‘ಬೀದಿಬದಿ ವ್ಯಾಪಾರಿಗಳು ಹಾಗೂ ತಳ್ಳು ಗಾಡಿ ವ್ಯಾಪಾರಿಗಳಲ್ಲಿ ಕೆಲವರು ಅಲ್ಲಲ್ಲಿ ಕಾಯಂ ಶೆಡ್ ನಿರ್ಮಿಸಿದ್ದಾರೆ. ಇವುಗಳಿಂದ ನಡೆದುಕೊಂಡು ಹೋಗುವವರು ಕಷ್ಟ ಅನುಭವಿಸುತ್ತಿದ್ದಾರೆ. ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಅಪಘಾತಗಳು ಸಹ ಸಂಭವಿಸುತ್ತಿವೆ. ಆದ್ದರಿಂದ ಪಾದಚಾರಿ ಮಾರ್ಗದಲ್ಲಿನ ಮತ್ತು ಇತರೆಡೆಯ ಅತಿಕ್ರಮಣವನ್ನು ಶೀಘ್ರದಲ್ಲಿ ತೆರವುಗೊಳಿಸಿ ಅಲ್ಲಿನ ಸಾಮಾನುಗಳನ್ನು ಅವರವರು ತೆಗೆದುಕೊಂಡು ಹೋಗಬೇಕು ಎಂದು ಈಗಾಗಲೇ ಸೂಚಿಸಲಾಗಿದೆ’ ಎಂದರು.