅಂಧಕಾರವನ್ನು ಹೋಗಲಾಡಿಸಿ, ಭಕ್ತಿರಸವನ್ನು ಚಿಮ್ಮಿಸಿ, ಸಾಮಾನ್ಯ ಸಾಧಕನ ಜೀವನ ಸಮೃದ್ಧಗೊಳಿಸಲು ಶ್ರಮಿಸಿದ್ದಾರೆ’ ಎಂದು ಬಿ.ವಿ. ಭೂಮರಡ್ಡಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಶಿವರಾಜ ಜಿ. ಮಠ ತಿಳಿಸಿದರು.</p>.<p>ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನಿಂದ ನಗರದ ಚಿಕ್ಕಮಣಿ ಡಿ. ದೇವರಾಜ ಅರಸು ಪ್ರೌಢ ಶಾಲೆಯಲ್ಲಿ ಶನಿವಾರ ಪುರಂದರದಾಸರ ಆರಾಧನೆ ಅಂಗವಾಗಿ ಹಮ್ಮಿಕೊಂಡಿದ್ದ ‘ದಾಸರೆಂದರೆ ಪುರಂದರದಾಸರಯ್ಯ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಲೌಕಿಕ ಹಿತದ ಜೊತೆಗೆ ಪಾರಮಾರ್ಥಿಕ ಸತ್ಯದ ಕಡೆಗೆ ಸಾಮಾನ್ಯರ ಮನಸ್ಸು ಆಕರ್ಷಿಸಿದ ಹರಿದಾಸರು, ಜಗದ ಏಳಿಗೆಯನ್ನು ಕನ್ನಡದ ಸಿರಿಗಂಧದ ಕೀರ್ತನೆ ಸಾಹಿತ್ಯದ ಮೂಲಕ ಮಾಡಿದ್ದಾರೆ ಎಂದರು.</p>.<p>ಪ್ರೊ. ಬಸವರಾಜ ಬಿರಾದಾರ ಮಾತನಾಡಿ, ಪುರಂದರದಾಸರು ಜನಪದ ಹಾಗೂ ಮಾನವ ಜನಾಂಗದ ಕವಿಗಳು. ಅವರು ತಮ್ಮ ಬಾಳಿನುದ್ದಕ್ಕೂ ಅನುಭವಿಸಿದ್ದನ್ನು ಪ್ರಾಮಾಣಿಕವಾಗಿ ಕೀರ್ತನೆಗಳ ಮೂಲಕ ಹೇಳಿದ್ದಾರೆ. ಡಂಭಾಚಾರ, ಕಂದಾಚಾರ, ಅಪನಂಬಿಕೆಗಳು ಹೋಗಲಾಡಿಸುವ ಶಕ್ತಿಯುತವಾದ ಜೀವನಮೌಲ್ಯಗಳನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ತಿಳಿಸಿದರು.</p>.<p>ಮುಖ್ಯಶಿಕ್ಷಕ ವಿಜಯಕುಮಾರ ಪಾಟೀಲ, ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ರವೀಂದ್ರ ಲಂಜವಾಡಕರ, ಮೆಹಬೂಬ್ ಉಸ್ತಾದ್, ಪ್ರಕಾಶ ಬಿರಾದಾರ, ಮೊಹಮ್ಮದ್ ಆರೀಫ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>