<p><strong>ಬೀದರ್:</strong> ನಗರದ ವಿವೇಕಾನಂದ ಕಾಲೊನಿಯಲ್ಲಿ ಭಾನುವಾರ ಗಾನಯೋಗಿ ಪಂಚಾಕ್ಷರಿ ಗವಾಯಿ ಸೇವಾ ಸಂಘದಿಂದ ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ 110ನೇ ಜಯಂತಿ ಆಚರಿಸಲಾಯಿತು.</p>.<p>ಸಂಘದ ಗೌರವ ಅಧ್ಯಕ್ಷ ಪ್ರೊ.ಎಸ್.ವಿ.ಕಲ್ಮಠ ಮಾತನಾಡಿ, ಅಂಧತ್ವವನ್ನು ಮೆಟ್ಟಿನಿಂತು, ಅಸಾಧ್ಯವಾದುದನ್ನು ಸಾಧ್ಯವಾಗಿಸಿದವರು ಪುಟ್ಟರಾಜ ಕವಿ ಗವಾಯಿಗಳು. ಅಂಧರು, ಅನಾಥರು, ದೀನ ದಲಿತರಿಗೆ ಸಂಗೀತ ವಿದ್ಯೆ ಕಲಿಸಿ ಅವರಿಗೆ ಸ್ವತಂತ್ರವಾಗಿ ಬದುಕಲು ಕಲಿಸಿಕೊಟ್ಟ ಮಹಾಪುರುಷರು ಎಂದು ವರ್ಣಿಸಿದರು.</p>.<p>ಗವಾಯಿಗಳ ವ್ಯಕ್ತಿತ್ವ ಅಸಾಧಾರಣವಾದುದು. ಅವರು ಹಿಂದಿ ಭಾಷೆಯಲ್ಲಿ ರಚಿಸಿದ ಬಸವ ಪುರಾಣಕ್ಕೆ ಮಾಜಿ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಪ್ರಭಾವಿತರಾಗಿದ್ದರು. ಗವಾಯಿಗಳನ್ನು ನವದೆಹಲಿಗೆ ಕರೆಸಿ ಸನ್ಮಾನಿಸಿದ್ದರು ಎಂದು ನೆನಪಿಸಿದರು.</p>.<p>ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಬಾಳೆ, ಕಾರ್ಯದರ್ಶಿ ದಾನಿ ಬಾಬುರಾವ, ಬಿ.ಎಸ್.ಬಿರಾದಾರ, ಧನರಾಜ ಸ್ವಾಮಿ, ಸುರೇಶ ಚಿಟಗೊಪಕರ್, ಮುರಳಿ ನಾಶಿ, ಪಂಚಾಕ್ಷರಿ ಕಲ್ಮಠ, ಸತೀಶ ಸ್ವಾಮಿ, ರಾಜೇಶ್ವರಿ, ಶಾಂಭವಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರದ ವಿವೇಕಾನಂದ ಕಾಲೊನಿಯಲ್ಲಿ ಭಾನುವಾರ ಗಾನಯೋಗಿ ಪಂಚಾಕ್ಷರಿ ಗವಾಯಿ ಸೇವಾ ಸಂಘದಿಂದ ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ 110ನೇ ಜಯಂತಿ ಆಚರಿಸಲಾಯಿತು.</p>.<p>ಸಂಘದ ಗೌರವ ಅಧ್ಯಕ್ಷ ಪ್ರೊ.ಎಸ್.ವಿ.ಕಲ್ಮಠ ಮಾತನಾಡಿ, ಅಂಧತ್ವವನ್ನು ಮೆಟ್ಟಿನಿಂತು, ಅಸಾಧ್ಯವಾದುದನ್ನು ಸಾಧ್ಯವಾಗಿಸಿದವರು ಪುಟ್ಟರಾಜ ಕವಿ ಗವಾಯಿಗಳು. ಅಂಧರು, ಅನಾಥರು, ದೀನ ದಲಿತರಿಗೆ ಸಂಗೀತ ವಿದ್ಯೆ ಕಲಿಸಿ ಅವರಿಗೆ ಸ್ವತಂತ್ರವಾಗಿ ಬದುಕಲು ಕಲಿಸಿಕೊಟ್ಟ ಮಹಾಪುರುಷರು ಎಂದು ವರ್ಣಿಸಿದರು.</p>.<p>ಗವಾಯಿಗಳ ವ್ಯಕ್ತಿತ್ವ ಅಸಾಧಾರಣವಾದುದು. ಅವರು ಹಿಂದಿ ಭಾಷೆಯಲ್ಲಿ ರಚಿಸಿದ ಬಸವ ಪುರಾಣಕ್ಕೆ ಮಾಜಿ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಪ್ರಭಾವಿತರಾಗಿದ್ದರು. ಗವಾಯಿಗಳನ್ನು ನವದೆಹಲಿಗೆ ಕರೆಸಿ ಸನ್ಮಾನಿಸಿದ್ದರು ಎಂದು ನೆನಪಿಸಿದರು.</p>.<p>ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಬಾಳೆ, ಕಾರ್ಯದರ್ಶಿ ದಾನಿ ಬಾಬುರಾವ, ಬಿ.ಎಸ್.ಬಿರಾದಾರ, ಧನರಾಜ ಸ್ವಾಮಿ, ಸುರೇಶ ಚಿಟಗೊಪಕರ್, ಮುರಳಿ ನಾಶಿ, ಪಂಚಾಕ್ಷರಿ ಕಲ್ಮಠ, ಸತೀಶ ಸ್ವಾಮಿ, ರಾಜೇಶ್ವರಿ, ಶಾಂಭವಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>